AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್​ ಆಫೀಸ್​ನಲ್ಲಿ ಸ್ಟಾರ್​ ಸಿನಿಮಾಗಳ ಪೈಪೋಟಿ; ಈ ವಾರ ಬಾಲಿವುಡ್​ ಮಂದಿ ಎದುರು ‘ಸಖತ್​’​ ಮುಖಾಮುಖಿ

ಕನ್ನಡದ ‘ಸಖತ್​’, ಹಿಂದಿಯ ‘ಅಂತಿಮ್​: ದಿ ಫೈನಲ್​ ಟ್ರುತ್​’ ಹಾಗೂ ‘ಸತ್ಯಮೇವ ಜಯತೆ 2’ ಸಿನಿಮಾಗಳು ಈ ವಾರ ತೆರೆಕಂಡಿವೆ. ಗಲ್ಲಾಪೆಟ್ಟಿಗೆಯಲ್ಲಿ ಸ್ಟಾರ್​ ನಟರ ಚಿತ್ರಗಳು ಮುಖಾಮುಖಿ ಆಗಿವೆ.

ಬಾಕ್ಸ್​ ಆಫೀಸ್​ನಲ್ಲಿ ಸ್ಟಾರ್​ ಸಿನಿಮಾಗಳ ಪೈಪೋಟಿ; ಈ ವಾರ ಬಾಲಿವುಡ್​ ಮಂದಿ ಎದುರು ‘ಸಖತ್​’​ ಮುಖಾಮುಖಿ
ಸತ್ಯಮೇವ ಜಯತೆ 2, ಸಖತ್​, ಅಂತಿಮ್​: ದಿ ಫೈನಲ್​ ಟ್ರುತ್
TV9 Web
| Edited By: |

Updated on: Nov 26, 2021 | 9:35 AM

Share

ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಚಿತ್ರರಂಗ ಈಗ ಮತ್ತೆ ಹಳೇ ಚಾರ್ಮ್​ ಪಡೆದುಕೊಂಡಿದೆ. ಬ್ಯಾಕ್​ ಟು ಬ್ಯಾಕ್​ ಸ್ಟಾರ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಬಿಡುಗಡೆಗಾಗಿ ಕಾದು ಕುಳಿತಿದ್ದ ಅನೇಕ ಚಿತ್ರಗಳ ನಡುವೆ ಈಗ ಕ್ಲ್ಯಾಶ್​ ಕೂಡ ಆಗುತ್ತಿದೆ. ಇದರಿಂದ ಬಾಕ್ಸ್​ ಆಫೀಸ್​ನಲ್ಲಿ ಸ್ಟಾರ್​ ನಟರ ನಡುವೆ ಭಾರಿ ಪೈಪೋಟಿ ಏರ್ಪಡುತ್ತಿದೆ. ಯಾವ ಚಿತ್ರ ಎಷ್ಟು ಚಿತ್ರಮಂದಿರ ಪಡೆದುಕೊಂಡಿದೆ ಎಂಬುದು ಕೂಡ ಮುಖ್ಯವಾಗುತ್ತದೆ. ಥಿಯೇಟರ್​ಗಾಗಿ ಸ್ಟಾರ್​ ನಟರ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಈ ವಾರ (ನ.26) ಬಹುನಿರೀಕ್ಷಿತ ಸಿನಿಮಾಗಳು ತೆರೆಕಂಡಿವೆ. ಕನ್ನಡದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್​ (Golden Star Ganesh) ನಟನೆಯ ‘ಸಖತ್​’ (Sakath Kannada Movie) ಬಿಡುಗಡೆ ಆಗಿದೆ. ಬಾಲಿವುಡ್​ನಲ್ಲಿ ಸಲ್ಮಾನ್​ ಖಾನ್​ ಅಭಿನಯದ ‘ಅಂತಿಮ್​: ದಿ ಫೈನಲ್​ ಟ್ರುತ್​’ (Antim The Final Truth) ರಿಲೀಸ್​ ಆಗಿದೆ. ಅವರಿಗೆ ಪೈಪೋಟಿ ನೀಡಲು ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ 2’ (Satyameva Jayate 2) ಕೂಡ ತೆರೆಕಂಡಿದೆ.

ಗಣೇಶ್​ ‘ಸಖತ್​’ ಎಂಟ್ರಿ

ನಿರ್ದೇಶಕ ಸಿಂಪಲ್​ ಸುನಿ ಮತ್ತು ‘ಗೋಲ್ಡನ್​ ಸ್ಟಾರ್’ ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಸಖತ್​’ ಸಿನಿಮಾದಲ್ಲಿ ನಾಯಕಿಯರಾಗಿ ನಿಶ್ವಿಕಾ ನಾಯ್ಡು ಮತ್ತು ಸುರಭಿ ಪುರಾಣಿಕ್​ ನಟಿಸಿದ್ದಾರೆ. ಅಂಧನ ಪಾತ್ರದಲ್ಲಿ ಗಣೇಶ್​ ಕಾಣಿಸಿಕೊಂಡಿದ್ದಾರೆ. ‘ಚಮಕ್​’ ಬಳಿಕ ಎರಡನೇ ಬಾರಿಗೆ ಗಣೇಶ್​ ಮತ್ತು ಸುನಿ ಜತೆಯಾಗಿ ಕೆಲಸ ಮಾಡಿದ್ದಾರೆ. ಹಾಡುಗಳ ಮೂಲಕ ಜೂಡಾ ಸ್ಯಾಂಡಿ ಗಮನ ಸೆಳೆದಿದ್ದಾರೆ.

ಸಲ್ಲು ಭರ್ಜರಿ ಫೈಟಿಂಗ್​

‘ಅಂತಿಮ್​: ದಿ ಫೈನಲ್​ ಟ್ರುತ್​’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ನಟಿಸಿದ್ದಾರೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲಿವೆ. ಈ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಷನ್​ ದೃಶ್ಯಗಳಿವೆ ಎಂಬುದಕ್ಕೆ ಟ್ರೇಲರ್​ ಮೂಲಕವೇ ಸಾಕ್ಷಿ ಸಿಕ್ಕಿತ್ತು. ಆ ಕಾರಣದಿಂದಲೂ ‘ಅಂತಿಮ್​: ದಿ ಫೈನಲ್​ ಟ್ರುತ್​’ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ.

‘ಸತ್ಯಮೇವ ಜಯತೆ 2’ ತೆರೆಗೆ

ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬಂದಿದೆ. ಈ ಚಿತ್ರ ನವೆಂಬರ್​ 25ರಂದು ರಿಲೀಸ್​ ಆಗಿದೆ. ಈ ಸಿನಿಮಾದಲ್ಲಿ ಜಾನ್​ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿಸಿತ್ತು. ಸಲ್ಮಾನ್​ ಖಾನ್​ ಸಿನಿಮಾ ಎದುರು ಸ್ಪರ್ಧಿಗೆ ಇಳಿದಿರುವ ಈ ಚಿತ್ರ ಅಂತಿಮವಾಗಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ಇದನ್ನೂ ಓದಿ:

‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು

‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ