AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ ತನಕ ಕೆಲಸ ಮಾಡಲ್ಲ ಪ್ರಭಾಸ್​; ಈ ನಿರ್ಧಾರಕ್ಕೆ ಇದೆ ಒಂದು ಪ್ರಮುಖ ಕಾರಣ

ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ ಅವರು ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ರಾಜಾ ಸಾಬ್​​’, ‘ಕಲ್ಕಿ 2898 ಎಡಿ’ ಮುಂತಾದ ಚಿತ್ರಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ನಂತರ ‘ಸ್ಪಿರಿಟ್​’ ಚಿತ್ರ ಸೆಟ್ಟೇರಲಿದೆ. ಈ ಎಲ್ಲ ಕೆಲಸಗಳು ಇದ್ದರೂ ಸಹ ಅವರು ವೇಗವಾಗಿ ಸಿನಿಮಾ ಮಾಡಲು ರೆಡಿ ಇಲ್ಲ. ಅವರ ಈ ನಿರ್ಧಾರದ ಹಿಂದೆ ಒಂದು ಕಾರಣವಿದೆ.

ಮಾರ್ಚ್​ ತನಕ ಕೆಲಸ ಮಾಡಲ್ಲ ಪ್ರಭಾಸ್​; ಈ ನಿರ್ಧಾರಕ್ಕೆ ಇದೆ ಒಂದು ಪ್ರಮುಖ ಕಾರಣ
ಪ್ರಭಾಸ್​
ಮದನ್​ ಕುಮಾರ್​
|

Updated on: Jan 31, 2024 | 12:19 PM

Share

ನಟ ಪ್ರಭಾಸ್​ ಅವರು ‘ಸಲಾರ್​’ (Salaar) ಸಿನಿಮಾದ ಯಶಸ್ಸಿನಿಂದ ಖುಷಿ ಆಗಿದ್ದಾರೆ. 2023ರ ಡಿಸೆಂಬರ್​ 22ರಂದು ‘ಸಲಾರ್​’ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್​ ಮಾಡಿತು. ಅದಕ್ಕೂ ಮುನ್ನ ತೆರೆಕಂಡಿದ್ದ ‘ಆದಿಪುರುಷ್​’ ಸಿನಿಮಾದಿಂದ ಪ್ರಭಾಸ್​ (Prabhas) ಅವರು ಸೋಲುಂಡಿದ್ದರು. ಹಾಗಾಗಿ ‘ಸಲಾರ್​’ ಚಿತ್ರದ ಗೆಲುವು ಅವರಿಗೆ ಹೊಸ ಚೈತನ್ಯ ನೀಡಿತು. ಹಾಗಂತ ಮುಂದಿನ ಸಿನಿಮಾಗಳ ಕೆಲಸಗಳನ್ನು ಅವರು ಅವಸರದಲ್ಲಿ ಮುಗಿಸುತ್ತಿಲ್ಲ. ಬದಲಿಗೆ ಕೆಲವು ವಾರಗಳ ಕಾಲ ಬ್ರೇಕ್​ ತೆಗೆದುಕೊಳ್ಳಲು ಪ್ರಭಾಸ್​ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಾರ್ಚ್​ ತನಕ ಪ್ರಭಾಸ್​ ವಿಶ್ರಾಂತಿ ಪಡೆಯಲಿದ್ದಾರೆ.

ಪ್ರಭಾಸ್​ ಅವರ ಕೈಯಲ್ಲಿ ಈಗ ಹಲವು ಪ್ರಾಜೆಕ್ಟ್​ಗಳಿವೆ. ‘ಕಲ್ಕಿ 2898 ಎಡಿ’, ‘ರಾಜಾ ಸಾಬ್​​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಬಳಿಕ ‘ಸ್ಪಿರಿಟ್​’ ಸಿನಿಮಾ ಸೆಟ್ಟೇರಲಿದೆ. ಇಷ್ಟೆಲ್ಲ ಕೆಲಸಗಳು ಇದ್ದರೂ ಕೂಡ ಪ್ರಭಾಸ್​ ಅವರು ವೇಗವಾಗಿ ಸಿನಿಮಾ ಮಾಡಲು ಸಿದ್ಧರಿಲ್ಲ. ಅವರ ಈ ನಿರ್ಧಾರಕ್ಕೆ ಒಂದು ಪ್ರಮುಖ ಕಾರಣ ಇದೆ. ಅದೇನೆಂದರೆ, ಆರೋಗ್ಯದ ಕಡೆಗೆ ಗಮನ ನೀಡಬೇಕು ಎಂದು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಗೆಲುವಿಗಾಗಿ ಹೆಸರು ಬದಲಿಸಿಕೊಂಡ್ರಾ ಪ್ರಭಾಸ್​? ಹೊಸ ಪೋಸ್ಟರ್​ನಿಂದ ಹುಟ್ಟಿತು ಅನುಮಾನ

ಪ್ರಭಾಸ್​ ಅವರಿಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ. ಈಗಾಗಲೇ ಸರ್ಜರಿ ಮಾಡಿದ್ದರೂ ಕೂಡ ಅದರಿಂದ ಅವರು ಸಂಪೂರ್ಣವಾಗಿ ಚೇರಿಸಿಕೊಂಡಿಲ್ಲ. ಹಾಗಾಗಿ ಇನ್ನೊಂದು ಸರ್ಜರಿಗಾಗಿ ಅವರು ಯೂರೋಪ್​ಗೆ ತೆರಳಲಿದ್ದಾರೆ ಎಂದು ಕೆಲವೆಡೆ ವರದಿ ಆಗಿದೆ. ಪ್ರಭಾಸ್​ ಅವರನ್ನು ಬ್ಯಾಕ್​ ಟು ಬ್ಯಾಕ್​ ಹಿರಿತೆರೆಯಲ್ಲಿ ನೋಡಬೇಕು ಎಂಬುದು ಫ್ಯಾನ್ಸ್​ ಆಸೆ. ಆದರೆ ಅವರು ವಿಶ್ರಾಂತಿಗೆ ಹೆಚ್ಚು ಸಮಯ ತೆಗೆದುಕೊಂಡರೆ ಸಿನಿಮಾ ಬಿಡುಗಡೆ ವಿಳಂಬ ಆಗುವುದು ಗ್ಯಾರಂಟಿ.

ಇದನ್ನೂ ಓದಿ: ವರ್ಷಾಂತ್ಯಕ್ಕೆ ಸೆಟ್ಟೇರಲಿದೆ ಪ್ರಭಾಸ್-ವಂಗಾ ಕಾಂಬಿನೇಷನ್ ಸಿನಿಮಾ ‘ಸ್ಪಿರಿಟ್’

ಈಗ ಪ್ರಭಾಸ್​ ಅವರಿಗೆ 44 ವರ್ಷ ವಯಸ್ಸು. ಸದ್ಯಕ್ಕಂತೂ ಅವರು ಮದುವೆ ಬಗ್ಗೆ ಆಲೋಚನೆ ಮಾಡಿಲ್ಲ. ಆದಷ್ಟ ಬೇಗ ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿ ಎಂದು ಕೂಡ ಅಭಿಮಾನಿಗಳು ಬಯಸುತ್ತಿದ್ದಾರೆ. ಆ ಬಗ್ಗೆ ಪ್ರಭಾಸ್​ ಅವರು ಯಾವಾಗ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ‘ಕಲ್ಕಿ 2898 ಎಡಿ’, ‘ರಾಜಾ ಸಾಬ್​​’ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಇದೆ. ಅದ್ದೂರಿ ಬಜೆಟ್​ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಸಿದ್ಧವಾಗುತ್ತಿದ್ದು ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​ ಮುಂತಾದವರು ನಟಿಸುತ್ತಿದ್ದಾರೆ. ಮೇ 9ರಂದು ಈ ಚಿತ್ರ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು