AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ‘ರಾಮ್​ ಚರಣ್​, ಜೂ. ಎನ್​ಟಿಆರ್​, ಅಲ್ಲು ಅರ್ಜುನ್​ ಜತೆ ಒಟ್ಟಿಗೆ ಡ್ಯಾನ್​ ಮಾಡ್ಬೇಕು’: ಸಾಯಿ ಪಲ್ಲವಿ

Tollywood News | Sai Pallavi: ಟಾಲಿವುಡ್​ನ ಮೂವರು ಸ್ಟಾರ್​ ಹೀರೋಗಳ ಪೈಕಿ ಯಾರ ಜೊತೆ ಡ್ಯಾನ್ಸ್​ ಮಾಡಲು ಇಷ್ಟಪಡುತ್ತೀರಿ ಎಂದು ಸಾಯಿ ಪಲ್ಲವಿಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಜಾಣತನದಲ್ಲಿ ಉತ್ತರ ನೀಡಿದ್ದಾರೆ.

Sai Pallavi: ‘ರಾಮ್​ ಚರಣ್​, ಜೂ. ಎನ್​ಟಿಆರ್​, ಅಲ್ಲು ಅರ್ಜುನ್​ ಜತೆ ಒಟ್ಟಿಗೆ ಡ್ಯಾನ್​ ಮಾಡ್ಬೇಕು’: ಸಾಯಿ ಪಲ್ಲವಿ
ಅಲ್ಲು ಅರ್ಜುನ್, ಸಾಯಿ ಪಲ್ಲವಿ, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​
Follow us
ಮದನ್​ ಕುಮಾರ್​
|

Updated on: Mar 11, 2023 | 8:00 AM

ನಟಿ ಸಾಯಿ ಪಲ್ಲವಿ (Sai Pallavi) ಅವರು ಅತ್ಯುತ್ತಮ ಡ್ಯಾನ್ಸರ್​ ಎಂಬುದರಲ್ಲಿ ಅನುಮಾನವೇ ಬೇಡ. ‘ರೌಡಿ ಬೇಬಿ..’ ಹಾಡಿನಲ್ಲಿ ಅವರು ಹೆಜ್ಜೆ ಹಾಕಿದ ಪರಿ ಕಂಡು ಅಭಿಮಾನಿಗಳು ಸಖತ್​ ಎಂಜಾಯ್​ ಮಾಡಿದ್ದಾರೆ. ಅವರ ಟ್ಯಾಲೆಂಟ್​ಗೆ ಅನುಗುಣವಾಗಿ ನೃತ್ಯ ಪ್ರಧಾನವಾದ ಒಂದು ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಸಾಯಿ ಪಲ್ಲವಿ ಭಾಗವಹಿಸುವ ಬಹುತೇಕ ಸಂದರ್ಶನಗಳಲ್ಲಿ ಡ್ಯಾನ್ಸ್​ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ‘ನಿಜಂ ವಿಥ್​ ಸ್ಮಿತಾ’ ಟಾಕ್​ ಶೋನಲ್ಲಿ ಅವರು ಭಾಗವಹಿಸಿದ್ದರು. ಆಗ ಟಾಲಿವುಡ್ (Tollywood)​ ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಮತ್ತು ಅಲ್ಲು ಅರ್ಜುನ್​ (Allu Arjun) ಜೊತೆ ಡ್ಯಾನ್ಸ್​ ಮಾಡಬೇಕು ಎಂಬ ಆಸೆಯನ್ನು ಸಾಯಿ ಪಲ್ಲವಿ ವ್ಯಕ್ತಪಡಿಸಿದ್ದಾರೆ.

ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಅಲ್ಲು ಅರ್ಜುನ್ ಈ ಮೂವರಲ್ಲಿ ಯಾರ ಜೊತೆ ಡ್ಯಾನ್ಸ್​ ಮಾಡಲು ಇಷ್ಟಪಡುತ್ತೀರಿ ಎಂದು ಸಾಯಿ ಪಲ್ಲವಿಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಜಾಣತನದಲ್ಲಿ ಉತ್ತರ ನೀಡಿದ್ದಾರೆ. ಯಾವುದೇ ಒಬ್ಬ ಹೀರೋನ ಹೆಸರು ಹೇಳಿದರೆ ಇನ್ನುಳಿದ ಇಬ್ಬರು ಹೀರೋಗಳ ಫ್ಯಾನ್ಸ್​ ಬೇಸರ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ‘ಈ ಮೂವರ ಜೊತೆಗೂ ಒಂದೇ ಹಾಡಿನಲ್ಲಿ ನಾನು ಡ್ಯಾನ್ಸ್​ ಮಾಡಬೇಕು’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

ಇದನ್ನೂ ಓದಿ: Sai Pallavi: ಸೀತೆ ಪಾತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ? ಇದು ಬೆಸ್ಟ್ ಆಯ್ಕೆ ಅಂತಾರೆ ಅಭಿಮಾನಿಗಳು

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಚಿತ್ರರಂಗದಲ್ಲಿ ಗ್ಲಾಮರ್​ ಹಂಗು ಇಲ್ಲದೇ ಬೆಳೆದ ನಟಿ ಸಾಯಿ ಪಲ್ಲವಿ. ಹೀರೋ ಜೊತೆ ಮರಸುತ್ತುವ ಪಾತ್ರದ ಬದಲು ನಟನೆಯ ಮಹತ್ವ ಇರುವಂತಹ ಪಾತ್ರಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಕಾರಣದಿಂದಲೇ ಅವರು ಚಿತ್ರರಂಗಲ್ಲಿ ಗಟ್ಟಿಯಾಗಿ ನೆಲೆ ಕಂಡುಕೊಂಡಿದ್ದಾರೆ. ಒಂದಕ್ಕಿಂತ ಒಂದು ಒಳ್ಳೆಯ ಆಫರ್​ಗಳು ಅವರಿಗೆ ಸಿಗುತ್ತಿವೆ.

ಇದನ್ನೂ ಓದಿ: ಸಾಯಿ ಪಲ್ಲವಿಗೆ ಹಿನ್ನಡೆ: ಪೊಲೀಸ್ ವಿಚಾರಣೆಗೆ ಹಾಜರಾಗಲೇ ಬೇಕು ಎಂದ ಕೋರ್ಟ್

‘ಪುಷ್ಪ 2’ ಚಿತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ?

ಸಾಯಿ ಪಲ್ಲವಿ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸಾಯಿ ಪಲ್ಲವಿ ಕೂಡ ಯಾವುದೇ ವಿಚಾರ ಬಾಯಿ ಬಿಟ್ಟಿಲ್ಲ. ಹಾಗಿದ್ದರೂ ಕೂಡ ಟಾಲಿವುಡ್​ ಅಂಗಳಲ್ಲಿ ಈ ಗಾಸಿಪ್​ ಜೋರಾಗಿದೆ. ಈ ಚಿತ್ರದಲ್ಲಿ ಫಹಾದ್​ ಫಾಸಿಲ್​ ಅವರು ಒಂದು ಪಾತ್ರ ಮಾಡುತ್ತಿದ್ದಾರೆ. ಅವರ ಪತ್ನಿಯ ಪಾತ್ರದಲ್ಲಿ ಸಾಯಿ ಪಲ್ಲವಿ ಅಭಿನಯಿಸುತ್ತಾರೆ ಎಂಬ ಗಾಸಿಪ್​ ಹಬ್ಬಿದೆ. ಈ ಗಾಸಿಪ್​ ನಿಜವಾದರೆ ಅಭಿಮಾನಿಗಳಿಗೆ ಸಖತ್​ ಖುಷಿ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ