ಸಾಯಿ ಪಲ್ಲವಿ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ರಾಮಾಯಣ’ ಟೀಂ

ಸಾಯಿ ಪಲ್ಲವಿ ಅವರ ಹಿಂದಿ ಉಚ್ಚಾರಣೆಯ ಕುರಿತು 'ಏಕ್ ದಿನ್' ಚಿತ್ರದಲ್ಲಿ ವ್ಯಕ್ತವಾದ ಟೀಕೆಗಳಿಂದಾಗಿ, 'ರಾಮಾಯಣ' ಚಿತ್ರತಂಡ ದೊಡ್ಡ ನಿರ್ಧಾರಕ್ಕೆ ಬಂದಿದೆ. ಸೀತಾ ಮಾತೆಯ ಪಾತ್ರಕ್ಕೆ ಶುದ್ಧ ಹಿಂದಿ ಅಗತ್ಯವಿರುವುದರಿಂದ, ಸಾಯಿ ಪಲ್ಲವಿ ಅವರ ಧ್ವನಿಯನ್ನು ಬೇರೆ ವೃತ್ತಿಪರರಿಂದ ಡಬ್ ಮಾಡಿಸಲು ಯೋಚಿಸುತ್ತಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಸಾಯಿ ಪಲ್ಲವಿ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ರಾಮಾಯಣ’ ಟೀಂ
ಸಾಯಿ ಪಲ್ಲವಿ

Updated on: May 14, 2026 | 9:33 AM

ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ದಲ್ಲಿ ಸೀತೆಯ ಪಾತ್ರ ನಿರ್ವಹಿಸುತ್ತಿರುವ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರಿಗೆ ಈಗ ಹೊಸ ಸಂಕಷ್ಟ ಎದುರಾಗಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಅವರ ಚೊಚ್ಚಲ ಹಿಂದಿ ಸಿನಿಮಾ ‘ಏಕ್ ದಿನ್’ ಸೋತಿರುವುದು ಮಾತ್ರವಲ್ಲದೆ, ಚಿತ್ರದಲ್ಲಿ ಅವರ ಹಿಂದಿ ಉಚ್ಚಾರಣೆಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಹೀಗಾಗಿ, ತಂಡ ದೊಡ್ಡ ನಿರ್ಧಾರ ಮಾಡಿದೆ ಎನ್ನಲಾಗಿದೆ.

‘ಏಕ್ ದಿನ್’ ಚಿತ್ರದಲ್ಲಿ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ನಟಿಸಿದ್ದಾರೆ. ಸಾಯಿ ಪಲ್ಲವಿ ಹಿಂದಿ ಭಾಷೆಯ ಮೇಲಿನ ಹಿಡಿತ ಅಷ್ಟೇನೂ ಪರಿಣಾಮಕಾರಿಯಾಗಿರಲಿಲ್ಲ ಎಂಬುದು ಸಿನಿಪ್ರೇಮಿಗಳ ಅಭಿಪ್ರಾಯ. ಸೀತಾ ಮಾತೆಯ ಪಾತ್ರಕ್ಕೆ ಅತ್ಯಂತ ಶುದ್ಧವಾದ ಮತ್ತು ಸ್ಪಷ್ಟವಾದ ಹಿಂದಿ ಉಚ್ಚಾರಣೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ, ಸಾಯಿ ಪಲ್ಲವಿ ಅವರ ಧ್ವನಿಯನ್ನು ಬಳಸುವ ಬದಲು ಬೇರೆ ವೃತ್ತಿಪರ ಡಬ್ಬಿಂಗ್ ಕಲಾವಿದರಿಂದ ಧ್ವನಿ ನೀಡಿಸಲು ತಯಾರಕರು ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಾಯಿ ಪಲ್ಲವಿ ಅವರ ಹಿಂದಿ ಮಾತುಗಳ ವಿಡಿಯೋ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳು ಶುರುವಾಗಿವೆ. ‘ಮೂಲ ಹಿಂದಿ ಪದಗಳನ್ನೇ ಸರಿಯಾಗಿ ಉಚ್ಚರಿಸಲು ಬಾರದ ನಟಿಯನ್ನು ಸೀತೆ ಪಾತ್ರಕ್ಕೆ ಆಯ್ಕೆ ಮಾಡಿದ್ದಾದರೂ ಏಕೆ?’ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ಹಿಂದೆ ಇದೇ ಪಾತ್ರಕ್ಕೆ ಆಲಿಯಾ ಭಟ್ ಅವರನ್ನು ಫೈನಲ್ ಮಾಡಲಾಗಿತ್ತು, ಆದರೆ ಡೇಟ್ಸ್ ಸಮಸ್ಯೆಯಿಂದ ಅವರು ಹೊರಬಂದಿದ್ದರು. ಈಗ ಸಾಯಿ ಪಲ್ಲವಿ ಅವರ ಆಯ್ಕೆಯ ಬಗ್ಗೆ ಸಿನಿಮಾ ಪಂಡಿತರಲ್ಲೇ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ‘ಏಕ್ ದಿನ್’ ಸೋಲು, ಪಾತ್ರದ ಬಗ್ಗೆ ಸಾಯಿ ಪಲ್ಲವಿ ನೆಗೆಟಿವ್ ಕಮೆಂಟ್

ರಣಬೀರ್ ಕಪೂರ್ ರಾಮನಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ನಟಿಸುತ್ತಿರುವ ಈ ಬೃಹತ್ ಚಿತ್ರದ ಮೊದಲ ಭಾಗ ಇದೇ ವರ್ಷದ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಎರಡನೇ ಭಾಗ 2027ರ ದೀಪಾವಳಿಗೆ ಪ್ಲಾನ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us