AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ಜೊತೆ ನಟಿಸೋಕೆ ಸಾಯಿ ಪಲ್ಲವಿ-ಕೀರ್ತಿ ಸುರೇಶ್ ಮಧ್ಯೆ ಮೂಡಿದೆ ಸ್ಪರ್ಧೆ

ಸಾಯಿ ಪಲ್ಲವಿ ನಟನೆಯ ಬಗ್ಗೆ ಯಾರೂ ಮಾತನಾಡುವ ಹಾಗಿಲ್ಲ. ಅವರು ತಮ್ಮ ಅದ್ಭುತ ನಟನೆಯ ಮೂಲಕ ಗಮನ ಸೆಳೆದಿದ್ದಾರೆ. ಅವರನ್ನು ಈ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳಬೇಕು ಎಂಬುದು ಚಂದು ಅವರು ನಿರ್ಧಾರ. ಆದರೆ, ತಂಡದ ಇತರರು ಕೀರ್ತಿ ಸುರೇಶ್ ಅವರನ್ನು ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಾಗ ಚೈತನ್ಯ ಜೊತೆ ನಟಿಸೋಕೆ ಸಾಯಿ ಪಲ್ಲವಿ-ಕೀರ್ತಿ ಸುರೇಶ್ ಮಧ್ಯೆ ಮೂಡಿದೆ ಸ್ಪರ್ಧೆ
ಕೀರ್ತಿ ಸುರೇಶ್-ನಾಗ ಚೈತನ್ಯ-ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
|

Updated on: Aug 18, 2023 | 6:30 AM

Share

ನಾಗ ಚೈತನ್ಯ (Naga Chaitanya) ಅವರು ಟಾಲಿವುಡ್​ನ ಬೇಡಿಕೆಯ ಹೀರೋ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಸದ್ಯ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಕ್ಕೆ ತಾತ್ಕಾಲಿಕವಾಗಿ ‘NC23’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರವನ್ನು ಚಂದೂ ಮೊಂಡೇಟಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಈಗ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ. ಈ ಚಿತ್ರದ ನಾಯಕಿಯ ಆಯ್ಕೆಯಲ್ಲಿ ನಿರ್ದೇಶಕರು ತೊಡಗಿಕೊಂಡಿದ್ದಾರೆ. ಕೀರ್ತಿ ಸುರೇಶ್ ಅಥವಾ ಸಾಯಿ ಪಲ್ಲವಿ (Sai Pallavi) ಅವರನ್ನು ಫೈನಲ್ ಮಾಡುವ ಸಾಧ್ಯತೆ ಇದೆಯಂತೆ.

ಸಾಯಿ ಪಲ್ಲವಿ ನಟನೆಯ ಬಗ್ಗೆ ಯಾರೂ ಮಾತನಾಡುವ ಹಾಗಿಲ್ಲ. ಅವರು ತಮ್ಮ ಅದ್ಭುತ ನಟನೆಯ ಮೂಲಕ ಗಮನ ಸೆಳೆದಿದ್ದಾರೆ. ಅವರನ್ನು ಈ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳಬೇಕು ಎಂಬುದು ಚಂದು ಅವರು ನಿರ್ಧಾರ. ಆದರೆ, ತಂಡದ ಇತರರು ಕೀರ್ತಿ ಸುರೇಶ್ ಅವರನ್ನು ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇಬ್ಬರಲ್ಲಿ ಯಾರೇ ಆಯ್ಕೆ ಆದರೂ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ ಅನ್ನೋದು ಹಲವರ ಅಭಿಪ್ರಾಯ.

ಸಾಯಿ ಪಲ್ಲವಿ ಹಾಗೂ ನಾಗ ಚೈತನ್ಯ ಅವರು ಈ ಮೊದಲು ‘ಲವ್ ಸ್ಟೋರಿ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಆದರೆ, ಇವರ ಕಾಂಬಿನೇಷನ್​ನ ಜನರು ಹೆಚ್ಚು ಇಷ್ಟಪಟ್ಟರು. ಇನ್ನು ನಾಗ ಚೈತನ್ಯ ಹಾಗೂ ಕೀರ್ತಿ ಸುರೇಶ್ ‘ಮಹಾನಟಿ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈ ಚಿತ್ರದಲ್ಲಿ ಕೆಲವೇ ದೃಶ್ಯಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಪ್ಯಾನ್ ಇಂಡಿಯಾ ಸಿನಿಮಾಕ್ಕಾಗಿ ತಯಾರಿ, ಮೀನುಗಾರರೊಟ್ಟಿಗೆ ಸಮಯ ಕಳೆದ ನಾಗ ಚೈತನ್ಯ

ನಾಗ ಚೈತನ್ಯ ಅವರು ಬ್ಯಾಕ್ ಟು ಬ್ಯಾಕ್ ಸೋಲು ಕಾಣುತ್ತಿದ್ದಾರೆ. ಅವರ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ. ಈ ಕಾರಣಕ್ಕೆ ಅವರಿಗೆ ಒಂದು ದೊಡ್ಡ ಗೆಲುವಿನ ಅವಶ್ಯಕತೆ ಇದೆ. ‘ಎನ್​ಸಿ23’ ಚಿತ್ರದಿಂದ ಅವರು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ, ತಾಂತ್ರಿಕ ವರ್ಗದಲ್ಲಿ ಯಾರಿರುತ್ತಾರೆ ಎಂಬ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ