AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು?

Sai Pallavi movie: ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರ ಮೊದಲ ಸಿನಿಮಾ ಬಿಡುಗಡೆಗೆ ಬಾಲಿವುಡ್ ಸ್ಟಾರ್ ನಟ ಆಮಿರ್ ಖಾನ್ ಅಡ್ಡಗಾಲು ಹಾಕುತ್ತಿದ್ದಾರೆ. ಅದು ಹೇಗೆ?

ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು?
Aamir Khan Sai Pallavi
ಮಂಜುನಾಥ ಸಿ.
|

Updated on: Jan 06, 2026 | 5:32 PM

Share

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಬಲು ಜನಪ್ರಿಯ ನಟಿ. ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಸಾಯಿ ಪಲ್ಲವಿಯನ್ನು ಪವನ್ ಕಲ್ಯಾಣ್ ಅವರಿಗೆ ಸಹ ಹೋಲಿಸಿದ್ದರು, ಅಷ್ಟು ದೊಡ್ಡ ಅಭಿಮಾನಿ ವರ್ಗವನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ಭಿನ್ನ ಸಿನಿಮಾಗಳ ಆಯ್ಕೆ, ಸಿನಿಮಾಗಳ ಹೊರಗೆ ಅವರ ವ್ಯಕ್ತಿತ್ವ, ನಿಲವುಗಳು ಸಾಯಿ ಪಲ್ಲವಿಗೆ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿ ಕೊಟ್ಟಿವೆ. ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರ ಮೊದಲ ಸಿನಿಮಾ ಬಿಡುಗಡೆಗೆ ಬಾಲಿವುಡ್ ಸ್ಟಾರ್ ನಟ ಆಮಿರ್ ಖಾನ್ ಅಡ್ಡಗಾಲು ಹಾಕುತ್ತಿದ್ದಾರೆ. ಅದು ಹೇಗೆ?

ಸಾಯಿ ಪಲ್ಲವಿ, ಬಾಲಿವುಡ್​ನ ಬಲು ದೊಡ್ಡ ಬಜೆಟ್​ನ ಸಿನಿಮಾ ‘ರಾಮಾಯಣ’ದಲ್ಲಿ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ಮತ್ತು ಯಶ್ ಸಹ ನಟಿಸುತ್ತಿರುವುದು ಗೊತ್ತಿರುವುದೇ. ಆದರೆ ಇದು ಸಾಯಿ ಪಲ್ಲವಿ ಅವರ ಮೊದಲ ಹಿಂದಿ ಸಿನಿಮಾ ಅಲ್ಲ. ‘ರಾಮಾಯಣ’ಕ್ಕೆ ಮುಂಚೆ, ಆಮಿರ್ ಖಾನ್ ಪುತ್ರನ ಜೊತೆಗೆ ಸಾಯಿ ಪಲ್ಲವಿ ಸಿನಿಮಾ ಒಂದರಲ್ಲಿ ನಟಿಸಿದ್ದಾರೆ.

ಆಮಿರ್ ಖಾನ್ ಪುತ್ರ ಜುನೈದ್ ಖಾನ್ ನಟನೆಯ ‘ಮೇರೆ ರಹೊ’ ಸಿನಿಮಾನಲ್ಲಿ ಸಾಯಿ ಪಲ್ಲವಿ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಭಾರತ ಮತ್ತು ಜಪಾನ್​​ನಲ್ಲಿ ನಡೆದಿದೆ. ಅಸಲಿಗೆ 2024ರಲ್ಲೇ ಚಿತ್ರೀಕರಣ ಶುರುವಾಗಿದ್ದು, ಚಿತ್ರೀಕರಣ ಮುಗಿದು ತಿಂಗಳುಗಳೇ ಆಗಿವೆ. ಆದರೆ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ಇದಕ್ಕೆ ಆಮಿರ್ ಖಾನ್ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ:ಚಿರಂಜೀವಿಗೆ ನೋ ಹೇಳಿ ಈಗ ರಜನೀಕಾಂತ್​​ಗೆ ಎಸ್ ಎಂದ ಸಾಯಿ ಪಲ್ಲವಿ

ಆಮಿರ್ ಖಾನ್ ಅವರು ‘ಮೇರೆ ರಹೊ’ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡುತ್ತಲೇ ಹೋಗುತ್ತಿದ್ದಾರಂತೆ. ಪೋಸ್ಟ್ ಪ್ರೊಡಕ್ಷನ್ ಸರಿ ಬಾರದೇ ಇರುವುದು ಸೇರಿದಂತೆ, ಇತರೆ ದೊಡ್ಡ ಸಿನಿಮಾಗಳು ಚಿತ್ರಮಂದಿರದಲ್ಲಿ ಇಲ್ಲದೇ ಇರುವ ಸಮಯದಲ್ಲಿ ಬಿಡುಗಡೆ ಮಾಡಲೆಂದು ಸಿನಿಮಾದ ಬಿಡುಗಡೆಯನ್ನು ಮುಂದೂಡುತ್ತಲೇ ಬರುತ್ತಿದ್ದಾರೆ. ಇದೀಗ ಫೆಬ್ರವರಿ 14ರ ವೇಳೆಗೆ ಸಿನಿಮಾ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಆದರೆ ಇನ್ನೂ ಖಾತ್ರಿ ಆಗಿಲ್ಲ.

ಇನ್ನು ಸಾಯಿ ಪಲ್ಲವಿ ಅವರ ಕೈಯಲ್ಲಿ ಪ್ರಸ್ತುತ ಹಲವು ಸಿನಿಮಾಗಳಿವೆ. ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಎಂಎಸ್ ಸುಬ್ಬಲಕ್ಷ್ಮಿ ಅವರ ಜೀವನ ಆಧರಿಸಿದ ಸಿನಿಮಾನಲ್ಲಿ ನಟಿಸಲಿದ್ದಾರೆ. ಮಣಿರತ್ನಂ ನಿರ್ದೇಶಿಸಲಿರುವ ಮಹಿಳಾ ಪ್ರಧಾನ ಸಿನಿಮಾನಲ್ಲಿ ನಟಿಸಲಿದ್ದಾರೆ. ತೆಲುಗಿನಲ್ಲಿ ಮತ್ತೊಮ್ಮೆ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ಸಿನಿಮಾನಲ್ಲಿಯೂ ನಟಿಸಲಿದ್ದಾರೆ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು