AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಸಲಾರ್’ ರಿಲೀಸ್​ಗೂ ಮೊದಲೇ ಪ್ರಭಾಸ್​ಗೆ ಶಾಕ್ ಕೊಟ್ಟ ಹ್ಯಾಕರ್ಸ್​

ಪ್ರಭಾಸ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲು ಪ್ರಭಾಸ್​ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ.

Prabhas: ‘ಸಲಾರ್’ ರಿಲೀಸ್​ಗೂ ಮೊದಲೇ ಪ್ರಭಾಸ್​ಗೆ ಶಾಕ್ ಕೊಟ್ಟ ಹ್ಯಾಕರ್ಸ್​
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jul 28, 2023 | 12:33 PM

Share

ಪ್ರಭಾಸ್ (Prabhas) ಅವರಿಗೆ ಇತ್ತೀಚೆಗೆ ಟೈಮ್ ಸರಿ ಇಲ್ಲ. ಅವರ ನಟನೆಯ ಸಾಲು ಸಾಲು ಸಿನಿಮಾಗಳು ಸೋಲು ಕಾಣುತ್ತಿವೆ. ಇತ್ತೀಚೆಗೆ ರಿಲೀಸ್ ಆದ ‘ಆದಿಪುರುಷ್’ ಸಿನಿಮಾ (Adipurush Movie) ಕೂಡ ಸೋತಿತ್ತು. ಬಿಗ್ ಬಜೆಟ್​ನಲ್ಲಿ ರೆಡಿ ಆದ ಸಿನಿಮಾ ಕಮಾಲ್ ಮಾಡುವಲ್ಲಿ ವಿಫಲ ಆಯಿತು. ಈಗ ಪ್ರಭಾಸ್ ಅವರಿಗೆ ಹ್ಯಾಕರ್ಸ್ ಶಾಕ್ ನೀಡಿದ್ದಾರೆ. ಅವರ ಫೇಸ್​ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಬೇಕಾಬಿಟ್ಟಿ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈಗ ಅವರ ಖಾತೆಯನ್ನು ಹ್ಯಾಕರ್ಸ್​​ಗಳ ಕೈನಿಂದ ಮರಳಿ ಪಡೆಯಲಾಗಿದೆ. ಈ ಬಗ್ಗೆಯೂ ಪ್ರಭಾಸ್ ಅಪ್​ಡೇಟ್ ನೀಡಿದ್ದಾರೆ.

ಕಳೆದ ತಿಂಗಳು ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ರಿಲೀಸ್ ಆಯಿತು. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಟೀಕೆ ವ್ಯಕ್ತವಾಯಿತು. ಈಗ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲು ಪ್ರಭಾಸ್​ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಬಳಿಕ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಅವರ ಖಾತೆಯಿಂದ ಪೋಸ್ಟ ಆದ ಎರಡೂ ವೈರಲ್ ವಿಡಿಯೋಗಳು.

ಪ್ರಭಾಸ್ ಏಕೆ ವೈರಲ್ ವಿಡಿಯೋಗಳನ್ನು ಪೋಸ್ಟ್ ಮಾಡಿದರು ಎಂದು ಎಲ್ಲರೂ ಆಲೋಚಿಸಿದ್ದರು. ಕೆಲವರು ಈ ಬಗ್ಗೆ ಟೀಕೆ ಮಾಡಿದ್ದರು. ಇದಾದ ಕೆಲವೇ ಹೊತ್ತಲ್ಲಿ ಪ್ರಭಾಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಾಕಿದ್ದರು. ‘ಎಲ್ಲರಿಗೂ ಹೆಲೋ. ನನ್ನ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ನಮ್ಮ ತಂಡದವರು ಇದನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಈಗ ಫೇಸ್​ಬುಕ್ ಖಾತೆ ಸರಿಯಾಗಿದ್ದು, ಮರಳಿ ಪಡೆಯಲಾಗಿದೆ.

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಪ್ರಭಾಸ್ ನಟನೆಯ ಮುಂದಿನ ಸಿನಿಮಾ ‘ಸಲಾರ್’ ಹಾಗೂ ‘ಕಲ್ಕಿ 2898 ಎಡಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಎರಡೂ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ