AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virata Parvam: ಸಾಯಿ ಪಲ್ಲವಿ ಹೇಳಿಕೆಯಿಂದ ರಾಣಾ ದಗ್ಗುಬಾಟಿಗೆ ಸಂಕಷ್ಟ; ಏನಾಗಲಿದೆ ‘ವಿರಾಟ ಪರ್ವಂ’ ಭವಿಷ್ಯ?

Sai Pallavi | Virata Parvam: ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಸಿನಿಮಾ ಇಂದು (ಜೂನ್​ 17) ರಿಲೀಸ್​ ಆಗುತ್ತಿದೆ. ಚಿತ್ರದ ರಿಲೀಸ್​ ಸಮಯದಲ್ಲೇ ಸಾಯಿ ಪಲ್ಲವಿ ವಿವಾದದಲ್ಲಿ ಸಿಲುಕಿದ್ದಾರೆ.

Virata Parvam: ಸಾಯಿ ಪಲ್ಲವಿ ಹೇಳಿಕೆಯಿಂದ ರಾಣಾ ದಗ್ಗುಬಾಟಿಗೆ ಸಂಕಷ್ಟ; ಏನಾಗಲಿದೆ ‘ವಿರಾಟ ಪರ್ವಂ’ ಭವಿಷ್ಯ?
ರಾಣಾ ದಗ್ಗುಬಾಟಿ, ಸಾಯಿ ಪಲ್ಲವಿ
TV9 Web
| Edited By: |

Updated on: Jun 17, 2022 | 7:15 AM

Share

ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ನಟ-ನಟಿಯರು ಮತ್ತು ಇಡೀ ಚಿತ್ರತಂಡದವರು ಬಹಳ ಎಚ್ಚರಿಕೆಯಿಂದ ಇರಲು ಪ್ರಯತ್ನಿಸುತ್ತಾರೆ. ಯಾಕೆಂದರೆ, ಅಪ್ಪಿ-ತಪ್ಪಿ ಸಿನಿಮಾ ಹೊರತಾಗಿ ಏನಾದರೂ ಬೇರೆ ವಿಚಾರದ ಬಗ್ಗೆ ಹೇಳಿಕೆ ನೀಡಿದರೆ ಕಿರಿಕ್​ ಆಗುವ ಸಾಧ್ಯತೆ ದಟ್ಟವಾಗಿರುತ್ತದೆ. ಒಂದು ವೇಳೆ ವಿವಾದ ಹುಟ್ಟಿಕೊಂಡರೆ ಅದು ಸಿನಿಮಾ ಕಲೆಕ್ಷನ್​ ಮೇಲೆ ಪರಿಣಾಮ ಬೀರುತ್ತದೆ. ಈಗ ನಟಿ ಸಾಯಿ ಪಲ್ಲವಿ (Sai Pallavi) ಅವರಿಗೆ ಅಂಥದ್ದೇ ಪರಿಸ್ಥಿತಿ ಎದುರಾಗಿದೆ. ಸಾಮಾನ್ಯವಾಗಿ ಅವರು ವಿವಾದಗಳಿಂದ ದೂರ ಇರಲು ಬಯಸುತ್ತಾರೆ. ಆದರೂ ಕೂಡ ಈಗ ಅವರು ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ನೀಡಿದ ಹೇಳಿಕೆಯಿಂದ ವಿವಾದ ಹುಟ್ಟಿಕೊಂಡಿದೆ. ಇದು ಅವರ ‘ವಿರಾಟ ಪರ್ವಂ’ (Virata Parvam) ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಪರಿಣಾಮ ಬೀರಬಹುದು. ಈ ಸಿನಿಮಾಗೆ ರಾಣಾ ದಗ್ಗುಬಾಟಿ (Rana Daggubati) ಹೀರೋ. ಹಾಗಾಗಿ ಸಾಯಿ ಪಲ್ಲವಿಯ ಹೇಳಿಕೆಯಿಂದ ಅವರಿಗೂ ಬಿಸಿ ಮುಟ್ಟುವ ಸಾಧ್ಯತೆ ಇದೆ.

ಸಾಯಿ ಪಲ್ಲವಿ ಹೇಳಿಕೆ ಏನು?

‘ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಹತ್ಯೆ ಮಾಡಲಾಯಿತು ಎಂದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ತೋರಿಸಲಾಗಿದೆ. ಅದನ್ನು ನೀವು ಒಂದು ಧಾರ್ಮಿಕ ಸಂಘರ್ಷ ಎಂದು ನೋಡುವುದಾದರೆ, ಇತ್ತೀಚೆಗೆ ಗೋವು ಸಾಗಿಸುತ್ತಿದ್ದ ಒಬ್ಬ ಮುಸ್ಲಿಂ ಡ್ರೈವರ್​ ಮೇಲೆ ಹಲ್ಲೆ ಮಾಡಲಾಯಿತು ಹಾಗೂ ಜೈ ಶ್ರೀರಾಮ್​ ಎಂದು ಹೇಳುವಂತೆ ಬಲವಂತ ಮಾಡಲಾಯಿತು. ಈ ಎರಡು ಘಟನೆಗಳ ನಡುವೆ ವ್ಯತ್ಯಾಸ ಎಲ್ಲಿದೆ? ನಾವು ಒಳ್ಳೆಯ ಮನುಷ್ಯರಾಗಿರಬೇಕು’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ಈ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ
Image
ಚಿತ್ರರಂಗಕ್ಕೆ ಕಾಲಿಟ್ಟ ಸಾಯಿ ಪಲ್ಲವಿ ತಂಗಿ ಪೂಜಾ; ಅಕ್ಕನಂತೆ ಮಿಂಚಲು ಸಾಧ್ಯವೇ?

ಇಂದು (ಜೂನ್​ 17) ‘ವಿರಾಟ ಪರ್ವಂ’ ರಿಲೀಸ್​:

ರಾಣಾ ದಗ್ಗುಬಾಟಿ ನಟಿಸಿರುವ ‘ವಿರಾಟ ಪರ್ವಂ’ ಸಿನಿಮಾ ಇಂದು ರಿಲೀಸ್​ ಆಗುತ್ತಿದೆ. ನಕ್ಸಲೈಟ್​ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಟ್ರೇಲರ್​ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇದೇ ಸಮಯಕ್ಕೆ ಸರಿಯಾಗಿ ಸಾಯಿ ಪಲ್ಲವಿ ಅವರು ಕಾಶ್ಮೀರಿ ಪಂಡಿತರ ಹತ್ಯೆ ಬಗ್ಗೆ ನೀಡಿರುವ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡಿದೆ. ಹಾಗಾಗಿ ಒಂದಷ್ಟು ಜನರು ‘ವಿರಾಟ ಪರ್ವಂ’ ಚಿತ್ರವನ್ನು ಬಹಿಷ್ಕರಿಸುವ ಸಾಧ್ಯತೆ ಇದೆ. ಇದರಿಂದ ರಾಣಾ ದಗ್ಗುಬಾಟಿಗೆ ನಷ್ಟ ಆಗಲಿದೆ.

ಬೆಂಬಲ ನೀಡಿದ ನಟಿ ರಮ್ಯಾ:

ಸಾಯಿ ಪಲ್ಲವಿಯ ಹೇಳಿಕೆ ಕುರಿತು ಪ್ರಕಟ ಆಗಿರುವ ಒಂದು ವರದಿಯನ್ನು ನಟಿ ರಮ್ಯಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಶೋಷಣೆಗೆ ಒಳಗಾದವರನ್ನು ರಕ್ಷಿಸಬೇಕು’ ಎಂದು ಸಾಯಿ ಪಲ್ಲವಿ ಹೇಳಿರುವ ಮಾತನ್ನು ರಮ್ಯಾ ಪುನಃ ಬರೆದುಕೊಂಡಿದ್ದಾರೆ. ಸತ್ಯ ನುಡಿಯುವ ಧೈರ್ಯ ತೋರಿದ್ದಕ್ಕೆ ತಮ್ಮ ಪ್ರಶಂಸೆ ಇದೆ ಎಂಬರ್ಥದಲ್ಲಿ ಅವರು ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ