AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಸೈಫ್​ ಅಲಿ ಖಾನ್​; ಈ ಪೋಸ್ಟರ್​ನಲ್ಲಿ ಇರುವ ವಿವಾದ ಏನು?

Bhoot Police: ಕೆಲವೇ ದಿನಗಳ ಹಿಂದೆ ಸೈಫ್​ ಅಲಿ ಖಾನ್​ ಪತ್ನಿ ಕರೀನಾ ಕಪೂರ್​ ಖಾನ್​ ಅವರ ಹೆಸರು ಕೂಡ ಇಂಥದ್ದೇ ವಿವಾದದಲ್ಲಿ ಸಿಲುಕಿಕೊಂಡಿತ್ತು. ಆ ವಿವಾದ ತಣ್ಣಗಾಯಿತು ಎನ್ನುವಾಗಲೇ ಸೈಫ್​ ನಟನೆಯ ‘ಭೂತ್​ ಪೊಲೀಸ್’​ ಚಿತ್ರವೀಗ ಕಿರಿಕ್​ ಮಾಡಿಕೊಂಡಿದೆ.

ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಸೈಫ್​ ಅಲಿ ಖಾನ್​; ಈ ಪೋಸ್ಟರ್​ನಲ್ಲಿ ಇರುವ ವಿವಾದ ಏನು?
ಸೈಫ್​ ಅಲಿ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 06, 2021 | 4:20 PM

ಅದೇಕೋ ಗೊತ್ತಿಲ್ಲ, ನಟ ಸೈಫ್ ಅಲಿ ಖಾನ್​ ಅವರು ಪದೇಪದೇ ಹಿಂದೂಗಳ ಭಾವನೆ ಧಕ್ಕೆ ಉಂಟುಮಾಡುತ್ತಿದ್ದಾರೆ. ಈ ಹಿಂದೆ ಅವರು ನಟಿಸಿದ ‘ತಾಂಡವ್​’ ವೆವ್​ ಸರಣಿಯಲ್ಲಿ ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಹಿಂದೂಗಳು ಪ್ರತಿಭಟನೆ ಮಾಡಿದ್ದರು. ‘ಆದಿಪುರುಷ್​’ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿರುವ ಸೈಫ್​ ಅವರು ರಾವಣ ಒಳ್ಳೆಯವನು ಎಂಬರ್ಥದಲ್ಲಿ ಹೇಳಿಕೆ ನೀಡಿ ಅನೇಕರ ಕೆಂಗಣ್ಣಿಗೆ ಗುರಿಯಾದರು. ಈಗ ಅವರ ಹೊಸ ಸಿನಿಮಾದ ಒಂದು ಪೋಸ್ಟರ್​ ನೋಡಿದ ಬಳಿಕ ಮತ್ತೆ ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೈಫ್​ ಅಲಿ ಖಾನ್​ ಅವರು ‘ಭೂತ್​ ಪೊಲೀಸ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೊಂದು ಹಾರರ್​ ಕಾಮಿಡಿ ಶೈಲಿಯ ಸಿನಿಮಾ ಆಗಿದ್ದ್ದು, ಅದಕ್ಕೆ ತಕ್ಕಂತೆಯೇ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಅಷ್ಟಕ್ಕೂ ಈ ಪೋಸ್ಟರ್​ನಲ್ಲಿ ಅಂತಹ ಆಕ್ಷೇಪಾರ್ಹ ಅಂಶ ಏನಿದೆ? ಸೂಕ್ಷ್ಮವಾಗಿ ಗಮನಿಸಿದಾಗ ಸೈಫ್​ ಅವರ ಹಿನ್ನೆಲೆಯಲ್ಲಿ ಹಿಂದೂ ಸಂತರು ಇರುವುದು ಕಾಣಿಸುತ್ತಿದೆ. ಅದನ್ನು ನೋಡಿದ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಕಿಡಿಕಾರುತ್ತಿದ್ದಾರೆ. ಆ ಸೈಫ್​ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

‘ಈ ಸಿನಿಮಾ ಪೋಸ್ಟರ್​ನಲ್ಲಿ ಹಿಂದೂ ಸಂತರು ಯಾಕೆ ಇದ್ದಾರೆ? ಇದರಲ್ಲಿ ಮುಸ್ಲಿಂ ಮೌಲ್ವಿ ಯಾಕೆ ಇಲ್ಲ? ತಾಂಡವ್​ ವಿವಾದದಿಂದ ಸೈಫ್​ ಯಾವುದೇ ಪಾಠ ಕಲಿತಿಲ್ಲ ಎನಿಸುತ್ತದೆ’ ಎಂದು ಅನೇಕರು ಟ್ವೀಟ್​ ಮಾಡುತ್ತಿದ್ದಾರೆ. ಅಲ್ಲದೆ, ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂಬ ಅಭಿಯಾನ ಕೂಡ ಟ್ವಿಟರ್​ನಲ್ಲಿ ಶುರುವಾಗಿದೆ. ‘ಭೂತ್​ ಪೊಲೀಸ್​’ ಚಿತ್ರದಲ್ಲಿ ಅರ್ಜುನ್​ ಕಪೂರ್​, ಜಾಕ್ವಲೀನ್​ ಫರ್ನಾಂಡೀಸ್​, ಯಾಮಿ ಗೌತಮ್​ ಮುಂತಾದವರು ನಟಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಸೈಫ್​ ಪತ್ನಿ ಕರೀನಾ ಕಪೂರ್​ ಖಾನ್​ ಅವರ ಹೆಸರು ಕೂಡ ಇಂಥದ್ದೇ ವಿವಾದದಲ್ಲಿ ಸಿಲುಕಿಕೊಂಡಿತ್ತು. ಸಿನಿಮಾವೊಂದರಲ್ಲಿ ಸೀತೆಯ ಪಾತ್ರ ಮಾಡಲು ಕರೀನಾ ಕಪೂರ್​ ಕೋಟಿಗಟ್ಟಲೆ ಸಂಭಾವನೆ ಕೇಳುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು. ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದ ಯಾವುದೇ ನಟಿಯಿಂದ ಸೀತೆಯ ಪಾತ್ರ ಮಾಡಿಸಬಾರದು ಎಂದು ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ವಿವಾದ ತಣ್ಣಗಾಯಿತು ಎನ್ನುವಾಗಲೇ ಸೈಫ್​ ಅವರ ‘ಭೂತ್​ ಪೊಲೀಸ್​’ ಚಿತ್ರವೀಗ ಕಿರಿಕ್​ ಮಾಡಿಕೊಂಡಿದೆ.

ಇದನ್ನೂ ಓದಿ:

ಕರೀನಾ ಕಪೂರ್​ ಸೀತೆ ಪಾತ್ರ ಮಾಡುವಂತಿಲ್ಲ; ಇದಕ್ಕೂ ಸೈಫ್​ ಅಲಿ ಖಾನ್​ಗೂ ಏನು ಸಂಬಂಧ?

ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ