AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೇಮ್ ಆಫ್​ ಥ್ರೋನ್ಸ್‘ ರೀತಿಯಲ್ಲೇ ಇರಲಿದೆ ‘ಸಲಾರ್’ ಸಿನಿಮಾ; ಪೃಥ್ವಿರಾಜ್​ ಹೇಳಿದ್ರು ಸೀಕ್ರೆಟ್​

‘ಗೇಮ್ ಆಫ್ ಥ್ರೋನ್ಸ್’ ಇಂಗ್ಲಿಷ್ ಸೀರಿಸ್ ಸಾಕಷ್ಟು ಗಮನ ಸೆಳೆದಿದೆ. ಈ ಸೀರಿಸ್​ ಹಲವು ಸೀಸನ್​ಗಳಲ್ಲಿ ಪ್ರಸಾರ ಕಂಡಿದೆ. ಸಿಂಹಾಸನಕ್ಕಾಗಿ ನಡೆಯುವ ಯುದ್ಧವನ್ನು ಈ ಸಿರೀಸ್​ ಒಳಗೊಂಡಿತ್ತು. ‘ಸಲಾರ್’ ಸಿನಿಮಾ ಕೂಡ ಅದೇ ರೀತಿಯಲ್ಲಿ ಇದೆಯಂತೆ.

‘ಗೇಮ್ ಆಫ್​ ಥ್ರೋನ್ಸ್‘ ರೀತಿಯಲ್ಲೇ ಇರಲಿದೆ ‘ಸಲಾರ್’ ಸಿನಿಮಾ; ಪೃಥ್ವಿರಾಜ್​ ಹೇಳಿದ್ರು ಸೀಕ್ರೆಟ್​
ಸಲಾರ್ ಸಿನಿಮಾದಲ್ಲಿ ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Dec 16, 2023 | 10:41 AM

Share

‘ಸಲಾರ್’ ಸಿನಿಮಾ (Salaar Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ರಿಲೀಸ್​ ಆಗೋಕೆ ಇರೋದು ಇನ್ನು ಕೆಲವೇ ದಿನಗಳು ಮಾತ್ರ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಸಿನಿಮಾ ಕಲಾವಿದರು, ನಿರ್ದೇಶಕರು ಈ ಸಿನಿಮಾ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಈಗ ನಟ ಪೃಥ್ವಿರಾಜ್​ ಸುಕುಮಾರನ್ ಅವರು ಸಿನಿಮಾ ಬಗ್ಗೆ ದೊಡ್ಡ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಗೇಮ್ ಆಫ್ ಥ್ರೋನ್ಸ್’ ಇಂಗ್ಲಿಷ್ ಸೀರಿಸ್ ಸಾಕಷ್ಟು ಗಮನ ಸೆಳೆದಿದೆ. ಈ ಸೀರಿಸ್​ ಹಲವು ಸೀಸನ್​ಗಳಲ್ಲಿ ಪ್ರಸಾರ ಕಂಡಿದೆ. ಸಿಂಹಾಸನಕ್ಕಾಗಿ ನಡೆಯುವ ಯುದ್ಧವನ್ನು ಈ ಸಿರೀಸ್​ ಒಳಗೊಂಡಿತ್ತು. ‘ಸಲಾರ್’ ಸಿನಿಮಾ ಕೂಡ ಅದೇ ರೀತಿಯಲ್ಲಿ ಇದೆಯಂತೆ. ಈ ಬಗ್ಗೆ ಪೃಥ್ವಿರಾಜ್ ಮಾಹಿತಿ ನೀಡಿದ್ದಾರೆ.

‘ಸಲಾರ್ ಸಿನಿಮಾ ಇಂಗ್ಲಿಷ್​ನ ಗೇಮ್ ಆಫ್ ಥ್ರೋನ್ಸ್‌ನಂತಿದೆ. ಸಿನಿಮಾದಲ್ಲಿ ಸಖತ್ ಡ್ರಾಮಾ ಇದೆ. ನನ್ನ ಪಾತ್ರ ಅದ್ಭುತವಾಗಿದೆ ಅನ್ನೋದು ನನ್ನ ಭಾವನೆ. ಪ್ರಶಾಂತ್ ನೀಲ್ ಸಿನಿಮಾ ಎಂದರೆ ಯಾರು ತಾನೇ ಕೆಲಸ ಮಾಡೋಕೆ ಇಷ್ಟಪಡಲ್ಲ ಹೇಳಿ’ ಎಂದಿದ್ದಾರೆ ಪೃಥ್ವಿರಾಜ್​ ಸುಕುಮಾರನ್​.

ಇದನ್ನೂ ಓದಿ: ‘ಸಲಾರ್’ ಸಿನಿಮಾದ ಕತೆ ಏನು? ಕ್ಲೈಮ್ಯಾಕ್ಸ್​ನಲ್ಲಿ ಇರಲಿದೆ ಸಖತ್ ಟ್ವಿಸ್ಟ್

‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಅವರ ನಿರ್ದೇಶನ ಇದೆ. ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ. ‘ಕೆಜಿಎಫ್ 2’ ಸೂಪರ್ ಹಿಟ್ ಆದ ಬಳಿಕ ವಿಜಯ್ ಕಿರಗಂದೂರು ಹಾಗೂ ಪ್ರಶಾಂತ್ ನೀಲ್ ಒಟ್ಟಾಗಿ ಕೆಲಸ ಮಾಡಿದ ಸಿನಿಮಾ ಇದು ಎನ್ನುವ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈಗಾಗಲೇ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅಡ್ವಾನ್ಸ್ ಬುಕಿಂಗ್ ಕೂಡ ಓಪನ್ ಆಗಿದ್ದು ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು