AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NTR 30: ಜೂನಿಯರ್​ ಎನ್​ಟಿಆರ್​ ಸಿನಿಮಾದಲ್ಲಿ​ ವಿಲನ್​ ಆಗ್ತಾರಾ ಬಾಲಿವುಡ್​ ಹೀರೋ?

Saif Ali Khan | Jr NTR: ‘ಎನ್​ಟಿಆರ್​ 30’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಲಿದೆ. ಅದಕ್ಕೆ ತಕ್ಕಂತೆಯೇ ಸ್ಕ್ರಿಪ್ಟ್​ ಸಿದ್ಧವಾಗಿದೆ. ಪಾತ್ರವರ್ಗದ ಆಯ್ಕೆ ಬಗ್ಗೆಯೂ ಸಾಕಷ್ಟು ಕಾಳಜಿ ವಹಿಸಲಾಗುತ್ತಿದೆ.

NTR 30: ಜೂನಿಯರ್​ ಎನ್​ಟಿಆರ್​ ಸಿನಿಮಾದಲ್ಲಿ​ ವಿಲನ್​ ಆಗ್ತಾರಾ ಬಾಲಿವುಡ್​ ಹೀರೋ?
ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on:Feb 17, 2023 | 4:24 PM

Share

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಆರ್​ಆರ್​ಆರ್​’ ಸಿನಿಮಾದ ಗೆಲುವು. ಕಳೆದ ವರ್ಷ ತೆರೆಕಂಡ ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಅಷ್ಟೇ ಅಲ್ಲದೇ ಜಾಗತಿಕ ಮಟ್ಟದ ಪ್ರಶಸ್ತಿಗಳು ಕೂಡ ಹರಿದು ಬಂದವು. ಈಗ ಅವರ ಹೊಸ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಎನ್​ಟಿಆರ್​ 30’ (NTR 30) ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ವಿಲನ್​ ಪಾತ್ರ ಮಾಡಲು ಬಾಲಿವುಡ್​ನ ಖ್ಯಾತ ನಟ ಸೈಫ್​ ಅಲಿ ಖಾನ್ (Saif Ali Khan)​ ಅವರಿಗೆ ಆಫರ್​ ನೀಡಲಾಗಿದೆ ಎಂದು ಸುದ್ದಿ ಆಗಿದೆ.

ಸೈಫ್​ ಅಲಿ ಖಾನ್​ ಅವರು ಬಾಲಿವುಡ್​ನಲ್ಲಿ ಹೀರೋ ಆಗಿ ಮಿಂಚಿದ್ದಾರೆ. ಅದೇ ರೀತಿ ನೆಗೆಟಿವ್​​ ಪಾತ್ರ ಮಾಡಿಯೂ ಸೈ ಎನಿಸಿಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಎದುರು ರಾವಣನ ಪಾತ್ರದಲ್ಲಿ ಸೈಫ್​ ಅಲಿ ಖಾನ್​ ಅಬ್ಬರಿಸಲಿದ್ದಾರೆ. ಅವರು ‘ಎನ್​ಟಿಆರ್​ 30’ ಚಿತ್ರಕ್ಕೂ ವಿಲನ್​ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ಚಿತ್ರತಂಡದ ಯಾರೊಬ್ಬರೂ ಅಧಿಕೃತವಾಗಿ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: Mrunal Thakur: ‘ಎನ್​ಟಿಆರ್​ 30’ ಚಿತ್ರಕ್ಕೆ ಮೃಣಾಲ್​ ಠಾಕೂರ್​ ನಾಯಕಿ? ‘ಸೀತಾ ರಾಮಂ’ ಸುಂದರಿಗೆ ಭರ್ಜರಿ ಆಫರ್​

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

‘ಆರ್​ಆರ್​ಆರ್​’ ಸೂಪರ್​ ಹಿಟ್​ ಆದ ಬಳಿಕ ಜೂನಿಯರ್​ ಎನ್​ಟಿಆರ್​ ನಟನೆಯ ಮುಂದಿನ ಎಲ್ಲ ಸಿನಿಮಾಗಳನ್ನೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಾಡಬೇಕು ಎಂಬುದು ಅಲಿಖಿತ ನಿಯಮದಂತಾಗಿದೆ. ಅದಕ್ಕೆ ತಕ್ಕಂತೆಯೇ ಸ್ಕ್ರಿಪ್ಟ್​ನಲ್ಲಿ ಒಂದಷ್ಟು ಬದಲಾವಣೆ ಮಾಡುವಂತೆ ನಿರ್ದೇಶಕರಿಗೆ ಸೂಚಿಸಲಾಗಿದೆ. ಪಾತ್ರವರ್ಗದ ಆಯ್ಕೆ ಬಗ್ಗೆಯೂ ಸಾಕಷ್ಟು ಕಾಳಜಿ ವಹಿಸಲಾಗುತ್ತಿದೆ. ಒಂದು ವೇಳೆ ಸೈಫ್​ ಅಲಿ ಖಾನ್​ ಅವರು ವಿಲನ್​ ಆಗಿ ನಟಿಸಿದರೆ ಉತ್ತರ ಭಾರತದಲ್ಲಿ ಈ ಸಿನಿಮಾಗೆ ಹೆಚ್ಚು ಪ್ರಚಾರ ಸಿಗಲಿದೆ ಎಂಬುದು ತಂಡದ ಆಲೋಚನೆ.

ಇದನ್ನೂ ಓದಿ: ಜೂ.ಎನ್​ಟಿಆರ್​ ಕುಟುಂಬಕ್ಕೆ ಮತ್ತೊಂದು ಆಘಾತ; ನಂದಮೂರಿ ರಾಮಕೃಷ್ಣಗೆ ಕಾರು ಅಪಘಾತ

ಇನ್ನು ನಾಯಕಿ ಬಗ್ಗೆಯೂ ಸಾಕಷ್ಟು ಗಾಸಿಪ್​ ಹರಿದಾಡಿದೆ. ವರದಿಗಳ ಪ್ರಕಾರ, ಜಾನ್ವಿ ಕಪೂರ್​ ಅವರು ಜೂನಿಯರ್​ ಎನ್​ಟಿಆರ್​ ಜೊತೆ ನಟಿಸಲಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಫೋಟೋಶೂಟ್​ ಕೂಡ ನಡೆದಿದೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಫೆಬ್ರವರಿಯಲ್ಲೇ ‘ಎನ್​ಟಿಆರ್​ 30’ ಸೆಟ್ಟೇರಲಿದೆ. ಮಾರ್ಚ್​ 20ರ ವೇಳೆಗೆ ಶೂಟಿಂಗ್​ ಶುರುವಾಗುವ ನಿರೀಕ್ಷೆ ಕೂಡ ಇದೆ. ಅದಾದ ಬಳಿಕ ಪ್ರಶಾಂತ್​ ನೀಲ್​ ಜೊತೆಗಿನ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್​ ಬ್ಯುಸಿ ಆಗಲಿದ್ದಾರೆ. ಈ ಎಲ್ಲ ಪ್ರಾಜೆಕ್ಟ್​ಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:23 pm, Fri, 17 February 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು