AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ

ಸಾಯಿ ಪಲ್ಲವಿ ಅವರ ನಟನೆಯ ‘ಅಮರನ್’ ಚಿತ್ರವು ಇಂದು ಬಿಡುಗಡೆಯಾಗಿದೆ. ಮಣಿರತ್ನಂ ಅವರು ಸಾಯಿ ಪಲ್ಲವಿಯ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಅವರ ನೈಜ ನಟನೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಜೊತೆ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಚಿತ್ರ ಮೇಜರ್ ಮುಕುಂದ್ ವರದರಾಜನ್ ಅವರ ಜೀವನ ಕಥೆಯನ್ನು ಆಧರಿಸಿದೆ.

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ
ಮಣಿರತ್ನಂ-ಸಾಯಿ ಪಲ್ಲವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 31, 2024 | 7:46 AM

Share

ನಟಿ ಸಾಯಿ ಪಲ್ಲವಿ ಅವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ನಟನೆಯಲ್ಲಿ ಅವರನ್ನು ಮೀರೀಸೋರು ಯಾರೂ ಇಲ್ಲ ಎಂದರೂ ತಪ್ಪಾಗಲಾದರು. ಯಾವುದೇ ಗ್ಲಾಮರ್ ಪಾತ್ರಗಳನ್ನು ಮಾಡದೆ ಮೆಚ್ಚುಗೆ ಪಡೆದವರು ಅವರು. ಅವರ ನಟನೆಯ ‘ಅಮರನ್’ ಸಿನಿಮಾ ಇಂದು (ಅಕ್ಟೋಬರ್ 31) ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯ ಅವರ ಜೊತೆ ಸಾಯಿ ಪಲ್ಲವಿ ಜೊತೆಯಾಗಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರು ಅತಿಥಿಯಾಗಿ ಬಂದಿದ್ದರು. ಅವರು ಸಾಯಿ ಪಲ್ಲವಿಯನ್ನು ಹೊಗಳಿದ್ದಾರೆ.

‘ಸಾಯಿ ಪಲ್ಲವಿ ಅವರು ಮಾಡುವ ಪಾತ್ರಗಳು ನೈಜವಾಗಿ ಇರುತ್ತವೆ. ಈ ಸಿನಿಮಾದಲ್ಲಿ ಚೆನ್ನಾಗಿಯೇ ಮಾಡಿರುತ್ತಾರೆ ಎಂದು ನನಗೆ ಅನಿಸುತ್ತಿದೆ. ನಾನು ಅವರ ದೊಡ್ಡ ಅಭಿಮಾನಿ’ ಎಂದು ಮಣಿರತ್ನಂ ಅವರು ಹೇಳುತ್ತಿದ್ದಂತೆ ಸಾಯಿ ಪಲ್ಲವಿ ಅವರು ನಾಚಿ ನೀರಾದರು.

ಸಾಯಿ ಪಲ್ಲವಿ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಯುವ ನಿರ್ದೇಶಕರು ಅಂದುಕೊಳ್ಳೋದು ಸಹಜ. ಪಲ್ಲವಿ ಕೇವಲ ಯುವ ನಿರ್ದೇಶಕರಿಗೆ ಮಾತ್ರವಲ್ಲ ಹಿರಿಯ ನಿರ್ದೇಶಕರ ಫೇವರಿಟ್ ಕೂಡ ಹೌದು ಅನ್ನೋದು ಸಾಬೀತಾಗಿದೆ. ‘ನಾನು ಮುಂದೊಂದು ದಿನ ನಿಮ್ಮ ಜೊತೆ ಕೆಲಸ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ಸಾಯಿ ಪಲ್ಲವಿ ಅವರು ಮಣಿರತ್ನಂ ಅವರಿಂದ ಈ ರೀತಿಯ ಮಾತುಗಳನ್ನು ನಿರೀಕ್ಷಿಸಿರಲೇ ಇಲ್ಲ. ಹೀಗಾಗಿ ಅವರು ಕರಗಿ ನಾಚಿ ನೀರಾದರು. ಅವರು ಮಣಿರತ್ನಂ ಅವರ ಮಾತಿಗೆ ಧನ್ಯವಾದ ಹೇಳಿದರು. ‘ಅಮರನ್’ ಚಿತ್ರವು ಮೇಜರ್ ಮುಕುಂದ್ ವರದರಾಜನ್ ಅವರ ಜೀವನ ಆಧರಿಸಿದೆ. ಶಿವಕಾರ್ತಿಕೇಯ ಅವರು ಮುಕುಂದ್ ಪಾತ್ರ ಮಾಡಿದ್ದಾರೆ. ಸಾಯಿ ಪಲ್ಲವಿ ಅವರು ಮುಕುಂದ್ ಪತ್ನಿ ಇಂದು ರೆಬೆಕಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ರಾಜ್​ಕುಮಾರ್ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ಶಿವ ಅರೂರ್ ಹಾಗೂ ರಾಹುಲ್ ಸಿಂಘ ಬರೆದ ಪುಸ್ತಕವನ್ನು ಆಧರಿಸಿದೆ.

ಇದನ್ನೂ ಓದಿ: 33 ವರ್ಷಗಳ ಬಳಿಕ ಮಣಿರತ್ನಂ ಸಿನಿಮಾದಲ್ಲಿ ನಟಿಸಲಿರುವ ರಜನೀಕಾಂತ್

ಮಣಿರತ್ನಂ ಅವರು ಸದ್ಯ ‘ಥಗ್​ ಲೈಫ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಹೀರೋ. ಮಣಿರತ್ನಂ ಸಿನಿಮಾಗಳ ಬಗ್ಗೆ ಅವರ ಕೆಲಸಗಳ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ಸಿನಿಮಾಗಳಲ್ಲಿ ಅದ್ದೂರಿತನ ಹೆಚ್ಚೇ ಇರುತ್ತದೆ. ಅವರು ಓಪನ್ ಆಗಿ ಒಂದು ಕಲಾವಿದರನ್ನು ಹೊಗಳಿದ್ದೂ ಕಡಿಮೆಯೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್