AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಸಲಾರ್’ ರಿಲೀಸ್​ಗೂ ಮೊದಲೇ ಪ್ರಭಾಸ್​ಗೆ ಶಾಕ್ ಕೊಟ್ಟ ಹ್ಯಾಕರ್ಸ್​

ಪ್ರಭಾಸ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲು ಪ್ರಭಾಸ್​ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ.

Prabhas: ‘ಸಲಾರ್’ ರಿಲೀಸ್​ಗೂ ಮೊದಲೇ ಪ್ರಭಾಸ್​ಗೆ ಶಾಕ್ ಕೊಟ್ಟ ಹ್ಯಾಕರ್ಸ್​
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jul 28, 2023 | 12:33 PM

Share

ಪ್ರಭಾಸ್ (Prabhas) ಅವರಿಗೆ ಇತ್ತೀಚೆಗೆ ಟೈಮ್ ಸರಿ ಇಲ್ಲ. ಅವರ ನಟನೆಯ ಸಾಲು ಸಾಲು ಸಿನಿಮಾಗಳು ಸೋಲು ಕಾಣುತ್ತಿವೆ. ಇತ್ತೀಚೆಗೆ ರಿಲೀಸ್ ಆದ ‘ಆದಿಪುರುಷ್’ ಸಿನಿಮಾ (Adipurush Movie) ಕೂಡ ಸೋತಿತ್ತು. ಬಿಗ್ ಬಜೆಟ್​ನಲ್ಲಿ ರೆಡಿ ಆದ ಸಿನಿಮಾ ಕಮಾಲ್ ಮಾಡುವಲ್ಲಿ ವಿಫಲ ಆಯಿತು. ಈಗ ಪ್ರಭಾಸ್ ಅವರಿಗೆ ಹ್ಯಾಕರ್ಸ್ ಶಾಕ್ ನೀಡಿದ್ದಾರೆ. ಅವರ ಫೇಸ್​ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಬೇಕಾಬಿಟ್ಟಿ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈಗ ಅವರ ಖಾತೆಯನ್ನು ಹ್ಯಾಕರ್ಸ್​​ಗಳ ಕೈನಿಂದ ಮರಳಿ ಪಡೆಯಲಾಗಿದೆ. ಈ ಬಗ್ಗೆಯೂ ಪ್ರಭಾಸ್ ಅಪ್​ಡೇಟ್ ನೀಡಿದ್ದಾರೆ.

ಕಳೆದ ತಿಂಗಳು ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ರಿಲೀಸ್ ಆಯಿತು. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಟೀಕೆ ವ್ಯಕ್ತವಾಯಿತು. ಈಗ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲು ಪ್ರಭಾಸ್​ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಬಳಿಕ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಅವರ ಖಾತೆಯಿಂದ ಪೋಸ್ಟ ಆದ ಎರಡೂ ವೈರಲ್ ವಿಡಿಯೋಗಳು.

ಪ್ರಭಾಸ್ ಏಕೆ ವೈರಲ್ ವಿಡಿಯೋಗಳನ್ನು ಪೋಸ್ಟ್ ಮಾಡಿದರು ಎಂದು ಎಲ್ಲರೂ ಆಲೋಚಿಸಿದ್ದರು. ಕೆಲವರು ಈ ಬಗ್ಗೆ ಟೀಕೆ ಮಾಡಿದ್ದರು. ಇದಾದ ಕೆಲವೇ ಹೊತ್ತಲ್ಲಿ ಪ್ರಭಾಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಾಕಿದ್ದರು. ‘ಎಲ್ಲರಿಗೂ ಹೆಲೋ. ನನ್ನ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ನಮ್ಮ ತಂಡದವರು ಇದನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಈಗ ಫೇಸ್​ಬುಕ್ ಖಾತೆ ಸರಿಯಾಗಿದ್ದು, ಮರಳಿ ಪಡೆಯಲಾಗಿದೆ.

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಪ್ರಭಾಸ್ ನಟನೆಯ ಮುಂದಿನ ಸಿನಿಮಾ ‘ಸಲಾರ್’ ಹಾಗೂ ‘ಕಲ್ಕಿ 2898 ಎಡಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಎರಡೂ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ