AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ ತನಕ ಕೆಲಸ ಮಾಡಲ್ಲ ಪ್ರಭಾಸ್​; ಈ ನಿರ್ಧಾರಕ್ಕೆ ಇದೆ ಒಂದು ಪ್ರಮುಖ ಕಾರಣ

ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ ಅವರು ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ರಾಜಾ ಸಾಬ್​​’, ‘ಕಲ್ಕಿ 2898 ಎಡಿ’ ಮುಂತಾದ ಚಿತ್ರಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ನಂತರ ‘ಸ್ಪಿರಿಟ್​’ ಚಿತ್ರ ಸೆಟ್ಟೇರಲಿದೆ. ಈ ಎಲ್ಲ ಕೆಲಸಗಳು ಇದ್ದರೂ ಸಹ ಅವರು ವೇಗವಾಗಿ ಸಿನಿಮಾ ಮಾಡಲು ರೆಡಿ ಇಲ್ಲ. ಅವರ ಈ ನಿರ್ಧಾರದ ಹಿಂದೆ ಒಂದು ಕಾರಣವಿದೆ.

ಮಾರ್ಚ್​ ತನಕ ಕೆಲಸ ಮಾಡಲ್ಲ ಪ್ರಭಾಸ್​; ಈ ನಿರ್ಧಾರಕ್ಕೆ ಇದೆ ಒಂದು ಪ್ರಮುಖ ಕಾರಣ
ಪ್ರಭಾಸ್​
ಮದನ್​ ಕುಮಾರ್​
|

Updated on: Jan 31, 2024 | 12:19 PM

Share

ನಟ ಪ್ರಭಾಸ್​ ಅವರು ‘ಸಲಾರ್​’ (Salaar) ಸಿನಿಮಾದ ಯಶಸ್ಸಿನಿಂದ ಖುಷಿ ಆಗಿದ್ದಾರೆ. 2023ರ ಡಿಸೆಂಬರ್​ 22ರಂದು ‘ಸಲಾರ್​’ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್​ ಮಾಡಿತು. ಅದಕ್ಕೂ ಮುನ್ನ ತೆರೆಕಂಡಿದ್ದ ‘ಆದಿಪುರುಷ್​’ ಸಿನಿಮಾದಿಂದ ಪ್ರಭಾಸ್​ (Prabhas) ಅವರು ಸೋಲುಂಡಿದ್ದರು. ಹಾಗಾಗಿ ‘ಸಲಾರ್​’ ಚಿತ್ರದ ಗೆಲುವು ಅವರಿಗೆ ಹೊಸ ಚೈತನ್ಯ ನೀಡಿತು. ಹಾಗಂತ ಮುಂದಿನ ಸಿನಿಮಾಗಳ ಕೆಲಸಗಳನ್ನು ಅವರು ಅವಸರದಲ್ಲಿ ಮುಗಿಸುತ್ತಿಲ್ಲ. ಬದಲಿಗೆ ಕೆಲವು ವಾರಗಳ ಕಾಲ ಬ್ರೇಕ್​ ತೆಗೆದುಕೊಳ್ಳಲು ಪ್ರಭಾಸ್​ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಾರ್ಚ್​ ತನಕ ಪ್ರಭಾಸ್​ ವಿಶ್ರಾಂತಿ ಪಡೆಯಲಿದ್ದಾರೆ.

ಪ್ರಭಾಸ್​ ಅವರ ಕೈಯಲ್ಲಿ ಈಗ ಹಲವು ಪ್ರಾಜೆಕ್ಟ್​ಗಳಿವೆ. ‘ಕಲ್ಕಿ 2898 ಎಡಿ’, ‘ರಾಜಾ ಸಾಬ್​​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಬಳಿಕ ‘ಸ್ಪಿರಿಟ್​’ ಸಿನಿಮಾ ಸೆಟ್ಟೇರಲಿದೆ. ಇಷ್ಟೆಲ್ಲ ಕೆಲಸಗಳು ಇದ್ದರೂ ಕೂಡ ಪ್ರಭಾಸ್​ ಅವರು ವೇಗವಾಗಿ ಸಿನಿಮಾ ಮಾಡಲು ಸಿದ್ಧರಿಲ್ಲ. ಅವರ ಈ ನಿರ್ಧಾರಕ್ಕೆ ಒಂದು ಪ್ರಮುಖ ಕಾರಣ ಇದೆ. ಅದೇನೆಂದರೆ, ಆರೋಗ್ಯದ ಕಡೆಗೆ ಗಮನ ನೀಡಬೇಕು ಎಂದು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಗೆಲುವಿಗಾಗಿ ಹೆಸರು ಬದಲಿಸಿಕೊಂಡ್ರಾ ಪ್ರಭಾಸ್​? ಹೊಸ ಪೋಸ್ಟರ್​ನಿಂದ ಹುಟ್ಟಿತು ಅನುಮಾನ

ಪ್ರಭಾಸ್​ ಅವರಿಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ. ಈಗಾಗಲೇ ಸರ್ಜರಿ ಮಾಡಿದ್ದರೂ ಕೂಡ ಅದರಿಂದ ಅವರು ಸಂಪೂರ್ಣವಾಗಿ ಚೇರಿಸಿಕೊಂಡಿಲ್ಲ. ಹಾಗಾಗಿ ಇನ್ನೊಂದು ಸರ್ಜರಿಗಾಗಿ ಅವರು ಯೂರೋಪ್​ಗೆ ತೆರಳಲಿದ್ದಾರೆ ಎಂದು ಕೆಲವೆಡೆ ವರದಿ ಆಗಿದೆ. ಪ್ರಭಾಸ್​ ಅವರನ್ನು ಬ್ಯಾಕ್​ ಟು ಬ್ಯಾಕ್​ ಹಿರಿತೆರೆಯಲ್ಲಿ ನೋಡಬೇಕು ಎಂಬುದು ಫ್ಯಾನ್ಸ್​ ಆಸೆ. ಆದರೆ ಅವರು ವಿಶ್ರಾಂತಿಗೆ ಹೆಚ್ಚು ಸಮಯ ತೆಗೆದುಕೊಂಡರೆ ಸಿನಿಮಾ ಬಿಡುಗಡೆ ವಿಳಂಬ ಆಗುವುದು ಗ್ಯಾರಂಟಿ.

ಇದನ್ನೂ ಓದಿ: ವರ್ಷಾಂತ್ಯಕ್ಕೆ ಸೆಟ್ಟೇರಲಿದೆ ಪ್ರಭಾಸ್-ವಂಗಾ ಕಾಂಬಿನೇಷನ್ ಸಿನಿಮಾ ‘ಸ್ಪಿರಿಟ್’

ಈಗ ಪ್ರಭಾಸ್​ ಅವರಿಗೆ 44 ವರ್ಷ ವಯಸ್ಸು. ಸದ್ಯಕ್ಕಂತೂ ಅವರು ಮದುವೆ ಬಗ್ಗೆ ಆಲೋಚನೆ ಮಾಡಿಲ್ಲ. ಆದಷ್ಟ ಬೇಗ ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿ ಎಂದು ಕೂಡ ಅಭಿಮಾನಿಗಳು ಬಯಸುತ್ತಿದ್ದಾರೆ. ಆ ಬಗ್ಗೆ ಪ್ರಭಾಸ್​ ಅವರು ಯಾವಾಗ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ‘ಕಲ್ಕಿ 2898 ಎಡಿ’, ‘ರಾಜಾ ಸಾಬ್​​’ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ. ಅದ್ದೂರಿ ಬಜೆಟ್​ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಸಿದ್ಧವಾಗುತ್ತಿದ್ದು ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​ ಮುಂತಾದವರು ನಟಿಸುತ್ತಿದ್ದಾರೆ. ಮೇ 9ರಂದು ಈ ಚಿತ್ರ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್