AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ನಟಿಸಬೇಕಿತ್ತು ಸಾಯಿ ಪಲ್ಲವಿ; ರಿಜೆಕ್ಟ್ ಆಗಲು ಕಾರಣ ಆಯ್ತು ಸ್ಲೀವ್​ಲೆಸ್ ಡ್ರೆಸ್ ವಿಚಾರ

ಸಾಯಿ ಪಲ್ಲವಿ ಅವರು 'ಅರ್ಜುನ್ ರೆಡ್ಡಿ' ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎಂಬುದು ಈಗ ತಿಳಿದುಬಂದಿದೆ. ಚಿತ್ರದಲ್ಲಿರುವ ಬೋಲ್ಡ್ ದೃಶ್ಯಗಳನ್ನು ಮಾಡಲು ಅವರು ಇಷ್ಟಪಡದ ಕಾರಣ ಇದು ಸಾಧ್ಯವಾಗಿಲ್ಲ. ನಿರ್ದೇಶಕ ಸಂದೀಪ್ ರೆಡ್ಡಿ ವಂಗ್ ಅವರು ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರ ನಟನೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರೂ, ಅವರ ನಿರ್ಧಾರವನ್ನು ಅವರು ಗೌರವಿಸಿದ್ದಾರೆ.

‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ನಟಿಸಬೇಕಿತ್ತು ಸಾಯಿ ಪಲ್ಲವಿ; ರಿಜೆಕ್ಟ್ ಆಗಲು ಕಾರಣ ಆಯ್ತು ಸ್ಲೀವ್​ಲೆಸ್ ಡ್ರೆಸ್ ವಿಚಾರ
ಸಾಯಿ ಪಲ್ಲವಿ-ಸಂದೀಪ್ ರೆಡ್ಡಿ ವಂಗ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 03, 2025 | 2:27 PM

Share

ನಟಿ ಸಾಯಿ ಪಲ್ಲವಿ ಅವರು ಯಾವುದೇ ಸಿನಿಮಾ ಮಾಡಿದರೂ ಗಮನ ಸೆಳೆಯುತ್ತಾರೆ. ಅವರು ಒಪ್ಪಿಕೊಂಡು ಮಾಡುವ ಚಿತ್ರಗಳಿಗೆ ಫಿದಾ ಆಗದವರೇ ಇಲ್ಲ. ಅವರು ಗ್ಲಾಮರ್ ಲೋಕಕ್ಕೆ ಕಾಲಿಟ್ಟ ಹೊರತಾಗಿಯೂ ಹೆಚ್ಚು ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಇಷ್ಟಪಡುವುದೇ ಇಲ್ಲ. ವಿಶೇಷ ಎಂದರೆ ಅವರು ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ, ಅವರ ಬಳಿ ಚರ್ಚೆ ಮಾಡಲೇ ಇಲ್ಲ ಸಂದೀಪ್ ರೆಡ್ಡಿ ವಂಗ. ಇದಕ್ಕೆ ಕಾರಣ ಇಲ್ಲಿದೆ.

‘ಅರ್ಜುನ್ ರೆಡ್ಡಿ’ ಸಿನಿಮಾ ನೋಡಿದವರಿಗೆ ಗೊತ್ತಿರುತ್ತದೆ. ಈ ಚಿತ್ರದಲ್ಲಿ ಹಲವು ಬೋಲ್ಡ್ ದೃಶ್ಯಗಳು ಇವೆ. ಈ ಚಿತ್ರದ ನಟಿ ಶಾಲಿನಿ ಪಾಂಡೆ ಹಾಗೂ ನಾಯಕ ವಿಜಯ್ ದೇವರಕೊಂಡ ಮಧ್ಯೆ ಲಿಪ್ ಲಾಕ್ ದೃಶ್ಯಗಳು ಕೂಡ ಇವೆ. ಈ ರೀತಿಯ ದೃಶ್ಯಗಳನ್ನು ಮಾಡಲು ಸಾಯಿ ಪಲ್ಲವಿ ಯಾವಾಗಲೂ ರೆಡಿ ಇಲ್ಲ. ಎಷ್ಟೇ ಕೋಟಿ ಕೊಡುತ್ತೇನೆ ಎಂದರೂ ಅವರು ಒಪ್ಪಲ್ಲ. ಇದು ಸಂದೀಪ್ ರೆಡ್ಡಿ ವಂಗಗೆ ಮನವರಿಕೆ ಆಗಿತ್ತು. ವೇದಿಕೆ ಮೇಲೆ ಈ ಬಗ್ಗೆ ಅವರು ಮಾತನಾಡಿದ್ದರು.

‘ನಿಮ್ಮ ನಟನೆ ನನಗೆ ಇಷ್ಟ. ಪ್ರೇಮಮ್ ಚಿತ್ರದಿಂದ ನೀವು ಇಷ್ಟ. ನಾನು ಅರ್ಜುನ್ ರೆಡ್ಡಿಗೆ ನಟಿ ಹುಡುಕುತ್ತಿದ್ದೆ. ಕೇರಳದ ಒಬ್ಬರು ನನ್ನ ಸಿನಿಮಾ ಕಾಸ್ಟಿಂಗ್​ಗೆ ಕೋ ಆರ್ಡಿನೇಟರ್ ಆಗಿ ಸಿಕ್ಕರು. ಅವರು ನನ್ನ ಬಳಿ ಕಥೆ ಕೇಳಿದರು. ಪ್ರೀತಿಯಲ್ಲಿ ನಾಶವಾದ ವ್ಯಕ್ತಿಯ ಬಗ್ಗೆ ಸಿನಿಮಾ ಮಾಡುತ್ತಿದ್ದೇನೆ. ಇದು ಸಖತ್ ರೊಮ್ಯಾಂಟಿಕ್ ಸಿನಿಮಾ ಕೂಡ ಹೌದು. ರೊಮ್ಯಾಂಟಿಕ್ ದೃಶ್ಯವನ್ನು ಒಂದು ಹಂತ ಮೇಲೆ ತೋರಿಸುತ್ತೇವೆ ಎಂದು ಕೋ ಆರ್ಡಿನೇಟರ್​ಗೆ ಹೇಳಿದೆ’ ಎಂದಿದ್ದಾರೆ ಸಂದೀಪ್.

‘ಸಾಯಿ ಪಲ್ಲವಿ ಅವರನ್ನು ಈ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಮಾಡಬೇಕು ಎಂದುಕೊಂಡಿದ್ದೇನೆ ಎಂದೆ. ಇದಕ್ಕೆ ಕೋ ಆರ್ಡಿನೇಟರ್​ ಪ್ರತಿಕ್ರಿಯಿಸಿದರು. ನೀವು ಅವರನ್ನು ಮರೆತುಬಿಡಿ, ಅವರು ಸ್ಲೀವ್​ಲೆಸ್ ಕೂಡ ಹಾಕಲ್ಲ ಎಂದರು. ಅವಕಾಶಗಳು ಬಂದಂತೆ ಸಾಯಿ ಪಲ್ಲವಿ ಕೂಡ ಬದಲಾಗುತ್ತಾರೆ ಅಂತ ನಾನು ಆಗ ಅಂದುಕೊಂಡಿದ್ದೆ. ಆದರೆ, ಸಾಯಿ ಪಲ್ಲವಿ ಈಗಲೂ ಬದಲಾಗಿಲ್ಲ’ ಎಂದು ಸಂದೀಪ್ ರೆಡ್ಡಿ ವಂಗ ಅವರು ಹೆಮ್ಮೆಯಿಂದ ಮಾತನಾಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ‘ತಾಂಡೇಲ್’ ಸಿನಿಮಾದ ಪ್ರೀ ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿತ್ತು. ಇದರಲ್ಲಿ ಸಂದೀಪ್ ಕೂಡ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ಆಡಿದ ಮಾತು ಇದು ಎನ್ನಲಾಗಿದೆ. ಈ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ.

Published On - 2:26 pm, Mon, 3 February 25

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು