Prithviraj Sukumaran: ಸರ್ಜರಿ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಟ ಪೃಥ್ವಿರಾಜ್​ ಸುಕುಮಾರನ್​​; ಆದರೂ ಇದೆ ಒಂದು ಬೇಸರ

Prithviraj Sukumaran Discharged: ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಸಖತ್​ ಬೇಡಿಕೆ ಇದೆ. ನಟನಾಗಿ ಮಾತ್ರವಲ್ಲದೇ ನಿರ್ದೇಶಕರಾಗಿಯೂ ಅವರು ಯಶಸ್ಸು ಕಂಡಿದ್ದಾರೆ.

Prithviraj Sukumaran: ಸರ್ಜರಿ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಟ ಪೃಥ್ವಿರಾಜ್​ ಸುಕುಮಾರನ್​​; ಆದರೂ ಇದೆ ಒಂದು ಬೇಸರ
ಪೃಥ್ವಿರಾಜ್​ ಸುಕುಮಾರನ್​
Follow us
|

Updated on: Jun 29, 2023 | 1:13 PM

ಬಹುಭಾಷಾ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಅಭಿಮಾನಿಗಳಿಗೆ ಕೆಲವೇ ದಿನಗಳ ಹಿಂದೆ ಬೇಸರದ ಸುದ್ದಿ ಕೇಳಿಬಂದಿತ್ತು. ಶೂಟಿಂಗ್​ ಮಾಡುವಾಗ ಅವರಿಗೆ ಪೆಟ್ಟಾಗಿದ್ದರಿಂದ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರಿಗೆ ಶಸ್ತ್ರ ಚಿಕಿತ್ಸೆ (Prithviraj Sukumaran Surgery) ಮಾಡಲಾಗಿದೆ. ಸರ್ಜರಿ ಯಶಸ್ವಿಯಾಗಿದ್ದು, ಪೃಥ್ವಿರಾಜ್​ ಸುಕುಮಾರನ್​ ಅವರನ್ನು ಡಿಸ್ಚಾರ್ಜ್​ ಮಾಡಲಾಗಿದೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಕೂಡ ಇನ್ನೊಂದು ಬೇಸರದ ವಿಷಯ ಇದೆ. ಅದೇನೆಂದರೆ, ಇನ್ನೂ ಕೆಲವು ತಿಂಗಳ ಕಾಲ ಪೃಥ್ವಿರಾಜ್​ ಸುಕುಮಾರನ್​ ಅವರು ಯಾವುದೇ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ನಟನಾಗಿ ಮಾತ್ರವಲ್ಲದೇ ನಿರ್ದೇಶಕರಾಗಿಯೂ ಅವರು ಯಶಸ್ಸು ಕಂಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸೇರಿದಂತೆ ಅನೇಕ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳ ಜೊತೆಗೆ ಅವರು ಸಿನಿಮಾ ಮಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಅವರಿಗೆ ಪೆಟ್ಟಾಗಿದ್ದು, ಎಲ್ಲ ಕೆಲಸಗಳಿಗೆ ಬ್ರೇಕ್​ ನೀಡಬೇಕಾಯಿತು. ಸರ್ಜರಿ ಯಶಸ್ವಿಯಾದರೂ ಕೂಡ ಪೃಥ್ವಿರಾಜ್​ ಸುಕುಮಾರನ್​ ಅವರು ಶೂಟಿಂಗ್​ನಲ್ಲಿ ಭಾಗಿಯಾಗಲು ಸದ್ಯಕ್ಕೆ ಸಾಧ್ಯವಿಲ್ಲ. ಒಂದಷ್ಟು ತಿಂಗಳ ಕಾಲ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಿದೆ.

ಇದನ್ನೂ ಓದಿ: Prithviraj Sukumaran: ‘ನನ್ನಿಂದ ತಪ್ಪಾಗಿದೆ, ಒಪ್ಪಿಕೊಳ್ತೀನಿ, ದಯವಿಟ್ಟು ಕ್ಷಮಿಸಿ’: ಬಹಿರಂಗವಾಗಿ ಕ್ಷಮೆ ಕೇಳಿದ ಪೃಥ್ವಿರಾಜ್​ ಸುಕುಮಾರನ್​

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಒಂದು ಪ್ರಮುಖ ಪಾತ್ರ ಇದೆ. ಪ್ರಭಾಸ್​ ನಾಯಕನಾಗಿರುವ ಈ ಚಿತ್ರದಲ್ಲಿ ಪೃಥ್ವಿರಾಜ್​ ಅವರದ್ದು ನೆಗೆಟಿವ್​ ರೋಲ್​ ಎಂದು ಸಿನಿಪ್ರಿಯರು ಊಹಿಸುತ್ತಿದ್ದಾರೆ. ಈ ಹಿಂದೆ ಬಿಡುಗಡೆಯಾದ ಫಸ್ಟ್​ ಲುಕ್​ ಪೋಸ್ಟರ್​ನಲ್ಲಿ ಅವರ ಗೆಟಪ್​ ಗಮನ ಸೆಳೆದಿತ್ತು. ಈ ಚಿತ್ರಕ್ಕೆ ಶೂಟಿಂಗ್​ ಮುಕ್ತಾಯವಾಗಿದೆ. ಪೃಥ್ವಿರಾಜ್​ ಸುಕುಮಾರನ್​ ಅವರು ವಿಶ್ರಾಂತಿ ಪಡೆದು, ಸಂಪೂರ್ಣ ಚೇತರಿಸಿಕೊಳ್ಳುವ ವೇಳೆಗೆ ಈ ಚಿತ್ರದ ಪ್ರಚಾರ ಕಾರ್ಯಗಳು ಆರಂಭ ಆಗಲಿವೆ.

ಇದನ್ನೂ ಓದಿ: ‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್

ಇಡುಕಿ ಜಿಲ್ಲೆಯಲ್ಲಿ ‘ವಿಲಾಯತ್​ ಬುದ್ಧ’ ಸಿನಿಮಾದ ಶೂಟಿಂಗ್​ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸುತ್ತಿದ್ದ ಪೃಥ್ವಿರಾಜ್​ ಸುಕುಮಾರನ್​ ಅವರು ಗಾಯಗೊಂಡರು. ಆ ಸುದ್ದಿ ತಿಳಿದಾಗ ಅಭಿಮಾನಿಗಳಿಗೆ ಆತಂಕ ಆಗಿತ್ತು. ಆದರೆ ಈಗ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ತಾವು ಚೇತರಿಸಿಕೊಳ್ಳುತ್ತಿರುವುದಾಗಿ ಸ್ವತಃ ಪೃಥ್ವಿರಾಜ್​ ಸುಕುಮಾರನ್​ ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಬಗ್ಗೆ ಕಾಳಜಿ ತೋರಿಸಿದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ