AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ

ನಾಗ ಚೈತನ್ಯ ಮತ್ತು ಅವರ ಪತ್ನಿ ಸಮಂತಾ ಅಕ್ಕಿನೇನಿ ನಡುವೆ ವೈಮನಸ್ಸು ಮೂಡಿದೆ ಎಂಬ ಸುದ್ದಿ ಇದೆ. ಈ ಸಂದರ್ಭದಲ್ಲಿ ಸಾಯಿ ಪಲ್ಲವಿ ನೀಡಿರುವ ಸ್ಪಷ್ಟನೆ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ.

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ
ನಾಗ ಚೈತನ್ಯ, ಸಾಯಿ ಪಲ್ಲವಿ
TV9 Web
| Edited By: |

Updated on: Oct 01, 2021 | 8:47 AM

Share

ನಟಿ ಸಾಯಿ ಪಲ್ಲವಿ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಹಲವು ಕಾರಣಗಳಿಗಾಗಿ ಅವರನ್ನು ಜನರು ಇಷ್ಟಪಡುತ್ತಾರೆ. ಸಿಂಪಲ್ ಆಗಿ ಪಕ್ಕದ್ಮನೆ ಹುಡುಗಿಯಂತೆ ಕಾಣುವ ಅವರು ಯಾವುದೇ ಗ್ಲಾಮರ್​ನ ಹಂಗಿಲ್ಲದೇ ಸೂಪರ್​ ಸ್ಟಾರ್​ ನಟಿಯಾಗಿ ಬೆಳೆದಿದ್ದಾರೆ. ನಟನೆಯ ಮೂಲಕ ಎಲ್ಲರನ್ನೂ ಸೆಳೆದುಕೊಂಡಿದ್ದಾರೆ. ಇನ್ನು, ತಾವು ನಿಭಾಯಿಸುವ ಪಾತ್ರಗಳ ಬಗ್ಗೆ ಅವರು ಕೊಂಚ ಮಡಿವಂತಿಕೆಯನ್ನೂ ಇಟ್ಟುಕೊಂಡಿದ್ದಾರೆ. ನಟರ ಜೊತೆ ಲಿಪ್​ ಲಾಕ್​ ಮಾಡಲು ಸಾಯಿ ಪಲ್ಲವಿ ಸದಾ ಹಿಂಜರಿಯುತ್ತಾರೆ. ಆದರೆ ಇತ್ತೀಚೆಗೆ ರಿಲೀಸ್​ ಆಗಿರುವ ‘ಲವ್​ ಸ್ಟೋರಿ’ ಸಿನಿಮಾದಲ್ಲಿ ನಟ ನಾಗ ಚೈತನ್ಯ ಜೊತೆ ಲಿಪ್​ ಲಾಕ್​ ಮಾಡಿರುವ ದೃಶ್ಯ ಹೈಲೈಟ್​ ಆಗುತ್ತಿದೆ. ಅದರ ಬಗ್ಗೆ ಸಾಯಿ ಪಲ್ಲವಿ ಮಾತನಾಡಿದ್ದಾರೆ.

ಈ ಸಿನಿಮಾ ನೋಡಿದ ಬಳಿಕ ಎಲ್ಲರಿಗೂ ಅನಿಸಿದ್ದು ಏನೆಂದರೆ ಸಾಯಿ ಪಲ್ಲವಿ ಅವರು ತಮ್ಮ ಲಿಪ್​ ಲಾಕ್​ ನಿರ್ಬಂಧವನ್ನು ತೆಗೆದು ಹಾಕಿದ್ದಾರೆ. ಆದರೆ ಅದು ನಿಜವಲ್ಲ. ಆ ಬಗ್ಗೆ ಸ್ವತಃ ಸಾಯಿ ಪಲ್ಲವಿ ಸ್ಪಷ್ಟನೆ ನೀಡಿದ್ದಾರೆ. ಇಂದಿಗೂ ಅವರು ತಮ್ಮ ನಿಯಮಕ್ಕೆ ಬದ್ಧರಾಗಿದ್ದಾರೆ. ‘ನಿಜವಾಗಿಯೂ ಈ ಸಿನಿಮಾದಲ್ಲಿ ನಾನು ನಾಗ ಚೈತನ್ಯಗೆ ಕಿಸ್​ ಮಾಡಿಲ್ಲ. ಅದು ನಿಜ ಎಂಬಂತೆ ಕಾಣುವ ರೀತಿಯಲ್ಲಿ ನಮ್ಮ ಕ್ಯಾಮೆರಾಮ್ಯಾನ್​ ಆ ದೃಶ್ಯವನ್ನು ಸೆರೆ ಹಿಡಿದಿದ್ದಾರೆ ಅಷ್ಟೇ’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ಇನ್ಮುಂದೆ ಕೂಡ ತಾವು ಯಾವುದೇ ಸಿನಿಮಾದಲ್ಲೂ ಲಿಪ್​ ಲಾಕ್​ ದೃಶ್ಯ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

‘ನಾನು ಲಿಪ್​ ಲಾಕ್​ ದೃಶ್ಯಗಳ ವಿರೋಧಿ. ಅದನ್ನು ನಿರ್ದೇಶಕ ಶೇಖರ್​ ಕಮ್ಮುಲ ಅವರಿಗೆ ನಾನು ಮೊದಲೇ ತಿಳಿಸಿದ್ದೆ. ಹಾಗಾಗಿ ಅವರು ನನಗೆ ಈ ವಿಚಾರದಲ್ಲಿ ಎಂದಿಗೂ ತೊಂದರೆ ಕೊಟ್ಟಿಲ್ಲ. ಈ ಸಿನಿಮಾದಲ್ಲಿ ನೀವು ನೋಡುತ್ತಿರುವುದು ನಮ್ಮ ಛಾಯಾಗ್ರಾಹಕರ ಮ್ಯಾಜಿಕ್​. ಪಾತ್ರ ಚೆನ್ನಾಗಿದ್ದರೆ ನಟನೆ ಕೂಡ ಚೆನ್ನಾಗಿ ಮೂಡಿಬರುತ್ತದೆ’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

ಸದ್ಯ ನಾಗ ಚೈತನ್ಯ ಮತ್ತು ಅವರ ಪತ್ನಿ ಸಮಂತಾ ಅಕ್ಕಿನೇನಿ ನಡುವೆ ವೈಮನಸ್ಸು ಮೂಡಿದೆ ಎಂಬ ಸುದ್ದಿ ಇದೆ. ಅವರು ಶೀಘ್ರದಲ್ಲೇ ವಿಚ್ಛೇದನ ಪಡೆಯುತ್ತಾರೆ ಎಂದೂ ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಸಾಯಿ ಪಲ್ಲವಿ ನೀಡಿರುವ ಸ್ಪಷ್ಟನೆ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ. ‘ಲವ್​ ಸ್ಟೋರಿ’ ಚಿತ್ರಕ್ಕೆ ಗೆಲುವು ಸಿಕ್ಕಿದ್ದು, ಕೆಲವೇ ದಿನಗಳ ಹಿಂದೆ ಸಕ್ಸಸ್​ ಮೀಟ್​ ನಡೆಸಲಾಯಿತು.

ಇದನ್ನೂ ಓದಿ:

ಸಮಂತಾ ಡಿವೋರ್ಸ್​ ವದಂತಿ ಬೆನ್ನಲ್ಲೇ ನಾಗ ಚೈತನ್ಯ-ಸಾಯಿ ಪಲ್ಲವಿ ಲವ್​ ಸ್ಟೋರಿ ಮೇಲೆ ಕಣ್ಣಿಟ್ಟ ಸಿನಿಪ್ರಿಯರು

ನಾಗ ಚೈತನ್ಯ-ಸಾಯಿ ಪಲ್ಲವಿ ಪಾಲಿಗೆ ಇದು ಬಿಗ್​ ಡೇ; ಈಗಲಾದರೂ ಬರುತ್ತಾರಾ ಸಮಂತಾ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?