Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?

Virata Parvam: ದೊಡ್ಡ ಅಭಿಮಾನಿ ಬಳಗ ಹೊಂದಿದ್ದರೂ ಕೂಡ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕುಂಟುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಚಿತ್ರತಂಡ ಪತ್ತೆ ಹಚ್ಚಬೇಕಿದೆ.

Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
ಸಾಯಿ ಪಲ್ಲವಿ
Follow us
| Updated By: ಮದನ್​ ಕುಮಾರ್​

Updated on:Jun 20, 2022 | 8:56 AM

ತೆಲುಗಿನ ‘ವಿರಾಟ ಪರ್ವಂ’ (Virata Parvam) ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡಲಿದೆ ಎಂದೇ ಊಹಿಸಲಾಗಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಜೂನ್​ 17ರಂದು ಈ ಸಿನಿಮಾ ಬಿಡುಗಡೆ ಆಯಿತು. ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ (Rana Daggubati) ಈ ಚಿತ್ರದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಟಾಲಿವುಡ್​ನಲ್ಲಿ ಸ್ಟಾರ್​ ಕಲಾವಿದರಾದ ಇವರಿಬ್ಬರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ‘ವಿರಾಟ ಪರ್ವಂ’ ಸಿನಿಮಾ ವಿಫಲವಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಈ ಚಿತ್ರಕ್ಕೆ ಗೆಲುವು ಸಿಕ್ಕಿಲ್ಲ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೆಲ್ಲದಕ್ಕೂ ಸಾಯಿ ಪಲ್ಲವಿ (Sai Pallavi) ಅವರ ಹೇಳಿಕೆಯಿಂದ ಆದ ವಿವಾದವೇ ಕಾರಣ ಇರಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸಿನಿಮಾ ಎಂದರೆ ಒಂದಷ್ಟು ಸಂಖ್ಯೆಯ ಪ್ರೇಕ್ಷಕರು ಖಂಡಿತವಾಗಿಯೂ ಚಿತ್ರಮಂದಿರಕ್ಕೆ ಬರುತ್ತಾರೆ. ಈ ಹಿಂದೆ ತೆರೆಕಂಡ ‘ಲವ್​ ಸ್ಟೋರಿ’ ಸಿನಿಮಾ ಹಿಟ್​ ಆಗಿತ್ತು. ಆದರೆ ಈ ಬಾರಿ ‘ವಿರಾಟ ಪರ್ವಂ’ ನೋಡಲು ಜನರು ಯಾಕೋ ಹಿಂದೇಟು ಹಾಕುತ್ತಿದ್ದಾರೆ. ನಟ ರಾಣಾ ದಗ್ಗುಬಾಟಿ ಅವರಿಗೂ ಇದರಿಂದ ಹಿನ್ನಡೆ ಆಗಿದೆ. ಹೈದರಾಬಾದ್​ನಲ್ಲಿ ಬಹುತೇಕ ಶೋಗಳು ಖಾಲಿ ಹೊಡೆಯುತ್ತಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಈ ಸಿನಿಮಾ ಹೀನಾಯವಾಗಿ ಸೋತಂತೆ ಆಗುತ್ತದೆ.

ನಡೆಯಲಿಲ್ಲ ‘ಲೇಡಿ ಪವರ್​ ಸ್ಟಾರ್’​ ಮ್ಯಾಜಿಕ್​:

ಇದನ್ನೂ ಓದಿ
Image
Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
Image
Sai Pallavi: ಪಾತ್ರಕ್ಕಾಗಿ ಸಾಯಿ ಪಲ್ಲವಿ 2 ದಿನ ಉಪವಾಸ; ಇವರೇ ನಿಜವಾದ ನ್ಯಾಷನಲ್​ ಕ್ರಶ್​ ಎಂದ ಫ್ಯಾನ್ಸ್​
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

ಸಾಯಿ ಪಲ್ಲವಿ ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ಆ ಕಾರಣಕ್ಕಾಗಿ ಅವರನ್ನು ‘ಲೇಡಿ ಪವರ್​ ಸ್ಟಾರ್​’ ಎಂದು ಕರೆಯಲಾಗುತ್ತಿದೆ. ಮುಂಬರುವ ಸಿನಿಮಾಗಳ ಟೈಟಲ್​ ಕಾರ್ಡ್​ನಲ್ಲಿಯೂ ಅವರ ಹೆಸರಿನ ಜೊತೆ ಈ ಬಿರುದು ಇರಲಿದೆ ಎನ್ನಲಾಗುತ್ತಿದೆ. ಅಷ್ಟೆಲ್ಲಾ ಅಭಿಮಾನಿಗಳನ್ನು ಹೊಂದಿದ್ದರೂ ಕೂಡ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕುಂಟುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಚಿತ್ರತಂಡ ಪತ್ತೆ ಹಚ್ಚಬೇಕಿದೆ.

ಇದನ್ನೂ ಓದಿ: Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ನೈಜ ಘಟನೆಗಳನ್ನು ಆಧರಿಸಿ ‘ವಿರಾಟ ಪರ್ವಂ’ ಸಿನಿಮಾ ಸಿದ್ಧಗೊಂಡಿದೆ. ನಕ್ಸಲ್​ ನಾಯಕನ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸಿದ್ದಾರೆ. ಪ್ರಿಯಾಮಣಿ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇಣು ಉಡುಗುಲ ಅವರ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:55 am, Mon, 20 June 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ