AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳದೇ ಕೇಳದೇ ಮದುವೆ ಆದ್ರಾ ಸಾಯಿ ಪಲ್ಲವಿ? ವೈರಲ್ ಫೋಟೋ ಹಿಂದಿದೆ ಬೇರೆಯದೇ ಕಥೆ

‘ಸಾಯಿ ಪಲ್ಲವಿ ಸೈಲೆಂಟ್ ಆಗಿ ಮದುವೆ ಆದರು’ ಎಂದು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹರಿಬಿಟ್ಟು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಅನೇಕರು ಇದನ್ನು ನಂಬಿಕೊಂಡಿದ್ದಾರೆ. ಆದರೆ, ಇದು ಸಿನಿಮಾ ಮುಹೂರ್ತ ಸಂದರ್ಭದಲ್ಲಿ ತೆಗೆದ ಫೋಟೋ ಎಂಬುದನ್ನು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಹೇಳದೇ ಕೇಳದೇ ಮದುವೆ ಆದ್ರಾ ಸಾಯಿ ಪಲ್ಲವಿ? ವೈರಲ್ ಫೋಟೋ ಹಿಂದಿದೆ ಬೇರೆಯದೇ ಕಥೆ
ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
|

Updated on: Sep 22, 2023 | 11:20 AM

Share

ನಟಿ ಸಾಯಿ ಪಲ್ಲವಿ (Sai Pallavi) ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸ ಹೊಸ ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರ ಫೋಟೋ ಒಂದು ವೈರಲ್ ಆಗಿ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಸಾಯಿ ಪಲ್ಲವಿ ಅವರು ಹಾರ ಹಾಕಿಕೊಂಡು ನಿರ್ದೇಶಕನ ಜೊತೆ ನಿಂತಿದ್ದರು. ಅವರಿಗೆ ಮದುವೆ ಆಗಿದೆ ಎಂದು ಎಲ್ಲರೂ ಭಾವಿಸಿದರು. ಆದರೆ, ಈ ಫೋಟೋದ ಅಸಲಿಯತ್ತು ಬೇರೆಯದೇ ಇದೆ. ಅಸಲಿಗೆ ಸಾಯಿ ಪಲ್ಲವಿ ಮದುವೆ ಆಗಿಲ್ಲ. ಯಾರೋ ಕಿಡಿಗೇಡಿಗಳು ಮಾಡಿದ ಕಿತಾಪತಿ ಇದು.

ಸಾಯಿ ಪಲ್ಲವಿ ಹಾಗೂ ಶಿವ ಕಾರ್ತಿಕೇಯ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಪೆರಿಯಸ್ವಾಮಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ #SK21 ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಇತ್ತೀಚೆಗೆ ನಡೆದಿದೆ. ಈ ವೇಳೆ ಎಲ್ಲರೂ ಮಾಲೆ ಹಾಕಿ ನಿಂತಿದ್ದರು. ಕೆಲವು ಕಿಡಿಗೇಡಿಗಳು ಸಾಯಿ ಪಲ್ಲವಿ ಹಾಗೂ ರಾಜ್​ಕುಮಾರ್ ಅವರ ಫೋಟೋನ ಕ್ರಾಪ್ ಮಾಡಿ ವೈರಲ್ ಮಾಡಿದ್ದಾರೆ.

‘ಸಾಯಿ ಪಲ್ಲವಿ ಸೈಲೆಂಟ್ ಆಗಿ ಮದುವೆ ಆದರು’ ಎಂದು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹರಿಬಿಟ್ಟು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಅನೇಕರು ಇದನ್ನು ನಂಬಿಕೊಂಡಿದ್ದಾರೆ. ಆದರೆ, ಇದು ಸಿನಿಮಾ ಮುಹೂರ್ತ ಸಂದರ್ಭದಲ್ಲಿ ತೆಗೆದ ಫೋಟೋ ಎಂಬುದನ್ನು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಪೂಜೆಯ ಸಂದರ್ಭದಲ್ಲಿ ಈ ರೀತಿ ಮಾಲೆ ಧರಿಸೋದು ತಮಿಳುನಾಡಿನ ಸಂಪ್ರದಾಯದಲ್ಲಿದೆ. ಈ ಕಾರಣದಿಂದ ಎಲ್ಲರೂ ಮಾಲೆ ಧರಿಸಿದ್ದರು.

ಇದನ್ನೂ ಓದಿ:ಸಾಯಿ ಪಲ್ಲವಿ ಹೊಸ ಸಿನಿಮಾ ಘೋಷಣೆ: ನಾಗ ಚೈತನ್ಯ ಅದೃಷ್ಟ ಬದಲಾಗುತ್ತಾ? 

ಸಾಯಿ ಪಲ್ಲವಿ ಟ್ಯಾಲೆಂಟೆಡ್ ಹೀರೋಯಿನ್. ಸಿನಿಮಾ ಬಗ್ಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ. ‘ಫಿದಾ’, ‘ಶ್ಯಾಮ್ ಸಿಂಗ ರಾಯ್’ ಮೊದಲಾದ ಸಿನಿಮಾಗಳಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಕಳೆದ ವರ್ಷ ಅವರ ನಟನೆಯ ‘ಗಾರ್ಗಿ’ ಸಿನಿಮಾ ತಮಿಳು, ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಸದ್ಯ ಶಿವ ಕಾರ್ತಿಕೇಯ ನಟನೆಯ ಸಿನಿಮಾ ಹಾಗೂ ನಾಗ ಚೈತನ್ಯ ಅಭಿನಯದ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?