AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪಲ್ಲವಿ ಬಗ್ಗೆ ವದಂತಿ; ನಗು ಮುಖದ ನಟಿಗೆ ಮೂಡಿತು ಕಡುಗೋಪ

ಸಾಯಿ ಪಲ್ಲವಿ ಅವರು ತಮಿಳು ಮಾಧ್ಯಮದಲ್ಲಿ ಹಬ್ಬಿದ ಸುಳ್ಳು ವರದಿಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ರಾಮಾಯಣ ಚಿತ್ರದಲ್ಲಿ ಸೀತೆಯ ಪಾತ್ರದಲ್ಲಿ ಅಭಿನಯಿಸುತ್ತಿರುವ ಅವರು ಈ ಚಿತ್ರಕ್ಕಾಗಿ ಸಸ್ಯಾಹಾರಿಯಾಗಿದ್ದಾರೆ ಎಂಬ ವದಂತಿಯನ್ನು ಅವರು ತಳ್ಳಿ ಹಾಕಿದ್ದಾರೆ. ಭವಿಷ್ಯದಲ್ಲಿ ಇಂತಹ ಆಧಾರರಹಿತ ವದಂತಿಗಳು ಹಬ್ಬಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಸಾಯಿ ಪಲ್ಲವಿ ಬಗ್ಗೆ ವದಂತಿ; ನಗು ಮುಖದ ನಟಿಗೆ ಮೂಡಿತು ಕಡುಗೋಪ
ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
|

Updated on: Dec 12, 2024 | 8:55 AM

Share

ಸಾಯಿ ಪಲ್ಲವಿ ಬಗ್ಗೆ ಎಷ್ಟೇ ವದಂತಿ ಬಂದರೂ ಬಹುತೇಕ ಸಂದರ್ಭಗಳಲ್ಲಿ ಸೈಲೆಂಟ್ ಆಗಿರುತ್ತಾರೆ. ಅವರ ಬಗ್ಗೆ ಎಷ್ಟೇ ವದಂತಿ ಹಬ್ಬಿದರೂ ಸುಮ್ಮನೆ ಇರುತ್ತಾರೆ. ಈಗ ಸಾಯಿ ಪಲ್ಲವಿ ಬಗ್ಗೆ ಒಂದು ವದಂತಿ ಹುಟ್ಟಿಕೊಂಡಿದೆ. ಇದಕ್ಕೆ ಸಾಯಿ ಪಲ್ಲವಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸದಾ ನಗು ಮುಖದಲ್ಲೇ ಇರುವ ಅವರ ಮುಖದಲ್ಲಿ ಸಿಟ್ಟು ಕಾಣಿಸಿಕೊಂಡಿದೆ. ಸದ್ಯ ಅವರು ಮಾಡಿರೋ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಡಿಸೆಂಬರ್ 11ರಂದು ತಮಿಳು ಮಾಧ್ಯಮ ಒಂದರಲ್ಲಿ ವದಂತಿ ಹಬ್ಬಿಸಲಾಯಿತು. ಹಿಂದಿಯ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದು, ಸೀತೆಯ ಪಾತ್ರ ಮಾಡುತ್ತಿದ್ದಾರೆ. ರಾಮಾಯಣದ ಕಥೆ ಆಗಿರುವುದರಿಂದ ಸಾಯಿ ಪಲ್ಲವಿ ಅವರು ಕೇವಲ ಸಸ್ಯಾಹಾರ ಸೇವನೆ ಮಾಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿತ್ತು.

ಈ ವರದಿ ಸಾಯಿ ಪಲ್ಲವಿ ಗಮನಕ್ಕೆ ಬಂದಿದೆ. ಸಾಯಿ ಪಲ್ಲವಿ ಸಸ್ಯಾಹಾರಿ. ಆದರೆ, ಅವರು ಸದಾ ಮಾಂಸಹಾರ ಸೇವನೆ ಮಾಡುತ್ತಾರೆ, ಈ ಚಿತ್ರಕ್ಕಾಗಿ ಅವರು ಸಸ್ಯಾಹಾರಿ ಆದರು ಎಂಬರ್ಥದಲ್ಲಿ ಈ ಪೋಸ್ಟ್ ಇತ್ತು. ಇದಕ್ಕೆ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಅವರು ಮಾಧ್ಯಮಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ಆಧಾರರಹಿತ ವದಂತಿಗಳು, ಸುಳ್ಳುಗಳನ್ನು ನೋಡಿದಾಗ ಬಹುತೇಕ ಸಂದರ್ಭಗಳಲ್ಲಿ ನಾನು ಮೌನವಾಗಿರಲು ಬಯಸುತ್ತೇನೆ. ಆದರೆ ಇದು ನಿರಂತರವಾಗಿ ನಡೆಯುತ್ತಿರುವುದರಿಂದ ನಾನು ಪ್ರತಿಕ್ರಿಯಿಸಬೇಕಿದೆ. ಇದು ನಿಲ್ಲುವಂತೆಯೂ ತೋರುತ್ತಿಲ್ಲ. ಸಿನಿಮಾ ಬಿಡುಗಡೆ ಸಂದರ್ಭದಲ್ಲಿ, ಘೋಷಣೆ ಸಂದರ್ಭದಲ್ಲಿ ಇದು ಹೆಚ್ಚಿರುತ್ತದೆ’ ಎಂದಿದ್ದಾರೆ ಅವರು.

ಲೀಗಲ್ ನೋಟಿಸ್​ ನೀಡುವ ಬಗ್ಗೆಯೂ ಅವರು ಎಚ್ಚರಿಕೆ ನೀಡಿದ್ದಾರೆ. ‘ಮುಂದಿನ ಬಾರಿ ಯಾವುದಾದರೂ ಪ್ರತಿಷ್ಠಿತ ಪೇಜ್ ಅಥವಾ ಮಾಧ್ಯಮಗಳು ಈ ರೀತಿಯ ಸುದ್ದಿ ಮಾಡಿದರೆ ನಾವು ಲೀಗಲ್ ಆಗಿ ಕ್ರಮ ಕೈಗೊಳ್ಳುತ್ತೇವೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಕ್ಕೆ ಸಾಯಿ ಪಲ್ಲವಿ ಪಡೆಯುತ್ತಿರುವ ಸಂಭಾವನೆ ಎಷ್ಟು?

ಸಾಯಿ ಪಲ್ಲವಿ ಅವರು ‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ರಾಮನಾಗಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆ ಪಾತ್ರ ಮಾಡುತ್ತಿದ್ದಾರೆ. ರಾವಣನಾಗಿ ಯಶ್ ನಟಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ