AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ 2’ ನಿಂತು ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ

ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ನಡುವೆ ಭಿನ್ನಾಭಿಪ್ರಾಯ ಬಂದ ಕಾರಣದಿಂದಾಗಿ ‘ಸಲಾರ್ 2’ ಸಿನಿಮಾ ರದ್ದಾಗಿದೆ. ಆ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುತ್ತಿಲ್ಲ ಎಂಬ ಸುದ್ದಿ ಹರಿದಾಡಿದ್ದು, ಸುದ್ದ ಬಗ್ಗೆ ಹೊಂಬಾಳೆ ಪ್ರತಿಕ್ರಿಯಿಸಿದೆ.

‘ಸಲಾರ್ 2’ ನಿಂತು ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ
ಮಂಜುನಾಥ ಸಿ.
|

Updated on: May 26, 2024 | 4:21 PM

Share

ಕಳೆದ ವರ್ಷಾಂತ್ಯಕ್ಕೆ ಬಿಡುಗಡೆ ಆಗಿದ್ದ ಪ್ರಭಾಸ್ ನಟನೆಯ ‘ಸಲಾರ್’ (Salaar) ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಭಾಸ್ ಜೊತೆ ಪೃಥ್ವಿರಾಜ್ ಸುಕುಮಾರನ್ ಸಹ ನಟಿಸಿದ್ದು, ಹಲವು ಸೆಲೆಬ್ರಿಟಿಗಳು ನಟಿಸಿರುವ ಈ ಸಿನಿಮಾ ದೊಡ್ಡ ಹಿಟ್ ಆಗಿದೆ. ಈ ಸಿನಿಮಾದ ಎರಡನೇ ಭಾಗ ಶೀಘ್ರವೇ ಬರಲಿದೆ ಎಂದು ಪ್ರಶಾಂತ್ ನೀಲ್ ಹೇಳಿದ್ದರು. ಆದರೆ ಇತ್ತೀಚೆಗೆ ಈ ಬಗ್ಗೆ ಕೆಲವು ಸುದ್ದಿಗಳು ಹರಿದಾಡಿದ್ದು ‘ಸಲಾರ್ 2’ ನಿಂತು ಹೋಗಿದೆ ಎನ್ನಲಾಗಿತ್ತು. ಆದರೆ ಈ ಸುದ್ದಿಗೆ ಈಗ ಹೊಂಬಾಳೆಯವರೇ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ನಡುವೆ ಭಿನ್ನಾಭಿಪ್ರಾಯಗಳು ಉಂಟಾದ ಕಾರಣ ‘ಸಲಾರ್ 2’ ಸಿನಿಮಾ ನಿಂತು ಹೋಗಿದೆ. ‘ಸಲಾರ್ 2’ ಸಿನಿಮಾದ ಚಿತ್ರೀಕರಣ ರದ್ದಾಗಿದೆ. ಹೊಂಬಾಳೆ ಸಹ ಈ ಸಿನಿಮಾದಿಂದ ಹಿಂದೆ ಸರಿದಿದೆ ಎನ್ನುವ ಮಾತುಗಳು ತುಸು ಜೋರಾಗಿ ಕೇಳಿ ಬಂದಿತ್ತು. ಆದರೆ ಇದಕ್ಕೆಲ್ಲ ಕೇವಲ ಒಂದು ಫೋಟೊ, ಒಂದು ಲೈನ್​ನಲ್ಲಿ ಉತ್ತರ ನೀಡಿದೆ ಹೊಂಬಾಳೆ.

‘ಸಲಾರ್’ ಸಿನಿಮಾದ ಚಿತ್ರೀಕರಣ ಸಮಯದಲ್ಲಿ ‘ಸಲಾರ್’ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಮಾಡಲಾಗಿತ್ತು. ಅದೇ ಖಾತೆಯಲ್ಲಿ ಈಗ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಒಟ್ಟಿಗೆ ಜೋರಾಗಿ ನಗುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದು, ‘ಅವರಿಗೆ ನಗು ನಿಯಂತ್ರಿಸಿಕೊಳ್ಳಲೇ ಸಾಧ್ಯವಾಗುತ್ತಿಲ್ಲ’ ಎಂದು ಬರೆಯಲಾಗಿದೆ. ಅಂದರೆ ಈ ಸುದ್ದಿ ಕೇಳಿ ಅವರಿಗೆ ನಗು ತಡೆಯಲಾಗುತ್ತಿಲ್ಲ ಎಂಬರ್ಥದಲ್ಲಿ ಚಿತ್ರ ಹಾಗೂ ಸಾಲನ್ನು ಬಳಲಾಗಿದೆ. ಆ ಮೂಲಕ ‘ಸಲಾರ್ 2’ ನಿಂತು ಹೋಗಿದೆ ಎಂಬ ಸುದ್ದಿ ಸುಳ್ಳು ಎಂಬುದನ್ನು ಪರೋಕ್ಷವಾಗಿ ಖಾತ್ರಿ ಪಡಿಸಿದೆ.

ಇದನ್ನೂ ಓದಿ:ಯಾವಾಗ ಶುರು ಆಗಲಿದೆ ‘ಸಲಾರ್​ 2’ ಶೂಟಿಂಗ್​? ಪ್ರಭಾಸ್​ ಫ್ಯಾನ್ಸ್​ಗೆ ಇಲ್ಲಿದೆ ಸಿಹಿ ಸುದ್ದಿ

‘ಸಲಾರ್’ ಸಿನಿಮಾ 2023 ರ ಡಿಸೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾನಲ್ಲಿ ಪ್ರಭಾಸ್, ಪೃಥ್ವಿರಾಜ್, ಜಗಪತಿ ಬಾಬು, ಶ್ರುತಿ ಹಾಸನ್, ಬಾಬಿ ಸಿಂಹ, ಟೀನು ಆನಂದ್, ಬ್ರಹ್ಮಾಜಿ ಇನ್ನೂ ಹಲವಾರು ಮಂದಿ ಸೆಲೆಬ್ರಿಟಿಗಳು ಒಟ್ಟಿಗೆ ನಟಿಸಿದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಇಬ್ಬರು ಗೆಳೆಯರ ಕತೆ ಇದಾಗಿದ್ದು, ಮೊದಲ ಭಾಗ ಮುಗಿವ ವೇಳೆಗೆ ಆ ಇಬ್ಬರು ಗೆಳೆಯರೇ ಪರಸ್ಪರ ಎದುರಾಳಿಗಳಾಗುವ ಮುನ್ಸೂಚನೆ ದೊರೆತಿದೆ. ಎರಡನೇ ಭಾಗ ಯಾವಾಗ ಬಿಡುಗಡೆ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪ್ರಶಾಂತ್ ನೀಲ್, ಜೂ ಎನ್​ಟಿಆರ್ ಗಾಗಿ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸಲು ರೆಡಿಯಾಗುತ್ತಿದ್ದಾರೆ. ಪ್ರಶಾಂತ್ ನೀಲ್ ಸಿನಿಮಾ ನಿರ್ದೇಶನಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಹಾಗಾಗಿ ‘ಡ್ರ್ಯಾಗನ್’ ಸಿನಿಮಾ ಮುಗಿಸಲು ಸುಮಾರು ಎರಡು ವರ್ಷವಾದರೂ ಸಮಯ ಬೇಕು ಅವರಿಗೆ. ಅದಾದ ಮೇಲಷ್ಟೆ ‘ಸಲಾರ್ 2’ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ‘‘

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು