Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ಒಂದು ವಾರಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಏಳು ದಿನದ ಲೆಕ್ಕ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ವಿಶ್ವ ಮಟ್ಟದಲ್ಲಿ ಈ ಚಿತ್ರ ಇಲ್ಲಿಯವರೆಗೆ 542 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಸಲಾರ್’ ಸಿನಿಮಾ ಒಂದು ವಾರಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಏಳು ದಿನದ ಲೆಕ್ಕ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Dec 29, 2023 | 3:03 PM

ಪ್ರಭಾಸ್, ಪೃಥ್ವಿರಾಜ್​ ಸುಕುಮಾರನ್ ಮೊದಲಾದವರು ನಟಿಸಿರುವ ‘ಸಲಾರ್’ ಸಿನಿಮಾ (Salaar Movie) ರಿಲೀಸ್ ದಿನ ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡಿತ್ತು. ದಿನ ಕಳೆದಂತೆ ಈ ಚಿತ್ರದ ಗಳಿಕೆ ಕಡಿಮೆ ಆಗುತ್ತಾ ಬಂದಿದೆ. ಸದ್ಯ ಈ ಚಿತ್ರ ಒಂದು ವಾರಕ್ಕೆ 500+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದಿಂದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಆಭ ಆಗಿದೆ. ಮುಂದಿನ ದಿನಗಳಲ್ಲಿ ನೆಟ್​ಫ್ಲಿಕ್ಸ್ ಒಟಿಟಿಯಲ್ಲಿ ಈ ಚಿತ್ರ ಪ್ರಸಾರ ಕಾಣಲಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ವಿಶ್ವ ಮಟ್ಟದಲ್ಲಿ ಈ ಚಿತ್ರ ಇಲ್ಲಿಯವರೆಗೆ 542 ಕೋಟಿ ರೂಪಾಯಿ ಬಾಚಿಕೊಂಡಿದೆ. ಕನ್ನಡದಲ್ಲಿ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇದರಿಂದ ‘ಸಲಾರ್’ ಕಲೆಕ್ಷನ್ ಮತ್ತಷ್ಟು ಕಡಿಮೆ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಸಲಾರ್​’ ನಟಿ ಶ್ರುತಿ ಹಾಸನ್​ ಗುಟ್ಟಾಗಿ ಮದುವೆ ಆಗಿದ್ದಾರಾ? ಸ್ಪಷ್ಟನೆ ನೀಡಿದ ಕಮಲ್​ ಪುತ್ರಿ

‘ಸಲಾರ್’ ಸಿನಿಮಾದ ಏಳು ದಿನದ ಗಳಿಕೆ

ಡಿಸೆಂಬರ್ 22: 176.52 ಕೋಟಿ ರೂಪಾಯಿ

ಡಿಸೆಂಬರ್ 23: 101.39 ಕೋಟಿ ರೂಪಾಯಿ

ಡಿಸೆಂಬರ್ 24: 95.24 ಕೋಟಿ ರೂಪಾಯಿ

ಡಿಸೆಂಬರ್ 25: 76.91 ಕೋಟಿ ರೂಪಾಯಿ

ಡಿಸೆಂಬರ್ 26: 40.17 ಕೋಟಿ ರೂಪಾಯಿ

ಡಿಸೆಂಬರ್ 27: 31.62 ಕೋಟಿ ರೂಪಾಯಿ

ಡಿಸೆಂಬರ್ 28: 20.78 ಕೋಟಿ ರೂಪಾಯಿ

ಈ ವಾರ ‘ಸಲಾರ್’ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಾದ ಅನಿವಾರ್ಯತೆ ಇದೆ. ಆರಂಭದಲ್ಲಿ ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈ ಊಹೆ ಸುಳ್ಳಾಗುವ ಸಾಧ್ಯತೆ ಇದೆ.  ಪ್ರಭಾಸ್ ಅವರು ‘ಬಾಹುಬಲಿ 2’ ಬಳಿಕ ಈ ಚಿತ್ರದಿಂದ ಗೆದ್ದು ಬೀಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್