AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ

ಸಾಯಿ ಪಲ್ಲವಿ ಅವರ ನಟನೆಯ ‘ಅಮರನ್’ ಚಿತ್ರವು ಇಂದು ಬಿಡುಗಡೆಯಾಗಿದೆ. ಮಣಿರತ್ನಂ ಅವರು ಸಾಯಿ ಪಲ್ಲವಿಯ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಅವರ ನೈಜ ನಟನೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಜೊತೆ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಚಿತ್ರ ಮೇಜರ್ ಮುಕುಂದ್ ವರದರಾಜನ್ ಅವರ ಜೀವನ ಕಥೆಯನ್ನು ಆಧರಿಸಿದೆ.

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ
ಮಣಿರತ್ನಂ-ಸಾಯಿ ಪಲ್ಲವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 31, 2024 | 7:46 AM

Share

ನಟಿ ಸಾಯಿ ಪಲ್ಲವಿ ಅವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ನಟನೆಯಲ್ಲಿ ಅವರನ್ನು ಮೀರೀಸೋರು ಯಾರೂ ಇಲ್ಲ ಎಂದರೂ ತಪ್ಪಾಗಲಾದರು. ಯಾವುದೇ ಗ್ಲಾಮರ್ ಪಾತ್ರಗಳನ್ನು ಮಾಡದೆ ಮೆಚ್ಚುಗೆ ಪಡೆದವರು ಅವರು. ಅವರ ನಟನೆಯ ‘ಅಮರನ್’ ಸಿನಿಮಾ ಇಂದು (ಅಕ್ಟೋಬರ್ 31) ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯ ಅವರ ಜೊತೆ ಸಾಯಿ ಪಲ್ಲವಿ ಜೊತೆಯಾಗಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರು ಅತಿಥಿಯಾಗಿ ಬಂದಿದ್ದರು. ಅವರು ಸಾಯಿ ಪಲ್ಲವಿಯನ್ನು ಹೊಗಳಿದ್ದಾರೆ.

‘ಸಾಯಿ ಪಲ್ಲವಿ ಅವರು ಮಾಡುವ ಪಾತ್ರಗಳು ನೈಜವಾಗಿ ಇರುತ್ತವೆ. ಈ ಸಿನಿಮಾದಲ್ಲಿ ಚೆನ್ನಾಗಿಯೇ ಮಾಡಿರುತ್ತಾರೆ ಎಂದು ನನಗೆ ಅನಿಸುತ್ತಿದೆ. ನಾನು ಅವರ ದೊಡ್ಡ ಅಭಿಮಾನಿ’ ಎಂದು ಮಣಿರತ್ನಂ ಅವರು ಹೇಳುತ್ತಿದ್ದಂತೆ ಸಾಯಿ ಪಲ್ಲವಿ ಅವರು ನಾಚಿ ನೀರಾದರು.

ಸಾಯಿ ಪಲ್ಲವಿ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಯುವ ನಿರ್ದೇಶಕರು ಅಂದುಕೊಳ್ಳೋದು ಸಹಜ. ಪಲ್ಲವಿ ಕೇವಲ ಯುವ ನಿರ್ದೇಶಕರಿಗೆ ಮಾತ್ರವಲ್ಲ ಹಿರಿಯ ನಿರ್ದೇಶಕರ ಫೇವರಿಟ್ ಕೂಡ ಹೌದು ಅನ್ನೋದು ಸಾಬೀತಾಗಿದೆ. ‘ನಾನು ಮುಂದೊಂದು ದಿನ ನಿಮ್ಮ ಜೊತೆ ಕೆಲಸ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ಸಾಯಿ ಪಲ್ಲವಿ ಅವರು ಮಣಿರತ್ನಂ ಅವರಿಂದ ಈ ರೀತಿಯ ಮಾತುಗಳನ್ನು ನಿರೀಕ್ಷಿಸಿರಲೇ ಇಲ್ಲ. ಹೀಗಾಗಿ ಅವರು ಕರಗಿ ನಾಚಿ ನೀರಾದರು. ಅವರು ಮಣಿರತ್ನಂ ಅವರ ಮಾತಿಗೆ ಧನ್ಯವಾದ ಹೇಳಿದರು. ‘ಅಮರನ್’ ಚಿತ್ರವು ಮೇಜರ್ ಮುಕುಂದ್ ವರದರಾಜನ್ ಅವರ ಜೀವನ ಆಧರಿಸಿದೆ. ಶಿವಕಾರ್ತಿಕೇಯ ಅವರು ಮುಕುಂದ್ ಪಾತ್ರ ಮಾಡಿದ್ದಾರೆ. ಸಾಯಿ ಪಲ್ಲವಿ ಅವರು ಮುಕುಂದ್ ಪತ್ನಿ ಇಂದು ರೆಬೆಕಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ರಾಜ್​ಕುಮಾರ್ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ಶಿವ ಅರೂರ್ ಹಾಗೂ ರಾಹುಲ್ ಸಿಂಘ ಬರೆದ ಪುಸ್ತಕವನ್ನು ಆಧರಿಸಿದೆ.

ಇದನ್ನೂ ಓದಿ: 33 ವರ್ಷಗಳ ಬಳಿಕ ಮಣಿರತ್ನಂ ಸಿನಿಮಾದಲ್ಲಿ ನಟಿಸಲಿರುವ ರಜನೀಕಾಂತ್

ಮಣಿರತ್ನಂ ಅವರು ಸದ್ಯ ‘ಥಗ್​ ಲೈಫ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಹೀರೋ. ಮಣಿರತ್ನಂ ಸಿನಿಮಾಗಳ ಬಗ್ಗೆ ಅವರ ಕೆಲಸಗಳ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ಸಿನಿಮಾಗಳಲ್ಲಿ ಅದ್ದೂರಿತನ ಹೆಚ್ಚೇ ಇರುತ್ತದೆ. ಅವರು ಓಪನ್ ಆಗಿ ಒಂದು ಕಲಾವಿದರನ್ನು ಹೊಗಳಿದ್ದೂ ಕಡಿಮೆಯೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್