Pushpa 2: ‘ಪುಷ್ಪ 2’ ಚಿತ್ರಕ್ಕೆ ಭಯಾನಕ ವಿಲನ್​ ಎಂಟ್ರಿ? ವಿದೇಶಿ ನಟನಿಗೆ ಮಣೆ ಹಾಕಿದ ನಿರ್ದೇಶಕ ಸುಕುಮಾರ್​

| Updated By: ಮದನ್​ ಕುಮಾರ್​

Updated on: Dec 04, 2022 | 12:43 PM

Allu Arjun | Sajjad Delafrooz: ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಚಿತ್ರದಲ್ಲಿ ಹೀರೋ ಸಾಮ್ರಾಜ್ಯ ದೊಡ್ಡದಾಗಲಿದೆ. ಅದಕ್ಕೆ ತಕ್ಕಂತೆ ಪಾತ್ರವರ್ಗವನ್ನು ಆಯ್ಕೆ ಮಾಡಲಾಗುತ್ತಿದೆ ಎಂಬ ಮಾತು ಕೇಳಿಬಂದಿದೆ.

Pushpa 2: ‘ಪುಷ್ಪ 2’ ಚಿತ್ರಕ್ಕೆ ಭಯಾನಕ ವಿಲನ್​ ಎಂಟ್ರಿ? ವಿದೇಶಿ ನಟನಿಗೆ ಮಣೆ ಹಾಕಿದ ನಿರ್ದೇಶಕ ಸುಕುಮಾರ್​
ಅಲ್ಲು ಅರ್ಜುನ್, ಸಾಜದ್ ಡೆಲಾಫ್ರೂಜ್
Follow us on

ಬಹುನಿರೀಕ್ಷಿತ ‘ಪುಷ್ಪ 2’ (Pushpa 2) ಸಿನಿಮಾದ ಬಗ್ಗೆ ಹಲವು ಬಗೆಯ ಗಾಸಿಪ್​ಗಳು ಕೇಳಿಬರುತ್ತಲೇ ಇವೆ. ಆದರೆ ಆ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡದವರಿಂದ ಸ್ಪಷ್ಟನೆ ಸಿಗುತ್ತಿಲ್ಲ. ಚಿತ್ರದ ಪಾತ್ರವರ್ಗದ ಬಗ್ಗೆ ಈಗ ಲೇಟೆಸ್ಟ್​ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಸೇರಿದಂತೆ ಅನೇಕರು ಮುಖ್ಯ​ ಪಾತ್ರಗಳನ್ನು ಮಾಡುತ್ತಿದ್ದಾರೆ. ಖಳನಾಯಕರ ಸಾಲಿಗೆ ವಿದೇಶಿ ನಟ ಸಜ್ಜಾದ್ ಡೆಲಾಫ್ರೂಜ್ (Sajjad Delafrooz) ಅವರು ಕೂಡ ಸೇರ್ಪಡೆ ಆಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಹಾಲಿವುಡ್​, ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುವ ಮೂಲಕ ಸಜ್ಜಾದ್ ಅವರು ಖ್ಯಾತಿ ಗಳಿಸಿದ್ದಾರೆ. ಅವರು ಅಲ್ಲು ಅರ್ಜುನ್​ (Allu Arjun) ಎದುರು ವಿಲನ್​ ಆಗಿ ಅಬ್ಬರಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

2021ರಲ್ಲಿ ತೆರೆಕಂಡ ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಯಿತು. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಯಶಸ್ಸು ಕಂಡಿದ್ದರಿಂದ ಸಹಜವಾಗಿಯೇ ಸೀಕ್ವೆಲ್​ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಆ ನಿರೀಕ್ಷೆಯ ಮಟ್ಟಕ್ಕೆ ಸಿನಿಮಾವನ್ನು ಕಟ್ಟಿಕೊಡಲು ನಿರ್ದೇಶಕ ಸುಕುಮಾರ್​ ಅವರು ಪ್ರಯತ್ನಿಸುತ್ತಿದ್ದಾರೆ. ವಿಲನ್​ ಸ್ಟ್ರಾಂಗ್ ಆಗಿ ಇದ್ದಷ್ಟು ಹೀರೋ ಗತ್ತು ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಆ ಕಾರಣಕ್ಕಾಗಿ ಖಡಕ್​ ವಿಲನ್​ಗಳನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಸಜ್ಜಾದ್ ಡೆಲಾಫ್ರೂಜ್ ಅವರು ಇರಾನ್​ ಮೂಲದ ನಟ. ಸಲ್ಮಾನ್​ ಖಾನ್​ ನಟನೆಯ ‘ಟೈಗರ್​ ಜಿಂದಾ ಹೈ’ ಚಿತ್ರದಲ್ಲಿ ಅವರು ಭಯಾನಕ ವಿಲನ್​ ಪಾತ್ರ ಮಾಡಿ ಸೈ ಎನಿಸಿಕೊಂಡರು. ವೆಬ್​ ಸಿರೀಸ್​ಗಳಲ್ಲಿಯೂ ಅವರು ಖಳನಾಯಕನಾಗಿ ಅಬ್ಬರಿಸಿದ್ದಾರೆ. ಈಗ ‘ಪುಷ್ಪ 2’ ಚಿತ್ರದಲ್ಲಿ ನಟಿಸುವ ಚಾನ್ಸ್​ ಅವರಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ
‘ಪುಷ್ಪ 2’ ಚಿತ್ರದಲ್ಲಿ ಅಸಲಿ ವಿಲನ್ ಯಾರು? ಅಲ್ಲು ಅರ್ಜುನ್ ಚಿತ್ರದಲ್ಲಿದೆ ದೊಡ್ಡ ಟ್ವಿಸ್ಟ್
‘ಪುಷ್ಪ 2’ ಚಿತ್ರದ ಮುಹೂರ್ತಕ್ಕೆ ಗೈರಾದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ; ಕಾರಣ ಏನು?
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

‘ಪುಷ್ಪ 2’ ಸಿನಿಮಾದ ಕಥೆಯ ಮೇಲೆ ನಿರ್ದೇಶಕ ಸುಕುಮಾರ್​ ಅವರು ಸಾಕಷ್ಟು ಹೋಮ್​ ವರ್ಕ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕಥಾನಾಯಕ ಪುಷ್ಪರಾಜ್​ನ ಸಾಮ್ರಾಜ್ಯ ದೊಡ್ಡದಾಗಲಿದೆ. ರಕ್ತ ಚಂದನ ಸಾಗಣೆಯ ದಂಧೆ ವಿದೇಶಕ್ಕೂ ಹಬ್ಬಲಿದೆ. ಹಾಗಾಗಿ ವಿವಿಧ ದೇಶಗಳಿಗೆ ಪುಷ್ಪರಾಜ್​ ತೆರಳುತ್ತಾನೆ. ಅಲ್ಲಿ ಅನೇಕ ವಿಲನ್​ಗಳನ್ನು ಎದುರು ಹಾಕಿಕೊಳ್ಳುತ್ತಾನೆ. ಈ ರೀತಿಯಾಗಿ ಕಥೆ ಸಾಗಲಿದೆ. ಅದಕ್ಕೆ ತಕ್ಕಂತೆ ಪಾತ್ರವರ್ಗವನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಅಲ್ಲು ಅರ್ಜುನ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ಮುಂದುವರಿಯಲಿದ್ದಾರೆ. ಅವರ ಪಾತ್ರದ ಬಗ್ಗೆಯೂ ಅನೇಕ ಅಂತೆ-ಕಂತೆಗಳು ಹಬ್ಬಿವೆ. ಅಲ್ಲು ಅರ್ಜುನ್​ ಅವರು ಇನ್ನಷ್ಟೇ ಈ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:43 pm, Sun, 4 December 22