AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saif Ali Khan: ‘ಆದಿಪುರುಷ್​’ ಪ್ರಮೋಷನ್​ನಿಂದ ದೂರ ಉಳಿಯಲಿದ್ದಾರೆ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್

ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಇದಕ್ಕೆ ತಕ್ಕಂತೆ ಸೈಫ್ ಅಲಿ ಖಾನ್ ಅವರು ಪ್ರಮೋಷನ್​ಗೆ ಡೇಟ್ಸ್ ನೀಡಿದ್ದರು.

Saif Ali Khan: ‘ಆದಿಪುರುಷ್​’ ಪ್ರಮೋಷನ್​ನಿಂದ ದೂರ ಉಳಿಯಲಿದ್ದಾರೆ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 27, 2023 | 7:08 AM

Share

‘ಆದಿಪುರುಷ್’ ಸಿನಿಮಾ ಸಾಕಷ್ಟು ಚರ್ಚೆಯಲ್ಲಿದೆ. ಈ ಚಿತ್ರದ ಬಗ್ಗೆ ಹುಟ್ಟಿಕೊಂಡ ಟ್ರೋಲ್​​​ಗಳು ಒಂದೆರಡಲ್ಲ. ಈ ಬೆಳವಣಿಗೆ ಚಿತ್ರತಂಡಕ್ಕೆ ಬೇಸರ ಮೂಡಿಸಿದೆ. ಆದರೆ, ನೂರಾರು ಕೋಟಿ ರೂಪಾಯಿ ಹಾಕಿ ಸಿನಿಮಾ ಮಾಡಿದ ಮೇಲೆ ಅದನ್ನು ರಿಲೀಸ್ ಮಾಡಲೇಬೇಕು. ಸದ್ಯ, ‘ಆದಿಪುರುಷ್’ (Adipurush) ತಂಡ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿದೆ. ಮೇ ತಿಂಗಳಿಂದ ಸಿನಿಮಾಗೆ ಭರ್ಜರಿ ಪ್ರಮೋಷನ್ ನೀಡಲು ನಿರ್ದೇಶಕ ಓಂ ರಾವತ್​ ಪ್ಲ್ಯಾನ್ ರೂಪಿಸಿದ್ದಾರೆ. ಪ್ರಭಾಸ್ (Prabhas) ಕೂಡ ಪ್ರಮೋಷನ್​​ಗೆ ಡೇಟ್ ನೀಡಿದ್ದಾರೆ. ಆದರೆ, ಸೈಫ್ ಅಲಿ ಖಾನ್ ಅವರು ಈ ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಕಳೆದ ವರ್ಷ ನವರಾತ್ರಿ ಸಂದರ್ಭದಲ್ಲಿ ‘ಆದಿಪುರುಷ್’ ಟೀಸರ್ ರಿಲೀಸ್ ಆಯಿತು. ಟೀಸರ್ ನೋಡಿದ ಅನೇಕರು ಟೀಕೆ ಮಾಡಿದರು. ಅದರಲ್ಲೂ ರಾವಣನ ಪಾತ್ರದ ಬಗ್ಗೆ ಕಟುವಾಗಿ ಟೀಕೆ ಮಾಡಲಾಯಿತು. ಒಂದಷ್ಟು ಮಂದಿ ರಾವಣನ ಪಾತ್ರ ಇಷ್ಟ ಆಗದೇ ಟೀಕೆ ಮಾಡಿದರೆ ಮತ್ತೊಂದಷ್ಟು ಮಂದಿ ಈ ಪಾತ್ರವನ್ನು ಸೈಫ್ ಅಲಿ ಖಾನ್ ಮಾಡಿದ್ದಾರೆ ಎಂದು ಟೀಕಿಸಿದರು. ಈ ಬೆಳವಣಿಗೆ ಚಿತ್ರತಂಡಕ್ಕೆ ಬೇಸರ ತಂದಿತ್ತು. ಈ ಕಾರಣಕ್ಕೆ ಗ್ರಾಫಿಕ್ಸ್​ನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲು ನಿರ್ಧರಿಸಿದ ನಿರ್ದೇಶಕರು ರಿಲೀಸ್ ದಿನಾಂಕ ಮುಂದಕ್ಕೆ ಹಾಕಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಇದಕ್ಕೆ ತಕ್ಕಂತೆ ಸೈಫ್ ಅಲಿ ಖಾನ್ ಅವರು ಪ್ರಮೋಷನ್​ಗೆ ಡೇಟ್ಸ್ ನೀಡಿದ್ದರು. ಆದರೆ, ಸಿನಿಮಾ ರಿಲೀಸ್ ದಿನಾಂಕ ಜೂನ್​16ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ಮೇ ಹಾಗೂ ಜೂನ್ ತಿಂಗಳ ಆರಂಭದಲ್ಲಿ ಸಿನಿಮಾಗೆ ಪ್ರಮೋಷನ್ ಮಾಡಬೇಕಿದೆ. ಆದರೆ, ಈ ಸಂದರ್ಭದಲ್ಲಿ ಸೈಫ್ ಅಲಿ ಖಾನ್ ಭಾರತದಲ್ಲಿ ಇರುವುದಿಲ್ಲ ಎನ್ನಲಾಗಿದೆ.

ಸೆಲೆಬ್ರಿಟಿಗಳು ಬೇಸಿಗೆಯಲ್ಲಿ ವೆಕೇಶನ್ ತೆರಳುತ್ತಾರೆ. ಸೈಫ್ ಅಲಿ ಖಾನ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಈ ಬೇಸಿಗೆಯಲ್ಲಿ ಪತ್ನಿ-ಮಕ್ಕಳ ಜೊತೆ ವಿದೇಶಕ್ಕೆ ಹಾರಲಿದ್ದಾರೆ. ಹೀಗಾಗಿ, ಅವರು ಪ್ರಮೋಷನ್​ನಲ್ಲಿ ಭಾಗಿ ಆಗಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ:  ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

ಆದಿಪುರುಷ್ ಸಿನಿಮಾ ರಾಮಾಯಣ ಆಧರಿಸಿ ಸಿದ್ಧಗೊಂಡಿದೆ. ಸಂಪೂರ್ಣ ರಾಮಾಯಣವನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆಯೇ ಎನ್ನುವ ಪ್ರಶ್ನೆಯೂ ಇದೆ. ಓಂ ರಾವತ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಂಡರೆ, ಕೃತಿ ಸನೋನ್ ಸೀತೆಯ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!