AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?

Virata Parvam: ದೊಡ್ಡ ಅಭಿಮಾನಿ ಬಳಗ ಹೊಂದಿದ್ದರೂ ಕೂಡ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕುಂಟುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಚಿತ್ರತಂಡ ಪತ್ತೆ ಹಚ್ಚಬೇಕಿದೆ.

Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
ಸಾಯಿ ಪಲ್ಲವಿ
TV9 Web
| Edited By: |

Updated on:Jun 20, 2022 | 8:56 AM

Share

ತೆಲುಗಿನ ‘ವಿರಾಟ ಪರ್ವಂ’ (Virata Parvam) ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡಲಿದೆ ಎಂದೇ ಊಹಿಸಲಾಗಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಜೂನ್​ 17ರಂದು ಈ ಸಿನಿಮಾ ಬಿಡುಗಡೆ ಆಯಿತು. ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ (Rana Daggubati) ಈ ಚಿತ್ರದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಟಾಲಿವುಡ್​ನಲ್ಲಿ ಸ್ಟಾರ್​ ಕಲಾವಿದರಾದ ಇವರಿಬ್ಬರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ‘ವಿರಾಟ ಪರ್ವಂ’ ಸಿನಿಮಾ ವಿಫಲವಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಈ ಚಿತ್ರಕ್ಕೆ ಗೆಲುವು ಸಿಕ್ಕಿಲ್ಲ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೆಲ್ಲದಕ್ಕೂ ಸಾಯಿ ಪಲ್ಲವಿ (Sai Pallavi) ಅವರ ಹೇಳಿಕೆಯಿಂದ ಆದ ವಿವಾದವೇ ಕಾರಣ ಇರಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸಿನಿಮಾ ಎಂದರೆ ಒಂದಷ್ಟು ಸಂಖ್ಯೆಯ ಪ್ರೇಕ್ಷಕರು ಖಂಡಿತವಾಗಿಯೂ ಚಿತ್ರಮಂದಿರಕ್ಕೆ ಬರುತ್ತಾರೆ. ಈ ಹಿಂದೆ ತೆರೆಕಂಡ ‘ಲವ್​ ಸ್ಟೋರಿ’ ಸಿನಿಮಾ ಹಿಟ್​ ಆಗಿತ್ತು. ಆದರೆ ಈ ಬಾರಿ ‘ವಿರಾಟ ಪರ್ವಂ’ ನೋಡಲು ಜನರು ಯಾಕೋ ಹಿಂದೇಟು ಹಾಕುತ್ತಿದ್ದಾರೆ. ನಟ ರಾಣಾ ದಗ್ಗುಬಾಟಿ ಅವರಿಗೂ ಇದರಿಂದ ಹಿನ್ನಡೆ ಆಗಿದೆ. ಹೈದರಾಬಾದ್​ನಲ್ಲಿ ಬಹುತೇಕ ಶೋಗಳು ಖಾಲಿ ಹೊಡೆಯುತ್ತಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಈ ಸಿನಿಮಾ ಹೀನಾಯವಾಗಿ ಸೋತಂತೆ ಆಗುತ್ತದೆ.

ನಡೆಯಲಿಲ್ಲ ‘ಲೇಡಿ ಪವರ್​ ಸ್ಟಾರ್’​ ಮ್ಯಾಜಿಕ್​:

ಇದನ್ನೂ ಓದಿ
Image
Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
Image
Sai Pallavi: ಪಾತ್ರಕ್ಕಾಗಿ ಸಾಯಿ ಪಲ್ಲವಿ 2 ದಿನ ಉಪವಾಸ; ಇವರೇ ನಿಜವಾದ ನ್ಯಾಷನಲ್​ ಕ್ರಶ್​ ಎಂದ ಫ್ಯಾನ್ಸ್​
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

ಸಾಯಿ ಪಲ್ಲವಿ ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ಆ ಕಾರಣಕ್ಕಾಗಿ ಅವರನ್ನು ‘ಲೇಡಿ ಪವರ್​ ಸ್ಟಾರ್​’ ಎಂದು ಕರೆಯಲಾಗುತ್ತಿದೆ. ಮುಂಬರುವ ಸಿನಿಮಾಗಳ ಟೈಟಲ್​ ಕಾರ್ಡ್​ನಲ್ಲಿಯೂ ಅವರ ಹೆಸರಿನ ಜೊತೆ ಈ ಬಿರುದು ಇರಲಿದೆ ಎನ್ನಲಾಗುತ್ತಿದೆ. ಅಷ್ಟೆಲ್ಲಾ ಅಭಿಮಾನಿಗಳನ್ನು ಹೊಂದಿದ್ದರೂ ಕೂಡ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕುಂಟುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಚಿತ್ರತಂಡ ಪತ್ತೆ ಹಚ್ಚಬೇಕಿದೆ.

ಇದನ್ನೂ ಓದಿ: Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ನೈಜ ಘಟನೆಗಳನ್ನು ಆಧರಿಸಿ ‘ವಿರಾಟ ಪರ್ವಂ’ ಸಿನಿಮಾ ಸಿದ್ಧಗೊಂಡಿದೆ. ನಕ್ಸಲ್​ ನಾಯಕನ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸಿದ್ದಾರೆ. ಪ್ರಿಯಾಮಣಿ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇಣು ಉಡುಗುಲ ಅವರ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:55 am, Mon, 20 June 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ