AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಚಿತ್ರದಲ್ಲಿ ಅಷ್ಟೊಂದು ವೈಲೆನ್ಸ್ ಏಕೆ? ಉತ್ತರಿಸಿದ ಪ್ರಶಾಂತ್ ನೀಲ್

Salaar Movie: ‘ಸಲಾರ್ ಪಾರ್ಟ್​ 1: ಸೀಸ್​ಫೈರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಏಕೆ ಈ ಚಿತ್ರದಲ್ಲಿ ಹೆಚ್ಚು ವೈಲೆನ್ಸ್ ತೋರಿಸಲಾಗಿದೆ ಎಂಬುದರ ವಿವರಣೆ ನೀಡಿದ್ದಾರೆ.

‘ಸಲಾರ್’ ಚಿತ್ರದಲ್ಲಿ ಅಷ್ಟೊಂದು ವೈಲೆನ್ಸ್ ಏಕೆ? ಉತ್ತರಿಸಿದ ಪ್ರಶಾಂತ್ ನೀಲ್
ಪ್ರಶಾಂತ್​ ನೀಲ್​, ಪ್ರಭಾಸ್​
ರಾಜೇಶ್ ದುಗ್ಗುಮನೆ
|

Updated on:Dec 18, 2023 | 10:21 AM

Share

‘ಸಲಾರ್ ಪಾರ್ಟ್​ 1: ಸೀಸ್​ಫೈರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ತಂಡ ಭಾಗಿ ಆಗಿದೆ. ಇದನ್ನು ಮೋಸ್ಟ್ ವೈಲೆಂಟ್ ಸಿನಿಮಾ ಎಂದು ಪ್ರಭಾಸ್ ಕರೆದಿದ್ದಾರೆ. ಪ್ರಶಾಂತ್ ನೀಲ್ (Prashanth Neel) ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಏಕೆ ಈ ಚಿತ್ರದಲ್ಲಿ ಹೆಚ್ಚು ವೈಲೆನ್ಸ್ ತೋರಿಸಲಾಗಿದೆ ಎಂಬುದರ ವಿವರಣೆ ನೀಡಿದ್ದಾರೆ.

ಇಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್ ನೀಲ್​ ಮಾತನಾಡಿದ್ದಾರೆ. ‘ಹಿಂಸಾಚಾರ ಭಾವನೆಯೊಂದಿಗೆ ಮಾತ್ರ ಬರುತ್ತದೆ. ಮಾಸ್ ಸಿನಿಮಾಗಳನ್ನು ಜನರು ನೋಡುತ್ತಾರೆ ಅನ್ನೋದು ಗೊತ್ತು. ಮಾಸ್ ಸಿನಿಮಾ ಎಂದಾಗ ಅದರಲ್ಲಿ ಹಿಂಸಾಚಾರ ಇರುತ್ತದೆ. ವೈಲೆನ್ಸ್ ಹೆಚ್ಚಿದ್ದಷ್ಟು ಸಿನಿಮಾ ಮಾಸ್ ಆಗುತ್ತ ಹೋಗುತ್ತದೆ’ ಎಂದಿದ್ದಾರೆ ಪ್ರಶಾಂತ್ ನೀಲ್. ಈ ಮೂಲಕ ‘ಸಲಾರ್’ ಚಿತ್ರದಲ್ಲಿ ಮಾಸ್ ಅಂಶ ಹೆಚ್ಚಿದೆ ಎಂಬುದನ್ನು ಅವರು ಹೇಳಿದ್ದಾರೆ.

‘ಸಲಾರ್ ಮಾಸ್ ಸಿನಿಮಾ. ಈ ಸಿನಿಮಾ ಹಿಂದೆ ಒಂದು ಭಾವನೆ ಇದೆ. ಹಿಂಸೆ ಬರುವುದು ಆ ಭಾವನೆಯಿಂದಲೇ. ಹಾಗಾಗಿ ನಾವು ಸಿನಿಮಾದ ಭಾವನೆಗಳಿಂದ ನಮ್ಮನ್ನು ನಿರ್ಬಂಧಿಸಿಕೊಂಡಿದ್ದೆವು.  ಸಿನಿಮಾಗಾಗಿ ನಾವು ಹೆಚ್ಚು ಶ್ರಮ ಹಾಕಿದ್ದೇವೆ’ ಎಂದಿದ್ದಾರೆ ಪ್ರಶಾಂತ್ ನೀಲ್. ಯಶ್ ಅವರನ್ನು ಪ್ರಶಾಂತ್ ನೀಲ್ ಹೊಗಳಿದ್ದು, ಈ ಫ್ರೆಂಡ್​ಶಿಪ್ ಲೈಫ್​ಟೈಮ್ ಇರುತ್ತದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ 

ಪ್ರಭಾಸ್ ಜೊತೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮೊದಲಾದವರು ಪ್ರಮುಖ ಪಾತ್ರ ಮಾಡಿದ್ದಾರೆ. ಇದು ಫ್ರೆಂಡ್ಸ್ ಇಬ್ಬರ ಜರ್ನಿ. ವಿಜಯ್ ಕಿರಗಂದೂರು ಅವರು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಶುಕ್ರವಾರ (ಡಿಸೆಂಬರ್ 22) ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.  ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘ಎ’ ಸರ್ಟಿಫಿಕೇಟ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:20 am, Mon, 18 December 23

ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ
ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ