ಜಪಾನ್ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ

ಭಾರತದ ಸಿನಿಮಾಗಳಿಗೆ ಜಪಾನ್​ನಲ್ಲಿ ಭರ್ಜರಿಗೆ ಬೇಡಿಕೆ ಇದೆ. ಭಾರತದ ಯಾವುದೇ ಸಿನಿಮಾ ರಿಲೀಸ್ ಆದರೂ ಜನರು ಮುಗಿಬಿದ್ದು ವೀಕ್ಷಿಸುತ್ತಾರೆ. ಮೊದಲ ವೀಕೆಂಡ್​ನಲ್ಲಿ ಈ ಚಿತ್ರ 95 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರದ ಓಪನಿಂಗ್ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿದೆ.

ಜಪಾನ್ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ
ಸಲಾರ್ ಪೋಸ್ಟರ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 11, 2024 | 8:56 AM

ಪ್ರಶಾಂತ್ ನೀಲ್ ಅವರು ಸಿನಿಮಾನ ಅಚ್ಚುಕಟ್ಟಾಗಿ ತೆರೆಮೇಲೆ ತರಲು ಪ್ರಯತ್ನಿಸುತ್ತಾರೆ. ಕನ್ನಡದಲ್ಲಿ ರಿಲೀಸ್ ಆದ ‘ಉಗ್ರಂ’ ಚಿತ್ರವನ್ನು ತೆಲುಗಿಗೆ ‘ಸಲಾರ್’ ಹೆಸರಲ್ಲಿ ರಿಮೇಕ್ ಮಾಡಿದ್ದಾರೆ. ಸ್ವಲ್ಪ ಬೇರೆ ಫ್ಲೇವರ್ ಸೇರಿಸಿ ಅವರು ಕಥೆಯನ್ನು ಬದಲಿಸಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸರಿ ಸುಮಾರು 600 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಈ ಚಿತ್ರವು ಮೊದಲ ವಾರ ಉತ್ತಮ ಕಲೆಕ್ಷನ್ ಮಾಡಿದೆ.

‘ಸಲಾರ್’ ಸಿನಿಮಾ ಭಾರತದಲ್ಲಿ ಕಳೆದ ವರ್ಷ ಡಿಸೆಂಬರ್ 22ರಂದು ಬಿಡುಗಡೆ ಆಯಿತು. ಈ ಚಿತ್ರವನ್ನು ಜನರು ಮೆಚ್ಚಿಕೊಂಡರು. ಕೆಲವರು ಸಿನಿಮಾದ ಬಗ್ಗೆ ಅಪಸ್ವರ ತೆಗೆದರು. ‘ಇದು ಉಗ್ರಂ ಚಿತ್ರದ ರಿಮೇಕ್’ ಎಂದು ಹೇಳಿದರು. ಇದು ಚಿತ್ರಕ್ಕೆ ಹಿನ್ನಡೆ ಆಯಿತು. ಜುಲೈ 5ರಂದು ಸಿನಿಮಾ ಜಪಾನ್​ನಲ್ಲಿ ಬಿಡುಗಡೆ ಆಗಿದೆ. ಅಲ್ಲಿನ ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭರ್ಜರಿಗೆ ಬೇಡಿಕೆ ಇದೆ. ಯಾವುದೇ ಭಾರತದ ಸಿನಿಮಾ ರಿಲೀಸ್ ಆದರೂ ಜನರು ಮುಗಿಬಿದ್ದು ವೀಕ್ಷಿಸುತ್ತಾರೆ. ಮೊದಲ ವೀಕೆಂಡ್​ನಲ್ಲಿ ಈ ಚಿತ್ರ 95 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರದ ಓಪನಿಂಗ್ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿದೆ. ಮೊದಲ ವಾರದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಮೂರನೇ ಭಾರತೀಯ ಸಿನಿಮಾ ಇದಾಗಿದೆ.

ಜಪಾನ್​ನಲ್ಲಿ ಮೊದಲ ವಾರ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ (2.2 ಕೋಟಿ ರೂಪಾಯಿ) ಮೊದಲಿದೆ. ಆ ಬಳಿಕ ‘ಸಾಹೋ’ ಸಿನಿಮಾ (1.18 ಕೋಟಿ ರೂಪಾಯಿ) ಇದೆ.  ಈಗ ಮೂರನೇ ಸ್ಥಾನಕ್ಕೆ ‘ಸಲಾರ್’ ಸಿನಿಮಾ ಬಂದಿದೆ.

ಇದನ್ನೂ ಓದಿ: ಊಹಾಪೋಹಗಳಿಗೆ ತೆರೆ ‘ಸಲಾರ್ 2’ ಶೀಘ್ರ ಪ್ರಾರಂಭ, ಹಾಗಿದ್ದರೆ ಜೂ ಎನ್​ಟಿಆರ್ ಕತೆ?

‘ಸಲಾರ್’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಅಂದುಕೊಂಡ ಮಟ್ಟದ ಗಳಿಕೆ ಮಾಡಿಲ್ಲ. ಈಗ ಜಪಾನ್​ನಲ್ಲಿ ಕಲೆಕ್ಷನ್ ಹೆಚ್ಚುತ್ತಿರುವುದರಿಂದ ಸಿನಿಮಾದ ಒಟ್ಟಾರೆ ಗಳಿಕೆ ಹೆಚ್ಚಲಿದೆ. ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದರೆ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಇನ್ನಷ್ಟೇ ಸೀಕ್ವೆಲ್ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ