AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NTR 30: ಜೂನಿಯರ್​ ಎನ್​ಟಿಆರ್​ ಸಿನಿಮಾದಲ್ಲಿ​ ವಿಲನ್​ ಆಗ್ತಾರಾ ಬಾಲಿವುಡ್​ ಹೀರೋ?

Saif Ali Khan | Jr NTR: ‘ಎನ್​ಟಿಆರ್​ 30’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಲಿದೆ. ಅದಕ್ಕೆ ತಕ್ಕಂತೆಯೇ ಸ್ಕ್ರಿಪ್ಟ್​ ಸಿದ್ಧವಾಗಿದೆ. ಪಾತ್ರವರ್ಗದ ಆಯ್ಕೆ ಬಗ್ಗೆಯೂ ಸಾಕಷ್ಟು ಕಾಳಜಿ ವಹಿಸಲಾಗುತ್ತಿದೆ.

NTR 30: ಜೂನಿಯರ್​ ಎನ್​ಟಿಆರ್​ ಸಿನಿಮಾದಲ್ಲಿ​ ವಿಲನ್​ ಆಗ್ತಾರಾ ಬಾಲಿವುಡ್​ ಹೀರೋ?
ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on:Feb 17, 2023 | 4:24 PM

Share

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಆರ್​ಆರ್​ಆರ್​’ ಸಿನಿಮಾದ ಗೆಲುವು. ಕಳೆದ ವರ್ಷ ತೆರೆಕಂಡ ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಅಷ್ಟೇ ಅಲ್ಲದೇ ಜಾಗತಿಕ ಮಟ್ಟದ ಪ್ರಶಸ್ತಿಗಳು ಕೂಡ ಹರಿದು ಬಂದವು. ಈಗ ಅವರ ಹೊಸ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಎನ್​ಟಿಆರ್​ 30’ (NTR 30) ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ವಿಲನ್​ ಪಾತ್ರ ಮಾಡಲು ಬಾಲಿವುಡ್​ನ ಖ್ಯಾತ ನಟ ಸೈಫ್​ ಅಲಿ ಖಾನ್ (Saif Ali Khan)​ ಅವರಿಗೆ ಆಫರ್​ ನೀಡಲಾಗಿದೆ ಎಂದು ಸುದ್ದಿ ಆಗಿದೆ.

ಸೈಫ್​ ಅಲಿ ಖಾನ್​ ಅವರು ಬಾಲಿವುಡ್​ನಲ್ಲಿ ಹೀರೋ ಆಗಿ ಮಿಂಚಿದ್ದಾರೆ. ಅದೇ ರೀತಿ ನೆಗೆಟಿವ್​​ ಪಾತ್ರ ಮಾಡಿಯೂ ಸೈ ಎನಿಸಿಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಎದುರು ರಾವಣನ ಪಾತ್ರದಲ್ಲಿ ಸೈಫ್​ ಅಲಿ ಖಾನ್​ ಅಬ್ಬರಿಸಲಿದ್ದಾರೆ. ಅವರು ‘ಎನ್​ಟಿಆರ್​ 30’ ಚಿತ್ರಕ್ಕೂ ವಿಲನ್​ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ಚಿತ್ರತಂಡದ ಯಾರೊಬ್ಬರೂ ಅಧಿಕೃತವಾಗಿ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: Mrunal Thakur: ‘ಎನ್​ಟಿಆರ್​ 30’ ಚಿತ್ರಕ್ಕೆ ಮೃಣಾಲ್​ ಠಾಕೂರ್​ ನಾಯಕಿ? ‘ಸೀತಾ ರಾಮಂ’ ಸುಂದರಿಗೆ ಭರ್ಜರಿ ಆಫರ್​

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

‘ಆರ್​ಆರ್​ಆರ್​’ ಸೂಪರ್​ ಹಿಟ್​ ಆದ ಬಳಿಕ ಜೂನಿಯರ್​ ಎನ್​ಟಿಆರ್​ ನಟನೆಯ ಮುಂದಿನ ಎಲ್ಲ ಸಿನಿಮಾಗಳನ್ನೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಾಡಬೇಕು ಎಂಬುದು ಅಲಿಖಿತ ನಿಯಮದಂತಾಗಿದೆ. ಅದಕ್ಕೆ ತಕ್ಕಂತೆಯೇ ಸ್ಕ್ರಿಪ್ಟ್​ನಲ್ಲಿ ಒಂದಷ್ಟು ಬದಲಾವಣೆ ಮಾಡುವಂತೆ ನಿರ್ದೇಶಕರಿಗೆ ಸೂಚಿಸಲಾಗಿದೆ. ಪಾತ್ರವರ್ಗದ ಆಯ್ಕೆ ಬಗ್ಗೆಯೂ ಸಾಕಷ್ಟು ಕಾಳಜಿ ವಹಿಸಲಾಗುತ್ತಿದೆ. ಒಂದು ವೇಳೆ ಸೈಫ್​ ಅಲಿ ಖಾನ್​ ಅವರು ವಿಲನ್​ ಆಗಿ ನಟಿಸಿದರೆ ಉತ್ತರ ಭಾರತದಲ್ಲಿ ಈ ಸಿನಿಮಾಗೆ ಹೆಚ್ಚು ಪ್ರಚಾರ ಸಿಗಲಿದೆ ಎಂಬುದು ತಂಡದ ಆಲೋಚನೆ.

ಇದನ್ನೂ ಓದಿ: ಜೂ.ಎನ್​ಟಿಆರ್​ ಕುಟುಂಬಕ್ಕೆ ಮತ್ತೊಂದು ಆಘಾತ; ನಂದಮೂರಿ ರಾಮಕೃಷ್ಣಗೆ ಕಾರು ಅಪಘಾತ

ಇನ್ನು ನಾಯಕಿ ಬಗ್ಗೆಯೂ ಸಾಕಷ್ಟು ಗಾಸಿಪ್​ ಹರಿದಾಡಿದೆ. ವರದಿಗಳ ಪ್ರಕಾರ, ಜಾನ್ವಿ ಕಪೂರ್​ ಅವರು ಜೂನಿಯರ್​ ಎನ್​ಟಿಆರ್​ ಜೊತೆ ನಟಿಸಲಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಫೋಟೋಶೂಟ್​ ಕೂಡ ನಡೆದಿದೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಫೆಬ್ರವರಿಯಲ್ಲೇ ‘ಎನ್​ಟಿಆರ್​ 30’ ಸೆಟ್ಟೇರಲಿದೆ. ಮಾರ್ಚ್​ 20ರ ವೇಳೆಗೆ ಶೂಟಿಂಗ್​ ಶುರುವಾಗುವ ನಿರೀಕ್ಷೆ ಕೂಡ ಇದೆ. ಅದಾದ ಬಳಿಕ ಪ್ರಶಾಂತ್​ ನೀಲ್​ ಜೊತೆಗಿನ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್​ ಬ್ಯುಸಿ ಆಗಲಿದ್ದಾರೆ. ಈ ಎಲ್ಲ ಪ್ರಾಜೆಕ್ಟ್​ಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:23 pm, Fri, 17 February 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ