AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ‘ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುವ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ ಎರಡೂ ಒಂದೇ’: ಸಾಯಿ ಪಲ್ಲವಿ

Sai Pallavi | Kashmiri Pandits: ‘ನಾನು ಯಾವ ಪಂಥಕ್ಕೂ ಸೇರುವವಳಲ್ಲ’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ಜೊತೆಗೆ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ಮಾತನಾಡಲು ಕೂಡ ಅವರು ಹಿಂಜರಿದಿಲ್ಲ.

Sai Pallavi: ‘ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುವ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ ಎರಡೂ ಒಂದೇ’: ಸಾಯಿ ಪಲ್ಲವಿ
ಸಾಯಿ ಪಲ್ಲವಿ
TV9 Web
| Edited By: |

Updated on:Jun 16, 2022 | 8:42 AM

Share

ನಟಿ ಸಾಯಿ ಪಲ್ಲವಿ (Sai Pallavi) ಅವರು ಸಾಧ್ಯವಾದಷ್ಟು ಕಾಂಟ್ರವರ್ಸಿಯಿಂದ ದೂರ ಇರುತ್ತಾರೆ. ಆದರೆ ಈಗ ಅವರು ನೀಡಿದ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದೆ. ಸಾಯಿ ಪಲ್ಲವಿ ನಟಿಸಿರುವ ‘ವಿರಾಟ ಪರ್ವಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಪ್ರಯುಕ್ತ ಅನೇಕ ಕಡೆಗಳಲ್ಲಿ ಅವರು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ‘ಕಾಶ್ಮೀರಿ ಪಂಡಿತರ (Kashmiri Pandits) ಹತ್ಯೆ ಮತ್ತು ಗೋವು ಸಾಗಿಸುತ್ತಿದ್ದ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ (Lynching) ಎರಡೂ ಒಂದೇ’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ಅವರ ಹೇಳಿಕೆ ಬಗ್ಗೆ ಪರ-ವಿರೋಧದ ಚರ್ಚೆ ಶುರುವಾಗಿದೆ. ಟ್ವಿಟರ್​ನಲ್ಲಿ #SaiPallavi ಹ್ಯಾಶ್​ ಟ್ಯಾಗ್​ ಟ್ರೆಂಡ್​ ಕೂಡ ಆಗಿದೆ. ಕೆಲವರು ಸಾಯಿ ಪಲ್ಲವಿಯ ಹೇಳಿಕೆಗೆ ಭೇಷ್​ ಎಂದಿದ್ದಾರೆ. ಇನ್ನೂ ಕೆಲವರು ತೀವ್ರವಾಗಿ ಖಂಡಿಸಿದ್ದಾರೆ.

‘ವಿರಾಟ ಪರ್ವಂ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ನಕ್ಸಲೈಟ್​ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ರಿಯಲ್​ ಲೈಫ್​ನಲ್ಲಿ ನೀವು ಎಡಪಂಥೀಯ ವಿಚಾರಗಳಿಂದ ಪ್ರೇರೇಪಿತರಾಗಿದ್ದೀರಾ’ ಎಂದು ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಈ ರೀತಿ ಉತ್ತರಿಸಿದ್ದಾರೆ. ‘ನಾನು ಯಾವ ಪಂಥಕ್ಕೂ ಸೇರುವವಳಲ್ಲ’ ಎಂದು ಹೇಳಿದ್ದಾರೆ. ಜೊತೆಗೆ, ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ಮಾತನಾಡಲು ಕೂಡ ಅವರು ಹಿಂಜರಿದಿಲ್ಲ.

ಇದನ್ನೂ ಓದಿ: Sai Pallavi: ಮೈ ಕಾಣುವಂತೆ ಬಟ್ಟೆ ಧರಿಸಬಾರದು ಅಂತ ಸಾಯಿ ಪಲ್ಲವಿ ನಿರ್ಧಾರ ಮಾಡಿದ್ದು ಯಾಕೆ? ಸತ್ಯ ಬಾಯ್ಬಿಟ್ಟ ನಟಿ

ಇದನ್ನೂ ಓದಿ
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ
Image
ಚಿತ್ರರಂಗಕ್ಕೆ ಕಾಲಿಟ್ಟ ಸಾಯಿ ಪಲ್ಲವಿ ತಂಗಿ ಪೂಜಾ; ಅಕ್ಕನಂತೆ ಮಿಂಚಲು ಸಾಧ್ಯವೇ?

ಸಾಯಿ ಪಲ್ಲವಿ ಹೇಳಿದ್ದೇನು?

‘ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಹತ್ಯೆ ಮಾಡಲಾಯಿತು ಎಂದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ತೋರಿಸಲಾಗಿದೆ. ಅದನ್ನು ನೀವು ಒಂದು ಧಾರ್ಮಿಕ ಸಂಘರ್ಷ ಎಂದು ನೋಡುವುದಾದರೆ, ಇತ್ತೀಚೆಗೆ ಗೋವು ಸಾಗಿಸುತ್ತಿದ್ದ ಒಬ್ಬ ಮುಸ್ಲಿಂ ಡ್ರೈವರ್​ ಮೇಲೆ ಹಲ್ಲೆ ಮಾಡಲಾಯಿತು ಹಾಗೂ ಜೈ ಶ್ರೀರಾಮ್​ ಎಂದು ಹೇಳುವಂತೆ ಬಲವಂತ ಮಾಡಲಾಯಿತು. ಈ ಎರಡು ಘಟನೆಗಳ ನಡುವೆ ವ್ಯತ್ಯಾಸ ಎಲ್ಲಿದೆ? ನಾವು ಒಳ್ಳೆಯ ಮನುಷ್ಯರಾಗಿರಬೇಕು’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:30 am, Thu, 16 June 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ