AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?

Virata Parvam: ದೊಡ್ಡ ಅಭಿಮಾನಿ ಬಳಗ ಹೊಂದಿದ್ದರೂ ಕೂಡ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕುಂಟುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಚಿತ್ರತಂಡ ಪತ್ತೆ ಹಚ್ಚಬೇಕಿದೆ.

Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
ಸಾಯಿ ಪಲ್ಲವಿ
TV9 Web
| Updated By: ಮದನ್​ ಕುಮಾರ್​|

Updated on:Jun 20, 2022 | 8:56 AM

Share

ತೆಲುಗಿನ ‘ವಿರಾಟ ಪರ್ವಂ’ (Virata Parvam) ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡಲಿದೆ ಎಂದೇ ಊಹಿಸಲಾಗಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಜೂನ್​ 17ರಂದು ಈ ಸಿನಿಮಾ ಬಿಡುಗಡೆ ಆಯಿತು. ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ (Rana Daggubati) ಈ ಚಿತ್ರದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಟಾಲಿವುಡ್​ನಲ್ಲಿ ಸ್ಟಾರ್​ ಕಲಾವಿದರಾದ ಇವರಿಬ್ಬರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ‘ವಿರಾಟ ಪರ್ವಂ’ ಸಿನಿಮಾ ವಿಫಲವಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಈ ಚಿತ್ರಕ್ಕೆ ಗೆಲುವು ಸಿಕ್ಕಿಲ್ಲ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೆಲ್ಲದಕ್ಕೂ ಸಾಯಿ ಪಲ್ಲವಿ (Sai Pallavi) ಅವರ ಹೇಳಿಕೆಯಿಂದ ಆದ ವಿವಾದವೇ ಕಾರಣ ಇರಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸಿನಿಮಾ ಎಂದರೆ ಒಂದಷ್ಟು ಸಂಖ್ಯೆಯ ಪ್ರೇಕ್ಷಕರು ಖಂಡಿತವಾಗಿಯೂ ಚಿತ್ರಮಂದಿರಕ್ಕೆ ಬರುತ್ತಾರೆ. ಈ ಹಿಂದೆ ತೆರೆಕಂಡ ‘ಲವ್​ ಸ್ಟೋರಿ’ ಸಿನಿಮಾ ಹಿಟ್​ ಆಗಿತ್ತು. ಆದರೆ ಈ ಬಾರಿ ‘ವಿರಾಟ ಪರ್ವಂ’ ನೋಡಲು ಜನರು ಯಾಕೋ ಹಿಂದೇಟು ಹಾಕುತ್ತಿದ್ದಾರೆ. ನಟ ರಾಣಾ ದಗ್ಗುಬಾಟಿ ಅವರಿಗೂ ಇದರಿಂದ ಹಿನ್ನಡೆ ಆಗಿದೆ. ಹೈದರಾಬಾದ್​ನಲ್ಲಿ ಬಹುತೇಕ ಶೋಗಳು ಖಾಲಿ ಹೊಡೆಯುತ್ತಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಈ ಸಿನಿಮಾ ಹೀನಾಯವಾಗಿ ಸೋತಂತೆ ಆಗುತ್ತದೆ.

ನಡೆಯಲಿಲ್ಲ ‘ಲೇಡಿ ಪವರ್​ ಸ್ಟಾರ್’​ ಮ್ಯಾಜಿಕ್​:

ಇದನ್ನೂ ಓದಿ
Image
Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
Image
Sai Pallavi: ಪಾತ್ರಕ್ಕಾಗಿ ಸಾಯಿ ಪಲ್ಲವಿ 2 ದಿನ ಉಪವಾಸ; ಇವರೇ ನಿಜವಾದ ನ್ಯಾಷನಲ್​ ಕ್ರಶ್​ ಎಂದ ಫ್ಯಾನ್ಸ್​
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

ಸಾಯಿ ಪಲ್ಲವಿ ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ಆ ಕಾರಣಕ್ಕಾಗಿ ಅವರನ್ನು ‘ಲೇಡಿ ಪವರ್​ ಸ್ಟಾರ್​’ ಎಂದು ಕರೆಯಲಾಗುತ್ತಿದೆ. ಮುಂಬರುವ ಸಿನಿಮಾಗಳ ಟೈಟಲ್​ ಕಾರ್ಡ್​ನಲ್ಲಿಯೂ ಅವರ ಹೆಸರಿನ ಜೊತೆ ಈ ಬಿರುದು ಇರಲಿದೆ ಎನ್ನಲಾಗುತ್ತಿದೆ. ಅಷ್ಟೆಲ್ಲಾ ಅಭಿಮಾನಿಗಳನ್ನು ಹೊಂದಿದ್ದರೂ ಕೂಡ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕುಂಟುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಚಿತ್ರತಂಡ ಪತ್ತೆ ಹಚ್ಚಬೇಕಿದೆ.

ಇದನ್ನೂ ಓದಿ: Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ನೈಜ ಘಟನೆಗಳನ್ನು ಆಧರಿಸಿ ‘ವಿರಾಟ ಪರ್ವಂ’ ಸಿನಿಮಾ ಸಿದ್ಧಗೊಂಡಿದೆ. ನಕ್ಸಲ್​ ನಾಯಕನ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸಿದ್ದಾರೆ. ಪ್ರಿಯಾಮಣಿ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇಣು ಉಡುಗುಲ ಅವರ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:55 am, Mon, 20 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ