AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಸಲಾರ್’ ಪೈರಸಿ ತಡೆಯಲು ‘ಹೊಂಬಾಳೆ ಫಿಲ್ಮ್ಸ್’ ತಂತ್ರ

ಇತ್ತೀಚೆಗೆ ಪೈರಸಿ ಕಾಟ ಜೋರಾಗಿದೆ. ಬಿಗ್ ಬಜೆಟ್​ ಸಿನಿಮಾಗಳು ರಿಲೀಸ್ ಆದಾಗ ಅಭಿಮಾನಿಗಳು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದನ್ನು ತಡೆಯಲು ಹೊಂಬಾಳೆ ಮುಂದಾಗಿದೆ.

ಪ್ರಭಾಸ್ ನಟನೆಯ ‘ಸಲಾರ್’ ಪೈರಸಿ ತಡೆಯಲು ‘ಹೊಂಬಾಳೆ ಫಿಲ್ಮ್ಸ್’ ತಂತ್ರ
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 22, 2023 | 1:28 PM

Share

‘ಬಾಹುಬಲಿ 2’ ಬಳಿಕ ನಟ ಪ್ರಭಾಸ್ (Prabhas) ಅವರು ಒಂದು ಮಾಸ್ ಚಿತ್ರದ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ಇಂದು (ಡಿಸೆಂಬರ್ 22) ಬಿಡುಗಡೆ ಆಗಿದೆ. ಕೆಲವರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದರೆ, ಇನ್ನೂ ಕೆಲವರು ನೆಗೆಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಮೇಕಿಂಗ್​ನಲ್ಲಿ ‘ಕೆಜಿಎಫ್ 2’ ಛಾಯೆ ಹಾಗೂ ‘ಉಗ್ರಂ’ ಕಥೆಯನ್ನು ಎರವಲು ಪಡೆದ ಬಗ್ಗೆ ಅನೇಕರು ಈ ಚಿತ್ರವನ್ನು ಟೀಕಿಸಿದ್ದಾರೆ. ಸಿನಿಮಾ ಪೈರಸಿ ಆಗದಂತೆ ನೋಡಿಕೊಳ್ಳಲು ಚಿತ್ರತಂಡ ಮುಂದಾಗಿದೆ. ಹೊಂಬಾಳೆ ಫಿಲ್ಮ್ಸ್ ಈ ಬಗ್ಗೆ ಟ್ವೀಟ್ ಮಾಡಿ ವಿಶೇಷ ಮನವಿ ಮಾಡಿದೆ.

ಕನ್ನಡದಲ್ಲಿ 2014ರಲ್ಲಿ ‘ಉಗ್ರಂ’ ಸಿನಿಮಾ ರಿಲೀಸ್ ಆಗಿತ್ತು. ಈ ಚಿತ್ರವನ್ನು ಜನರು ಥಿಯೇಟರ್​ನಲ್ಲಿ ಹೆಚ್ಚು ನೋಡಿರಲಿಲ್ಲ. ಈ ಸಿನಿಮಾದ ಪೈರಸಿ ಕಾಪಿ ಹೆಚ್ಚು ವೈರಲ್ ಆಯ್ತು. ಜನರು ಪೈರಸಿ ಕಾಪಿಯನ್ನೇ ನೋಡಿ ಮೆಚ್ಚಿಕೊಂಡರು. ಈ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತೇ ಹೊರತು ಗಳಿಕೆ ಮಾಡಲಿಲ್ಲ. ಈ ಬೇಸರ ಪ್ರಶಾಂತ್ ನೀಲ್ ಅವರಿಗೆ ಇದೆ. ಈ ಕಾರಣದಿಂದಲೇ ಪ್ರಶಾಂತ್ ನೀಲ್ ಅವರು ದೊಡ್ಡ ಸ್ಕೇಲ್​ನಲ್ಲಿ ‘ಸಲಾರ್’ ಮಾಡಿದರು. ಈ ಸಿನಿಮಾಗೆ ಪೈರಸಿಯ ಕಾಟ ಎದುರಾಗಬಹುದು ಎಂದು ತಂಡ ಮೊದಲೇ ಎಚ್ಚೆತ್ತುಕೊಂಡಿದೆ.

ಇತ್ತೀಚೆಗೆ ಪೈರಸಿ ಕಾಟ ಜೋರಾಗಿದೆ. ಬಿಗ್ ಬಜೆಟ್​ ಸಿನಿಮಾಗಳು ರಿಲೀಸ್ ಆದಾಗ ಅಭಿಮಾನಿಗಳು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇನ್ನೂ ಕೆಲವರು ಥಿಯೇಟರ್​ ಪ್ರಿಂಟ್​ನ ಪೈರಸಿ ಸೈಟ್​​ನಲ್ಲಿ ಅಪ್​ಲೋಡ್ ಮಾಡುತ್ತಾರೆ. ಈ ಕಾರಣದಿಂದ ಹೊಂಬಾಳೆ ಫಿಲ್ಮ್ಸ್ ವಿಶೇಷ ಮನವಿ ಮಾಡಿಕೊಂಡಿದೆ.

‘ಸಲಾರ್ ಚಿತ್ರವನ್ನು ನಿಮ್ಮ ಹತ್ತಿರದ ಚಿತ್ರಮಂದಿರದಲ್ಲೇ ನೋಡಿ. ಪೈರಸಿ ಲಿಂಕ್ ಕಂಡರೆ ಟ್ವಿಟರ್ ಖಾತೆ @blockxtechs ಅಥವಾ @blockxtech.com ಖಾತೆಗೆ ರಿಪೋರ್ಟ್ ಮಾಡಿ’ ಎಂದು ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿದೆ.  ಇದನ್ನು ಅಭಿಮಾನಿಗಳು ಬೆಂಬಲಿಸಿದ್ದಾರೆ. ಈ ರೀತಿಯ ದೃಶ್ಯ ಕಂಡರೆ ಮಾಹಿತಿ ನೀಡುವುದಾಗಿ ಅಭಿಮಾನಿಗಳು ಹೇಳಿದ್ದಾರೆ.

ಇದನ್ನೂ ಓದಿ: ‘ಉಗ್ರಂ’, ‘ಕೆಜಿಎಫ್​’ ಚಿತ್ರಗಳನ್ನು ನೆನಪಿಸಿದ ‘ಸಲಾರ್​’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ

‘ಸಲಾರ್’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಅದ್ದೂರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ. ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್’, ‘ಸಾಹೋ’ ಮತ್ತು ‘ಆದಿಪುರುಷ್’ ಸಿನಿಮಾಗಳು ನಿರಾಶಾದಾಯಕವಾಗಿದ್ದವು. ಇದರಿಂದಾಗಿ ಅಭಿಮಾನಿಗಳು ‘ಸಲಾರ್’ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆ ಹುಸಿ ಆಗಿಲ್ಲ ಎಂದು ಪ್ರಭಾಸ್ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ‘ಸಲಾರ್’ ಸಿನಿಮಾ ಸಖತ್ ಮಾಸ್ ಆಗಿದೆ. ಪ್ರಭಾಸ್ ಅವರು ಆ್ಯಕ್ಷನ್ ಅವತಾರದಲ್ಲಿ ಮೆರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ