AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಸ್ಪರ್ಶಿಸಿ ಪ್ರಭಾಸ್​ ಅಭಿಮಾನಿ ಸಾವು; ‘ಸಲಾರ್​’ ಬಿಡುಗಡೆ ಖುಷಿಯ ನಡುವೆ ಕಹಿ ಸುದ್ದಿ

ಧರ್ಮಾವರಂನ ರಂಗ ಥಿಯೇಟರ್ ಮುಂಭಾಗದ ಮನೆಯೊಂದರಲ್ಲಿ ಫ್ಲೆಕ್ಸಿ ತೊಳೆಯುತ್ತಿದ್ದಾಗ ಪ್ರಭಾಸ್ ಅವರ ಅಭಿಮಾನಿ ಬಾಲರಾಜು (27) ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬಾಲರಾಜು ಅವರಿಗೆ ಪ್ರಭಾಸ್​ ಎಂದರೆ ಅಚ್ಚುಮೆಚ್ಚು. ‘ಸಲಾರ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಅವರು ಫ್ಲೆಕ್ಸ್​ ಫ್ರೇಮ್ ಮಾಡಿ ತೊಳೆದಾಗ ಕಬ್ಬಿಣದ ರಾಡ್ ಮನೆಯ ವಿದ್ಯುತ್​ ವೈರ್‌ಗಳಿಗೆ ತಗುಲಿದಾಗ ಅವಘಡ ಸಂಭವಿಸಿದೆ.

ವಿದ್ಯುತ್​ ಸ್ಪರ್ಶಿಸಿ ಪ್ರಭಾಸ್​ ಅಭಿಮಾನಿ ಸಾವು; ‘ಸಲಾರ್​’ ಬಿಡುಗಡೆ ಖುಷಿಯ ನಡುವೆ ಕಹಿ ಸುದ್ದಿ
ಪ್ರಭಾಸ್​
TV9 Web
| Edited By: |

Updated on:Dec 22, 2023 | 12:00 PM

Share

ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಪಟ್ಟಣದಲ್ಲಿ ದುರಂತ ನಡೆದಿದೆ. ಪ್ರಭಾಸ್​ ನಟನೆಯ ‘ಸಲಾರ್’ ಸಿನಿಮಾ (Salaar Movie) ಬಿಡುಗಡೆ ವೇಳೆ ವಿದ್ಯುತ್ ಶಾಕ್ ತಗುಲಿ ಅಭಿಮಾನಿಯೊಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ (ಡಿ.21) ಪಟ್ಟಣದ ರಂಗ ಥಿಯೇಟರ್ ಮುಂಭಾಗದ ಮನೆಯೊಂದರಲ್ಲಿ ಫ್ಲೆಕ್ಸ್​ ತೊಳೆಯುತ್ತಿದ್ದಾಗ ನಾಯಕ ಪ್ರಭಾಸ್ (Prabhas) ಅಭಿಮಾನಿ ಬಾಲರಾಜು (27) ವಿದ್ಯುತ್ ಸ್ಪರ್ಶಿಸಿ (Electrocution) ಮೃತಪಟ್ಟಿದ್ದಾರೆ. ಬಾಲರಾಜು ಅವರು ತಮ್ಮ ನೆಚ್ಚಿನ ನಟ ಪ್ರಭಾಸ್​ ಅಭಿನಯದ ‘ಸಲಾರ್’ ಚಿತ್ರ ನೋಡಲು ಕಾದಿದ್ದರು. ಅವರ ಸ್ನೇಹಿತರು ಫ್ಲೆಕ್ಸ್​ ಫ್ರೇಮ್ ಮಾಡಿ ತೊಳೆದಾಗ ಫ್ರೇಮ್‌ನ ಕಬ್ಬಿಣದ ರಾಡ್ ಮನೆಯ ವಿದ್ಯುತ್​ ವೈರ್‌ಗಳಿಗೆ ತಗುಲಿದಾಗ ಅವಘಡ ಸಂಭವಿಸಿದೆ. ಇದರಲ್ಲಿ ಬಾಲರಾಜು ಸಾವನ್ನಪ್ಪಿದ್ದಾರೆ. ಗಜೇಂದ್ರ ಎಂಬ ಯುವಕ ಗಾಯಗೊಂಡಿದ್ದಾನೆ.

ಇನ್ನು ನಾಲ್ವರು ಯುವಕರು ಅಪಘಾತದಿಂದ ಪಾರಾಗಿದ್ದಾರೆ. ವಿದ್ಯುತ್ ತಂತಿಗಳು ಕಡಿಮೆ ಎತ್ತರದಲ್ಲಿ ಇದ್ದಿದ್ದರಿಂದ ಅವಘಡ ಸಂಭವಿಸಿದೆ ಎಂದು ಬಾಲರಾಜು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಬಾಲರಾಜು ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಕನಗಾನಪಲ್ಲಿ ಮಂಡಲದ ಮಾಮಿಲ್ಲಪಲ್ಲಿಯಲ್ಲಿ ಕೆಲ ದಿನಗಳಿಂದ ವಾಸವಾಗಿದ್ದರು. ನಟ ಪ್ರಭಾಸ್ ಅವರ ದೊಡ್ಡ ಅಭಿಮಾನಿ ಈ ಬಾಲರಾಜು. ಮೃತರು ಪತ್ನಿ ಸಿರಿಶಾ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಬಂದು ಧರ್ಮವರಂ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಬಾಲರಾಜು ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ನಿನ್ನೆ ರಾತ್ರಿ ಮೃತನ ಸಂಬಂಧಿಕರು ಹಾಗೂ ಪ್ರಭಾಸ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ವಿದ್ಯುತ್​ ವೈರ್​ಗಳು ಕಡಿಮೆ ಎತ್ತರದಲ್ಲಿ ಇದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಬಾಲರಾಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಅಲ್ಲಿಂದ ಕಳುಹಿಸಿದರು. ಬಾಲರಾಜು ಸಾವಿನ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:55 am, Fri, 22 December 23

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!