AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ಕಿಕ್ 2’ ಚಿತ್ರಕ್ಕೆ ನಡೆದಿದೆ ಸಿದ್ಧತೆ; ಸೋಲಿನ ಸುಳಿಯಲ್ಲಿರುವ ಸಲ್ಲುಗೆ ಸಹಾಯ ಮಾಡುತ್ತಾ ಸೀಕ್ವೆಲ್?

‘ಕಿಕ್’ ಸಿನಿಮಾ ಮೂಲಕ ನಿರ್ಮಾಪಕ ಸಾಜಿದ್ ನಿರ್ದೇಶಕರಾಗಿ ಬಡ್ತಿ ಪಡೆದರು. ಈಗ 10 ವರ್ಷಗಳ ಬಳಿಕ ಇದಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಈ ಬಗ್ಗೆ ಸಾಜಿದ್ ಮಾಹಿತಿ ನೀಡಿದ್ದಾರೆ.

Salman Khan: ‘ಕಿಕ್ 2’ ಚಿತ್ರಕ್ಕೆ ನಡೆದಿದೆ ಸಿದ್ಧತೆ; ಸೋಲಿನ ಸುಳಿಯಲ್ಲಿರುವ ಸಲ್ಲುಗೆ ಸಹಾಯ ಮಾಡುತ್ತಾ ಸೀಕ್ವೆಲ್?
ರಾಜೇಶ್ ದುಗ್ಗುಮನೆ
|

Updated on: Jul 14, 2023 | 2:39 PM

Share

ನಟ ಸಲ್ಮಾನ್ ಖಾನ್ (Salman Khan) ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅವರ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಮಿನಿಮಮ್ ಬಿಸ್ನೆಸ್ ಮಾಡುತ್ತಿದ್ದ ಕಾಲ ಒಂದಿತ್ತು. ಆದರೆ, ಈಗ ಅದು ಬದಲಾಗಿದೆ. ಸಲ್ಮಾನ್ ಖಾನ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಸದ್ಯ ‘ಟೈಗರ್ 3’ ಚಿತ್ರದ (Tiger 3) ಮೂಲಕ ಅವರು ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈ ಮಧ್ಯೆ ‘ಕಿಕ್​ 2’ ಚಿತ್ರವನ್ನೂ ಅವರು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ನಿರ್ದೇಶಕ ಹಾಗೂ ನಿರ್ಮಾಪಕ ಸಾಜಿದ್ ನಾಡಿಯಾದ್ವಾಲಾ ಅವರಿಂದ ಘೋಷಣೆ ಆಗಿದೆ.

‘ಕಿಕ್’ ಸಿನಿಮಾ ಮೂಲಕ ನಿರ್ಮಾಪಕ ಸಾಜಿದ್ ನಿರ್ದೇಶಕರಾಗಿ ಬಡ್ತಿ ಪಡೆದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ನಟಿಸಿದ್ದರು. 2014ರಲ್ಲಿ ಈ ಚಿತ್ರ ತೆರೆಗೆ ಬಂದಿತ್ತು. ಈಗ 10 ವರ್ಷಗಳ ಬಳಿಕ ಇದಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಈ ಬಗ್ಗೆ ಸಾಜಿದ್ ಮಾಹಿತಿ ನೀಡಿದ್ದಾರೆ.

‘ಕಿಕ್ 2 ಸಿನಿಮಾದ ಸ್ಕ್ರಿಪ್ಟ್ ಸಂಪೂರ್ಣವಾಗಿ ರೆಡಿ ಇದೆ. ಆದರೆ ಇದಕ್ಕೆ ಮತ್ತಷ್ಟು ಸಮಯ ಬೇಕು. ಜನರು ಥಿಯೇಟರ್​ಗೆ ಹೆಚ್ಚಿನ ಸಂಖ್ಯೆಯಲ್ಲಿ ಬರೋಕೆ ಆರಂಭಿಸಿದ ಮೇಲೆ ನಾವು ಈ ಸಿನಿಮಾ ಮಾಡುತ್ತೇವೆ’ ಎಂದು ಸಾಜಿದ್ ಹೇಳಿದ್ದಾರೆ.

ಕೊವಿಡ್ ಕಾಣಿಸಿಕೊಂಡ ಬಳಿಕ ಜನರು ಒಟಿಟಿಯತ್ತ ಹೆಚ್ಚು ವಾಲಿದರು. ಸ್ಟಾರ್ ಸಿನಿಮಾಗಳ ಬಗ್ಗೆ ಸ್ವಲ್ಪ ನೆಗೆಟಿವ್ ವಿಮರ್ಶೆ ಸಿಕ್ಕರೂ ಜನರು ಥಿಯೇಟರ್​ಗೆ ಹೋಗದೆ ಒಟಿಟಿಯಲ್ಲಿ ಸಿನಿಮಾ ಬರಲಿ ಎಂದು ಕಾದು ಕೂರುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಟ್ರೆಂಡ್ ಬದಲಾಗುವುದು ಸದ್ಯಕ್ಕಂತೂ ಅನುಮಾನ. ಹೀಗಿರುವಾಗ ‘ಕಿಕ್ 2’ ಸಿನಿಮಾ ಯಾವಾಗ ಸಿದ್ಧವಾಗುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ಗೆ ಬಂತು ಮದುವೆ ಪ್ರಪೋಸಲ್​; ಶಾರುಖ್​ ಖಾನ್​ ಹೆಸರು ಹೇಳಿ ತಪ್ಪಿಸಿಕೊಂಡ ನಟ

‘ಸಾಜಿದ್’ ಅವರು ‘ಕಿಕ್’ ಬಳಿಕ ‘ಹೌಸ್​ಫುಲ್ 5’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅಕ್ಷಯ್ ಕುಮಾರ್ ಸೇರಿ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ಹೌಸ್​ಫುಲ್’ ಫ್ರಾಂಚೈಸ್​ನ ಐದನೇ ಸಿನಿಮಾ ಇದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ