AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಸೈಫ್​ ಅಲಿ ಖಾನ್​; ಈ ಪೋಸ್ಟರ್​ನಲ್ಲಿ ಇರುವ ವಿವಾದ ಏನು?

Bhoot Police: ಕೆಲವೇ ದಿನಗಳ ಹಿಂದೆ ಸೈಫ್​ ಅಲಿ ಖಾನ್​ ಪತ್ನಿ ಕರೀನಾ ಕಪೂರ್​ ಖಾನ್​ ಅವರ ಹೆಸರು ಕೂಡ ಇಂಥದ್ದೇ ವಿವಾದದಲ್ಲಿ ಸಿಲುಕಿಕೊಂಡಿತ್ತು. ಆ ವಿವಾದ ತಣ್ಣಗಾಯಿತು ಎನ್ನುವಾಗಲೇ ಸೈಫ್​ ನಟನೆಯ ‘ಭೂತ್​ ಪೊಲೀಸ್’​ ಚಿತ್ರವೀಗ ಕಿರಿಕ್​ ಮಾಡಿಕೊಂಡಿದೆ.

ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಸೈಫ್​ ಅಲಿ ಖಾನ್​; ಈ ಪೋಸ್ಟರ್​ನಲ್ಲಿ ಇರುವ ವಿವಾದ ಏನು?
ಸೈಫ್​ ಅಲಿ ಖಾನ್​
TV9 Web
| Edited By: |

Updated on: Jul 06, 2021 | 4:20 PM

Share

ಅದೇಕೋ ಗೊತ್ತಿಲ್ಲ, ನಟ ಸೈಫ್ ಅಲಿ ಖಾನ್​ ಅವರು ಪದೇಪದೇ ಹಿಂದೂಗಳ ಭಾವನೆ ಧಕ್ಕೆ ಉಂಟುಮಾಡುತ್ತಿದ್ದಾರೆ. ಈ ಹಿಂದೆ ಅವರು ನಟಿಸಿದ ‘ತಾಂಡವ್​’ ವೆವ್​ ಸರಣಿಯಲ್ಲಿ ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಹಿಂದೂಗಳು ಪ್ರತಿಭಟನೆ ಮಾಡಿದ್ದರು. ‘ಆದಿಪುರುಷ್​’ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿರುವ ಸೈಫ್​ ಅವರು ರಾವಣ ಒಳ್ಳೆಯವನು ಎಂಬರ್ಥದಲ್ಲಿ ಹೇಳಿಕೆ ನೀಡಿ ಅನೇಕರ ಕೆಂಗಣ್ಣಿಗೆ ಗುರಿಯಾದರು. ಈಗ ಅವರ ಹೊಸ ಸಿನಿಮಾದ ಒಂದು ಪೋಸ್ಟರ್​ ನೋಡಿದ ಬಳಿಕ ಮತ್ತೆ ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೈಫ್​ ಅಲಿ ಖಾನ್​ ಅವರು ‘ಭೂತ್​ ಪೊಲೀಸ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೊಂದು ಹಾರರ್​ ಕಾಮಿಡಿ ಶೈಲಿಯ ಸಿನಿಮಾ ಆಗಿದ್ದ್ದು, ಅದಕ್ಕೆ ತಕ್ಕಂತೆಯೇ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಅಷ್ಟಕ್ಕೂ ಈ ಪೋಸ್ಟರ್​ನಲ್ಲಿ ಅಂತಹ ಆಕ್ಷೇಪಾರ್ಹ ಅಂಶ ಏನಿದೆ? ಸೂಕ್ಷ್ಮವಾಗಿ ಗಮನಿಸಿದಾಗ ಸೈಫ್​ ಅವರ ಹಿನ್ನೆಲೆಯಲ್ಲಿ ಹಿಂದೂ ಸಂತರು ಇರುವುದು ಕಾಣಿಸುತ್ತಿದೆ. ಅದನ್ನು ನೋಡಿದ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಕಿಡಿಕಾರುತ್ತಿದ್ದಾರೆ. ಆ ಸೈಫ್​ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

‘ಈ ಸಿನಿಮಾ ಪೋಸ್ಟರ್​ನಲ್ಲಿ ಹಿಂದೂ ಸಂತರು ಯಾಕೆ ಇದ್ದಾರೆ? ಇದರಲ್ಲಿ ಮುಸ್ಲಿಂ ಮೌಲ್ವಿ ಯಾಕೆ ಇಲ್ಲ? ತಾಂಡವ್​ ವಿವಾದದಿಂದ ಸೈಫ್​ ಯಾವುದೇ ಪಾಠ ಕಲಿತಿಲ್ಲ ಎನಿಸುತ್ತದೆ’ ಎಂದು ಅನೇಕರು ಟ್ವೀಟ್​ ಮಾಡುತ್ತಿದ್ದಾರೆ. ಅಲ್ಲದೆ, ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂಬ ಅಭಿಯಾನ ಕೂಡ ಟ್ವಿಟರ್​ನಲ್ಲಿ ಶುರುವಾಗಿದೆ. ‘ಭೂತ್​ ಪೊಲೀಸ್​’ ಚಿತ್ರದಲ್ಲಿ ಅರ್ಜುನ್​ ಕಪೂರ್​, ಜಾಕ್ವಲೀನ್​ ಫರ್ನಾಂಡೀಸ್​, ಯಾಮಿ ಗೌತಮ್​ ಮುಂತಾದವರು ನಟಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಸೈಫ್​ ಪತ್ನಿ ಕರೀನಾ ಕಪೂರ್​ ಖಾನ್​ ಅವರ ಹೆಸರು ಕೂಡ ಇಂಥದ್ದೇ ವಿವಾದದಲ್ಲಿ ಸಿಲುಕಿಕೊಂಡಿತ್ತು. ಸಿನಿಮಾವೊಂದರಲ್ಲಿ ಸೀತೆಯ ಪಾತ್ರ ಮಾಡಲು ಕರೀನಾ ಕಪೂರ್​ ಕೋಟಿಗಟ್ಟಲೆ ಸಂಭಾವನೆ ಕೇಳುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು. ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದ ಯಾವುದೇ ನಟಿಯಿಂದ ಸೀತೆಯ ಪಾತ್ರ ಮಾಡಿಸಬಾರದು ಎಂದು ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ವಿವಾದ ತಣ್ಣಗಾಯಿತು ಎನ್ನುವಾಗಲೇ ಸೈಫ್​ ಅವರ ‘ಭೂತ್​ ಪೊಲೀಸ್​’ ಚಿತ್ರವೀಗ ಕಿರಿಕ್​ ಮಾಡಿಕೊಂಡಿದೆ.

ಇದನ್ನೂ ಓದಿ:

ಕರೀನಾ ಕಪೂರ್​ ಸೀತೆ ಪಾತ್ರ ಮಾಡುವಂತಿಲ್ಲ; ಇದಕ್ಕೂ ಸೈಫ್​ ಅಲಿ ಖಾನ್​ಗೂ ಏನು ಸಂಬಂಧ?

ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ