AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel Birthday: ಶೂಟಿಂಗ್​ ಸೆಟ್​ನಲ್ಲಿ ಹೇಗಿರ್ತಾರೆ ಗೊತ್ತಾ ಪ್ರಶಾಂತ್​ ನೀಲ್​? ವಿಶೇಷ ವಿಡಿಯೋ ಹಂಚಿಕೊಂಡ ‘ಸಲಾರ್​’ ಚಿತ್ರತಂಡ

​Salaar Movie Making Video: ಪ್ರಭಾಸ್​ ಅಭಿನಯದ ‘ಸಲಾರ್​’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದ್ದು, ಸ್ಟಾರ್​ ಡೈರೆಕ್ಟರ್​ ಬರ್ತ್​ಡೇ ಸಲುವಾಗಿ ಒಂದು ವಿಶೇಷ ವಿಡಿಯೋ ಹಂಚಿಕೊಳ್ಳಲಾಗಿದೆ.

Prashanth Neel Birthday: ಶೂಟಿಂಗ್​ ಸೆಟ್​ನಲ್ಲಿ ಹೇಗಿರ್ತಾರೆ ಗೊತ್ತಾ ಪ್ರಶಾಂತ್​ ನೀಲ್​? ವಿಶೇಷ ವಿಡಿಯೋ ಹಂಚಿಕೊಂಡ ‘ಸಲಾರ್​’ ಚಿತ್ರತಂಡ
ಪ್ರಶಾಂತ್​ ನೀಲ್​
ಮದನ್​ ಕುಮಾರ್​
|

Updated on:Jun 04, 2023 | 1:09 PM

Share

ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜೂನ್​ 4) ಅವರ ಜನ್ಮದಿನ. ಆ ಪ್ರಯುಕ್ತ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಶುಭಾಶಯ ತಿಳಿಸುತ್ತಿದ್ದಾರೆ. ಪ್ರಭಾಸ್​ ಅಭಿನಯದ ‘ಸಲಾರ್​’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ (​Hombale Films)​ ಸಂಸ್ಥೆ ಬಂಡವಾಳ ಹೂಡುತ್ತಿದ್ದು, ಸ್ಟಾರ್​ ಡೈರೆಕ್ಟರ್​ ಬರ್ತ್​ಡೇ ಸಲುವಾಗಿ ಒಂದು ವಿಶೇಷ ವಿಡಿಯೋ ಹಂಚಿಕೊಳ್ಳಲಾಗಿದೆ. ಶೂಟಿಂಗ್​​ ಸಂದರ್ಭದಲ್ಲಿ ಪ್ರಶಾಂತ್​ ನೀಲ್​ ಹೇಗೆ ಇರುತ್ತಾರೆ ಎಂಬುದಕ್ಕೆ ಈ ವಿಡಿಯೋದಲ್ಲಿ ಉತ್ತರ ಇದೆ. ಅವರ ಹುಟ್ಟುಹಬ್ಬದ ಪ್ರಯುಕ್ತ ‘ಸಲಾರ್​’ (​Salaar) ಚಿತ್ರತಂಡದಿಂದ ಟೀಸರ್​ ಬಿಡುಗಡೆ ಆಗಬಹುದು ಎಂದು ಕೆಲವರು ನಿರೀಕ್ಷಿಸಿದ್ದರು. ಆದರೆ ಅದು ನಿಜವಾಗಿಲ್ಲ. ಸದ್ಯ ಮೇಕಿಂಗ್​ ವಿಡಿಯೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಳಿಕ ಪ್ರಶಾಂತ್​ ನೀಲ್​ ಅವರ ಖ್ಯಾತಿ ಹೆಚ್ಚಾಯಿತು. ಪ್ಯಾನ್​ ಇಂಡಿಯಾ ಡೈರೆಕ್ಟರ್​ ಆಗಿ ಅವರು ಗುರುತಿಸಿಕೊಂಡರು. ಹೊಂಬಾಳೆ ಫಿಲ್ಮ್ಸ್​ ಜೊತೆ ಅವರು ಮತ್ತೆ ಕೈ ಜೋಡಿಸಿದ್ದು, ‘ಸಲಾರ್​’ ಸಿನಿಮಾವನ್ನು ಅದ್ದೂರಿಯಾಗಿ ಕಟ್ಟಿಕೊಡುತ್ತಿದ್ದಾರೆ. ಪ್ರಶಾಂತ್​ ನೀಲ್​ ಅವರಿಗೆ ಸಿನಿಮಾ ಮೇಲೆ ಸಖತ್ ಪ್ಯಾಷನ್​ ಇದೆ. ಅವರು ಕೆಲಸ ಮಾಡುವ ರೀತಿಯೇ ಭಿನ್ನ. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಘಟಾನುಘಟಿ ಸ್ಟಾರ್​ ಕಲಾವಿದರು ಕೂಡ ಹಂಬಲಿಸುತ್ತಿದ್ದಾರೆ.

ಸಲಾರ್​ ಟೀಮ್​ ಜೊತೆ ಪ್ರಶಾಂತ್​ ನೀಲ್​ ಹುಟ್ಟುಹಬ್ಬ:

ಜೂನ್​ 3ರ ರಾತ್ರಿಯೇ ಸೆಲೆಬ್ರೇಷನ್​ ಶುರುವಾಗಿದೆ. ವಿಶೇಷ ಎಂದರೆ, ಈ ಬಾರಿ ಪ್ರಶಾಂತ್ ನೀಲ್​ ಅವರು ಪ್ಯಾನ್ ಇಂಡಿಯಾ ಸ್ಟಾರ್​ ಪ್ರಭಾಸ್​ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಜೊತೆ ‘ಹೊಂಬಾಳೆ ಫಿಲ್ಮ್ಸ್​’ನ ವಿಜಯ್​ ಕಿರಗಂದೂರು ಕೂಡ ಸಾಥ್​ ನೀಡಿದ್ದಾರೆ. ಎಲ್ಲರೂ ಒಟ್ಟಾಗಿ ಕೇಕ್​ ಕಟ್​ ಮಾಡುತ್ತಿರುವ ಫೋಟೋ ವೈರಲ್​ ಆಗಿದೆ. ‘ಸಲಾರ್​’ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಕೆಲಸದ ಮಧ್ಯೆ ಬ್ರೇಕ್​ ಪಡೆದು ಈ ಚಿತ್ರತಂಡದವರು ಪ್ರಶಾಂತ್​ ನೀಲ್​ ಅವರ ಬರ್ತ್​ಡೇ ಸೆಲೆಬ್ರೇಟ್​ ಮಾಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

‘ಕೆಜಿಎಫ್​’ ಸಿನಿಮಾ ಬಾಕ್ಲ್​ ಬಸ್ಟರ್​ ಹಿಟ್​ ಆಗುತ್ತಿದ್ದಂತೆಯೇ ಪ್ರಶಾಂತ್​ ನೀಲ್​ ಅವರಿಗೆ ಟಾಲಿವುಡ್​ನಿಂದ ಸಾಕಷ್ಟು ಆಫರ್​ ಬರಲು ಆರಂಭ ಆಯಿತು. ಆ ಪೈಕಿ ಅವರು ಕೆಲವೇ ಪ್ರಾಜೆಕ್ಟ್​ಗಳಿಗೆ ಸಹಿ ಮಾಡಿದರು. ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಸಲಾರ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ನಟನೆಯ 31ನೇ ಸಿನಿಮಾಗೆ ಅವರು ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಡಿವಿವಿ ಎಂಟರ್​ಟೇನ್​ಮೆಂಟ್ಸ್​’ ಕೂಡ ಪ್ರಭಾಸ್​ಗೆ ವಿಶ್​ ಮಾಡಿದೆ. ಜೂನಿಯರ್​ ಎನ್​ಟಿಆರ್​ ಹಾಗೂ ಪ್ರಭಾಸ್​ ಫ್ಯಾನ್ಸ್​ ಪೇಜ್​ಗಳಲ್ಲಿ ಪ್ರಶಾಂತ್​ ನೀಲ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹರಿದುಬಂದಿದೆ. ತೆಲುಗು ಚಿತ್ರರಂಗದಲ್ಲಿ ಪ್ರಶಾಂತ್​ ನೀಲ್​ ಅವರಿಗೆ ಸಖತ್​ ಬೇಡಿಕೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Sun, 4 June 23

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ