‘ರಾಮಾಯಣ’ ಸಿನಿಮಾಕ್ಕೆ ಹತ್ತು ಪಟ್ಟು ಹೆಚ್ಚು ಸಂಭಾವನೆ ಪಡೆದ ಸಾಯಿ ಪಲ್ಲವಿ

Ramayana: ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ ಭಾರತದ ಬಹುದೊಡ್ಡ ಸಿನಿಮಾ ಪ್ರಾಜೆಕ್ಟ್ ‘ರಾಮಾಯಣ’ದಲ್ಲಿ ನಟಿಸಲಿದ್ದಾರೆ. ಈ ಸಿನಿಮಾಕ್ಕೆ ಭಾರಿ ಮೊತ್ತದ ಸಂಭಾವನೆಯನ್ನು ನಟಿ ಪಡೆಯಲಿದ್ದಾರೆ.

‘ರಾಮಾಯಣ’ ಸಿನಿಮಾಕ್ಕೆ ಹತ್ತು ಪಟ್ಟು ಹೆಚ್ಚು ಸಂಭಾವನೆ ಪಡೆದ ಸಾಯಿ ಪಲ್ಲವಿ
Follow us
|

Updated on: May 19, 2024 | 6:08 PM

ಭಾರತದ ಅತಿ ದೊಡ್ಡ ಬಜೆಟ್​ನ ಸಿನಿಮಾ ‘ರಾಮಾಯಣ’ (Ramayana) ಸೆಟ್ಟೇರಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದಲ್ಲಿ ರಣ್​ಬೀರ್ ಕಪೂರ್ (Ranbir Kapoor) ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೀತಾಮಾತೆಯ ಪಾತ್ರದಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಸಾಯಿ ಪಲ್ಲವಿ ಸಾಮಾನ್ಯವಾಗಿ ಗಟ್ಟಿ ಪಾತ್ರಗಳಿರುವ ಸಿನಿಮಾಗಳನ್ನಷ್ಟೆ ಒಪ್ಪಿಕೊಳ್ಳುತ್ತಾರೆ. ಆದರೆ ‘ರಾಮಾಯಣ’ ಸಿನಿಮಾದ ಸೀತೆ ಪಾತ್ರ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ್ದಾಗಿರುವ ಕಾರಣ ಈ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಮತ್ತು ಈ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆಯನ್ನು ಸಾಯಿ ಪಲ್ಲವಿ ಪಡೆದಿದ್ದಾರೆ.

ಸಾಯಿ ಪಲ್ಲವಿ ಸಾಮಾನ್ಯವಾಗಿ ಹೊಸ ತಂಡಗಳೊಟ್ಟಿಗೆ ಕೆಲಸ ಮಾಡುತ್ತಾರೆ. ದೊಡ್ಡ ನಿರ್ಮಾಣ ಸಂಸ್ಥೆ, ಸ್ಟಾರ್ ನಟರ ಸಿನಿಮಾಗಳ ಬದಲಾಗಿ ಸಣ್ಣ ತಂಡಗಳು, ಹೊಸ ನಿರ್ಮಾಣ ಸಂಸ್ಥೆಗಳೊಟ್ಟಿಗೆ ಕೆಲಸ ಮಾಡುತ್ತಾರೆ. ಮಹಿಳಾ ಪ್ರಧಾನ ಸಿನಿಮಾಗಳು, ಸಮಾಜಕ್ಕೆ ಸಂದೇಶ ನೀಡುವ ಸಿನಿಮಾಗಳಲ್ಲಿ ಮಾತ್ರವೇ ಸಾಯಿ ಪಲ್ಲವಿ ನಟಿಸುತ್ತಿದ್ದು, ಅಂಥಹಾ ಸಿನಿಮಾಗಳು ಹೆಚ್ಚು ಹಣ ಗಳಿಸುವುದಿಲ್ಲವಾದ್ದರಿಂದ ಸಂಭಾವನೆಯನ್ನು ಕಡಿಮೆಯೇ ತೆಗೆದುಕೊಳ್ಳುತ್ತಾರೆ ಸಾಯಿ ಪಲ್ಲವಿ. ಕೆಲವು ಸಿನಿಮಾಗಳಿಗೆ ಅವರೇ ಸಹ ನಿರ್ಮಾಪಕಿಯೂ ಆಗಿರುತ್ತಾರೆ.

ಇದನ್ನೂ ಓದಿ:ಬರಲಿದೆ ಸಾಯಿ ಪಲ್ಲವಿ ಸ್ಪೆಷಲ್​ ವಿಡಿಯೋ: ಹುಟ್ಟುಹಬ್ಬಕ್ಕೆ ‘ತಂಡೇಲ್​’ ಸಿಹಿ ಸುದ್ದಿ

ಆದರೆ ಈಗ ‘ರಾಮಾಯಣ’ ಸಿನಿಮಾಕ್ಕೆ ಭಾರಿ ಮೊತ್ತದ ಸಂಭಾವನೆಯನ್ನು ನಟಿ ಸಾಯಿ ಪಲ್ಲವಿ ಪಡೆಯುತ್ತಿದ್ದಾರೆ. ತಾವು ಸಾಮಾನ್ಯವಾಗಿ ತೆಗೆದುಕೊಳ್ಳುವ ಸಂಭಾವನೆಗಿಂತಲೂ ಸುಮಾರು 10 ಪಟ್ಟು ಹೆಚ್ಚು ಸಂಭಾವನೆಯನ್ನು ಸಾಯಿ ಪಲ್ಲವಿ ಪಡೆಯಲಿದ್ದಾರೆ. ಸಾಯಿ ಪಲ್ಲವಿ ಸುಮಾರು 50 ಕೋಟಿ ಸಂಭಾವನೆಯನ್ನು ‘ರಾಮಾಯಣ’ ಸಿನಿಮಾಕ್ಕಾಗಿ ಪಡೆಯಲಿದ್ದಾರೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಪ್ರತಿ ಭಾಗಕ್ಕೆ 50 ಕೋಟಿ ಸಂಭಾವನೆ ಸಾಯಿ ಪಲ್ಲವಿ ಅವರಿಗೆ ಸಿಗಲಿದೆ ಎಂದು ಕೆಲವು ಸುದ್ದಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿವೆ.

ಸಾಯಿ ಪಲ್ಲವಿ ಪ್ರಸ್ತುತ ‘ಅಮರನ್’ ಹೆಸರಿನ ಸಿನಿಮಾದಲ್ಲಿ ಶಿವಕಾರ್ತಿಕೇಯ ಜೊತೆ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕಮಲ್ ಹಾಸನ್ ಬಂಡವಾಳ ಹೂಡಿದ್ದಾರೆ ಎನ್ನಲಾಗುತ್ತಿದೆ. ತೆಲುಗಿನಲ್ಲಿ ‘ತಂಡೇಲ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ತಂಡೇಲ್’ ಸಿನಿಮಾನಲ್ಲಿ ಅಕ್ಕಿನೇನಿ ನಾಗ ಚೈತನ್ಯ ನಾಯಕ. ಇದು ಮೀನುಗಾರರ ಕುರಿತಾದ ಕತೆಯನ್ನು ಒಳಗೊಂಡಿದೆ. ಆಮಿರ್ ಖಾನ್ ಪುತ್ರ ನಟಿಸಿರುವ ಹಿಂದಿ ಸಿನಿಮಾನಲ್ಲಿಯೂ ಸಾಯಿ ಪಲ್ಲವಿ ನಟಿಸಿದ್ದು, ಇದು ಅವರ ಮೊದಲ ಬಾಲಿವುಡ್ ಸಿನಿಮಾ. ಈ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಅವುಗಳ ಜೊತೆಗೆ ಇದೀಗ ‘ರಾಮಾಯಣ’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು