AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ

Shruti Haasan: ಶ್ರುತಿ ಹಾಸನ್​ ಅವರು ಖಾಸಗಿ ಜೀವನದ ವಿಷಯದ ಕಾರಣದಿಂದ ಆಗೊಮ್ಮೆ ಈಗೊಮ್ಮೆ ಟ್ರೋಲ್​ ಆಗುವುದುಂಟು. ಈ ಬಾರಿ ನೆಟ್ಟಿಗನೊಬ್ಬ ಈ ರೀತಿಯ ವಿಚಿತ್ರ ಪ್ರಶ್ನೆ ಕೇಳಿದ್ದಾನೆ.

‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ
ಶ್ರುತಿ ಹಾಸನ್
TV9 Web
| Edited By: |

Updated on:Apr 15, 2022 | 11:48 PM

Share

ನಟಿಯರಿಗೆ ಆಗಾಗ ಮುಜುಗರದ ಪ್ರಶ್ನೆ ಎದುರಾಗುತ್ತವೆ. ಈ ಸೋಶಿಯಲ್​ ಮೀಡಿಯಾ ದುನಿಯಾದಲ್ಲಿ ಪ್ರತಿಯೊಬ್ಬರೂ ಮೊಬೈಲ್​ ಬಳಕೆ ಮಾಡುತ್ತಾರೆ. ಸೆಲೆಬ್ರಿಟಿಗಳು ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ಸಮಯ ಸಿಕ್ಕರೆ ಫ್ಯಾನ್ಸ್ ಜೊತೆ ಪ್ರಶ್ನೋತ್ತರ ನಡೆಸುತ್ತಾರೆ. ಈ ವೇಳೆ ಕೆಲವು ಅಚ್ಚರಿಯ ಪ್ರಶ್ನೆಗಳು ಎದುರಾಗುವುದುಂಟು. ‘ಸಲಾರ್​’ (Salaar Movie) ನಟಿ ಶ್ರುತಿ ಹಾಸನ್​ ಅವರು ಕೂಡ ಇತ್ತೀಚೆಗೆ ತಮ್ಮ ಅಭಿಮಾನಿಗಳಿಗೆ ಒಂದು ಅವಕಾಶ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ (Shruti Haasan Instagram) ಅವರು ಪ್ರಶ್ನೆಗಳನ್ನು ಆಹ್ವಾನಿಸಿದ್ದರು. ನೆಚ್ಚಿನ ನಟಿಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಜನರು ಹಲವು ಬಗೆಯ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಒಬ್ಬ ಭೂಪ ಮಾತ್ರ ಸ್ವಲ್ಪ ಅಸಂಬದ್ಧವಾದ ವಿಚಾರ ಎತ್ತಿದ್ದಾನೆ. ‘ನಿಮ್ಮ ತುಟಿಗಳ ಸೈಜ್​ ಎಷ್ಟು’ ಎಂದು ಆತ ಕೇಳಿದ್ದಾನೆ. ಆ ಪ್ರಶ್ನೆಯನ್ನು ಶ್ರುತಿ ಹಾಸನ್(Shruti Haasan) ಕಡೆಗಣಿಸಬಹುದಿತ್ತು. ಆದರೆ ಅವರು ಹಾಗೆ ಮಾಡಿಲ್ಲ. ಪ್ರಶ್ನೆ ಕೇಳಿದ ವ್ಯಕ್ತಿಗೆ ಕೂಲ್​ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಮಲ್​ ಹಾಸನ್​ ಪುತ್ರಿ ಎಂಬ ಕಾರಣಕ್ಕೆ ಶ್ರುತಿ ಹಾಸನ್​ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶಗಳು ಸಿಕ್ಕವು. ಬಳಿಕ ಅವರು ತಮ್ಮ ಶ್ರಮದ ಮೇಲೆ ಬೆಳೆದು ನಿಂತಿದ್ದಾರೆ. ಸುಂದರವಾಗಿ ಕಾಣಬೇಕು ಎಂಬ ಕಾರಣಕ್ಕೆ ಅವರು ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡರು ಎಂಬ ಮಾತು ಕೂಡ ಇದೆ. ಅದನ್ನೇ ಟಾರ್ಗೆಟ್​ ಆಗಿಟ್ಟುಕೊಂಡು ನೆಟ್ಟಿಗನೊಬ್ಬ ಈ ರೀತಿಯ ಪ್ರಶ್ನೆ ಕೇಳಿರಬಹುದು. ಅದಕ್ಕೆ ಶ್ರುತಿ ಹಾಸನ್​ ಸೀರಿಯಸ್​ ಆಗಿಲ್ಲ. ‘ತುಟಿಗಳ ಸೈಜ್​ ಕೂಡ ಇರುತ್ತದೆಯೇ?’ ಎಂದು ಮರುಪ್ರಶ್ನೆ ಹಾಕುವ ಮೂಲಕ ಅವರು ಪ್ರತಿಕ್ರಿಯಿಸಿದ್ದಾರೆ ಅಷ್ಟೇ.

ಸೋಶಿಯಲ್​ ಮೀಡಿಯಾದಲ್ಲಿ ಶ್ರುತಿ ಹಾಸನ್​ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 1.9 ಕೋಟಿಗೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಬಾಯ್​ಫ್ರೆಂಡ್​ ಶಾಂತನೂ ಹಜಾರಿಕಾ ಜೊತೆ ಇರುವ ಹಲವು ಫೋಟೋ ಮತ್ತು ವಿಡಿಯೋಗಳನ್ನು ಅವರು ಪೋಸ್ಟ್​ ಮಾಡುತ್ತಾರೆ. ಶ್ರುತಿ ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ, ಗಾಸಿಪ್​ ಕಾಲಂಗಳಲ್ಲಿ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಶ್ರುತಿ ಫ್ಯಾಟ್​ ಆಗಿದ್ದಾರೆ, ಸದ್ಯದಲ್ಲೇ ಮದುವೆ ಆಗುತ್ತಾರೆ ಎಂಬಿತ್ಯಾದಿ ವಿಷಯದ ಬಗ್ಗೆ ಟ್ರೋಲ್​ ಆಗಿದ್ದು ಬೇಸರ ಮೂಡಿಸುತ್ತದೆ ಎಂದು ಸಂದರ್ಶನದಲ್ಲಿ ಶ್ರುತಿ ಹೇಳಿಕೊಂಡಿದ್ದರು.

ಇತ್ತೀಚೆಗೆ ತೆರೆಕಂಡ ‘ವಕೀಲ್​ ಸಾಬ್​’ ಚಿತ್ರದಲ್ಲಿ ಶ್ರುತಿ ಹಾಸನ್​ ನಾಯಕಿ ಆಗಿದ್ದರು. ಈಗ ಅವರು ಬಹುನಿರೀಕ್ಷಿತ ‘ಸಲಾರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ಪ್ರಭಾಸ್​ ಹೀರೋ. ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಗೆಲುವಿನಿಂದ ಸೆನ್ಸೇಷನ್​ ಸೃಷ್ಟಿ ಮಾಡಿರುವ ಪ್ರಶಾಂತ್​ ನೀಲ್​ ಅವರ ಬತ್ತಳಿಕೆಯಿಂದಲೇ ‘ಸಲಾರ್​’ ಮೂಡಿಬರುತ್ತಿರುವುದರಿಂದ ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ. ‘ಸಲಾರ್​’ ಮಾತ್ರವಲ್ಲದೇ, ‘ಎನ್​ಬಿಕೆ 107’ ಚಿತ್ರದಲ್ಲೂ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಮೆಗಾಸ್ಟಾರ್​ ಚಿರಂಜೀವಿ ನಟನೆಯ 157ನೇ ಚಿತ್ರಕ್ಕೂ ಅವರೇ ನಾಯಕಿ. ಈ ಎಲ್ಲ ಸಿನಿಮಾಗಳಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಅವರ ಅಭಿಮಾನಿಗಳಿಗೆ ಇದೆ.

ಇದನ್ನೂ ಓದಿ:

ಶ್ರುತಿ ಹಾಸನ್​ ಹೊಸ ಫೋಟೋಶೂಟ್​; ಬಗೆ ಬಗೆಯಲ್ಲಿ ಪೋಸ್​ ನೀಡಿದ ಕಮಲ್ ಹಾಸನ್​​ ಪುತ್ರಿ

‘ನಾನೇ ಮೊದಲು ಐ ಲವ್​ ಯೂ ಹೇಳಿದ್ದು’; ಬಾಯ್​ಫ್ರೆಂಡ್​ ವಿಚಾರದಲ್ಲಿ ಅಚ್ಚರಿಯ ಹೇಳಿಕೆ ನೀಡಿದ ಶ್ರುತಿ ಹಾಸನ್

Published On - 5:06 pm, Fri, 15 April 22

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್