AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ

Shruti Haasan: ಶ್ರುತಿ ಹಾಸನ್​ ಅವರು ಖಾಸಗಿ ಜೀವನದ ವಿಷಯದ ಕಾರಣದಿಂದ ಆಗೊಮ್ಮೆ ಈಗೊಮ್ಮೆ ಟ್ರೋಲ್​ ಆಗುವುದುಂಟು. ಈ ಬಾರಿ ನೆಟ್ಟಿಗನೊಬ್ಬ ಈ ರೀತಿಯ ವಿಚಿತ್ರ ಪ್ರಶ್ನೆ ಕೇಳಿದ್ದಾನೆ.

‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ
ಶ್ರುತಿ ಹಾಸನ್
TV9 Web
| Edited By: |

Updated on:Apr 15, 2022 | 11:48 PM

Share

ನಟಿಯರಿಗೆ ಆಗಾಗ ಮುಜುಗರದ ಪ್ರಶ್ನೆ ಎದುರಾಗುತ್ತವೆ. ಈ ಸೋಶಿಯಲ್​ ಮೀಡಿಯಾ ದುನಿಯಾದಲ್ಲಿ ಪ್ರತಿಯೊಬ್ಬರೂ ಮೊಬೈಲ್​ ಬಳಕೆ ಮಾಡುತ್ತಾರೆ. ಸೆಲೆಬ್ರಿಟಿಗಳು ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ಸಮಯ ಸಿಕ್ಕರೆ ಫ್ಯಾನ್ಸ್ ಜೊತೆ ಪ್ರಶ್ನೋತ್ತರ ನಡೆಸುತ್ತಾರೆ. ಈ ವೇಳೆ ಕೆಲವು ಅಚ್ಚರಿಯ ಪ್ರಶ್ನೆಗಳು ಎದುರಾಗುವುದುಂಟು. ‘ಸಲಾರ್​’ (Salaar Movie) ನಟಿ ಶ್ರುತಿ ಹಾಸನ್​ ಅವರು ಕೂಡ ಇತ್ತೀಚೆಗೆ ತಮ್ಮ ಅಭಿಮಾನಿಗಳಿಗೆ ಒಂದು ಅವಕಾಶ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ (Shruti Haasan Instagram) ಅವರು ಪ್ರಶ್ನೆಗಳನ್ನು ಆಹ್ವಾನಿಸಿದ್ದರು. ನೆಚ್ಚಿನ ನಟಿಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಜನರು ಹಲವು ಬಗೆಯ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಒಬ್ಬ ಭೂಪ ಮಾತ್ರ ಸ್ವಲ್ಪ ಅಸಂಬದ್ಧವಾದ ವಿಚಾರ ಎತ್ತಿದ್ದಾನೆ. ‘ನಿಮ್ಮ ತುಟಿಗಳ ಸೈಜ್​ ಎಷ್ಟು’ ಎಂದು ಆತ ಕೇಳಿದ್ದಾನೆ. ಆ ಪ್ರಶ್ನೆಯನ್ನು ಶ್ರುತಿ ಹಾಸನ್(Shruti Haasan) ಕಡೆಗಣಿಸಬಹುದಿತ್ತು. ಆದರೆ ಅವರು ಹಾಗೆ ಮಾಡಿಲ್ಲ. ಪ್ರಶ್ನೆ ಕೇಳಿದ ವ್ಯಕ್ತಿಗೆ ಕೂಲ್​ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಮಲ್​ ಹಾಸನ್​ ಪುತ್ರಿ ಎಂಬ ಕಾರಣಕ್ಕೆ ಶ್ರುತಿ ಹಾಸನ್​ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶಗಳು ಸಿಕ್ಕವು. ಬಳಿಕ ಅವರು ತಮ್ಮ ಶ್ರಮದ ಮೇಲೆ ಬೆಳೆದು ನಿಂತಿದ್ದಾರೆ. ಸುಂದರವಾಗಿ ಕಾಣಬೇಕು ಎಂಬ ಕಾರಣಕ್ಕೆ ಅವರು ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡರು ಎಂಬ ಮಾತು ಕೂಡ ಇದೆ. ಅದನ್ನೇ ಟಾರ್ಗೆಟ್​ ಆಗಿಟ್ಟುಕೊಂಡು ನೆಟ್ಟಿಗನೊಬ್ಬ ಈ ರೀತಿಯ ಪ್ರಶ್ನೆ ಕೇಳಿರಬಹುದು. ಅದಕ್ಕೆ ಶ್ರುತಿ ಹಾಸನ್​ ಸೀರಿಯಸ್​ ಆಗಿಲ್ಲ. ‘ತುಟಿಗಳ ಸೈಜ್​ ಕೂಡ ಇರುತ್ತದೆಯೇ?’ ಎಂದು ಮರುಪ್ರಶ್ನೆ ಹಾಕುವ ಮೂಲಕ ಅವರು ಪ್ರತಿಕ್ರಿಯಿಸಿದ್ದಾರೆ ಅಷ್ಟೇ.

ಸೋಶಿಯಲ್​ ಮೀಡಿಯಾದಲ್ಲಿ ಶ್ರುತಿ ಹಾಸನ್​ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 1.9 ಕೋಟಿಗೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಬಾಯ್​ಫ್ರೆಂಡ್​ ಶಾಂತನೂ ಹಜಾರಿಕಾ ಜೊತೆ ಇರುವ ಹಲವು ಫೋಟೋ ಮತ್ತು ವಿಡಿಯೋಗಳನ್ನು ಅವರು ಪೋಸ್ಟ್​ ಮಾಡುತ್ತಾರೆ. ಶ್ರುತಿ ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ, ಗಾಸಿಪ್​ ಕಾಲಂಗಳಲ್ಲಿ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಶ್ರುತಿ ಫ್ಯಾಟ್​ ಆಗಿದ್ದಾರೆ, ಸದ್ಯದಲ್ಲೇ ಮದುವೆ ಆಗುತ್ತಾರೆ ಎಂಬಿತ್ಯಾದಿ ವಿಷಯದ ಬಗ್ಗೆ ಟ್ರೋಲ್​ ಆಗಿದ್ದು ಬೇಸರ ಮೂಡಿಸುತ್ತದೆ ಎಂದು ಸಂದರ್ಶನದಲ್ಲಿ ಶ್ರುತಿ ಹೇಳಿಕೊಂಡಿದ್ದರು.

ಇತ್ತೀಚೆಗೆ ತೆರೆಕಂಡ ‘ವಕೀಲ್​ ಸಾಬ್​’ ಚಿತ್ರದಲ್ಲಿ ಶ್ರುತಿ ಹಾಸನ್​ ನಾಯಕಿ ಆಗಿದ್ದರು. ಈಗ ಅವರು ಬಹುನಿರೀಕ್ಷಿತ ‘ಸಲಾರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ಪ್ರಭಾಸ್​ ಹೀರೋ. ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಗೆಲುವಿನಿಂದ ಸೆನ್ಸೇಷನ್​ ಸೃಷ್ಟಿ ಮಾಡಿರುವ ಪ್ರಶಾಂತ್​ ನೀಲ್​ ಅವರ ಬತ್ತಳಿಕೆಯಿಂದಲೇ ‘ಸಲಾರ್​’ ಮೂಡಿಬರುತ್ತಿರುವುದರಿಂದ ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ. ‘ಸಲಾರ್​’ ಮಾತ್ರವಲ್ಲದೇ, ‘ಎನ್​ಬಿಕೆ 107’ ಚಿತ್ರದಲ್ಲೂ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಮೆಗಾಸ್ಟಾರ್​ ಚಿರಂಜೀವಿ ನಟನೆಯ 157ನೇ ಚಿತ್ರಕ್ಕೂ ಅವರೇ ನಾಯಕಿ. ಈ ಎಲ್ಲ ಸಿನಿಮಾಗಳಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಅವರ ಅಭಿಮಾನಿಗಳಿಗೆ ಇದೆ.

ಇದನ್ನೂ ಓದಿ:

ಶ್ರುತಿ ಹಾಸನ್​ ಹೊಸ ಫೋಟೋಶೂಟ್​; ಬಗೆ ಬಗೆಯಲ್ಲಿ ಪೋಸ್​ ನೀಡಿದ ಕಮಲ್ ಹಾಸನ್​​ ಪುತ್ರಿ

‘ನಾನೇ ಮೊದಲು ಐ ಲವ್​ ಯೂ ಹೇಳಿದ್ದು’; ಬಾಯ್​ಫ್ರೆಂಡ್​ ವಿಚಾರದಲ್ಲಿ ಅಚ್ಚರಿಯ ಹೇಳಿಕೆ ನೀಡಿದ ಶ್ರುತಿ ಹಾಸನ್

Published On - 5:06 pm, Fri, 15 April 22

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?