AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಸಲಾರ್’ ರಿಲೀಸ್​ಗೂ ಮೊದಲೇ ಪ್ರಭಾಸ್​ಗೆ ಶಾಕ್ ಕೊಟ್ಟ ಹ್ಯಾಕರ್ಸ್​

ಪ್ರಭಾಸ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲು ಪ್ರಭಾಸ್​ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ.

Prabhas: ‘ಸಲಾರ್’ ರಿಲೀಸ್​ಗೂ ಮೊದಲೇ ಪ್ರಭಾಸ್​ಗೆ ಶಾಕ್ ಕೊಟ್ಟ ಹ್ಯಾಕರ್ಸ್​
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jul 28, 2023 | 12:33 PM

Share

ಪ್ರಭಾಸ್ (Prabhas) ಅವರಿಗೆ ಇತ್ತೀಚೆಗೆ ಟೈಮ್ ಸರಿ ಇಲ್ಲ. ಅವರ ನಟನೆಯ ಸಾಲು ಸಾಲು ಸಿನಿಮಾಗಳು ಸೋಲು ಕಾಣುತ್ತಿವೆ. ಇತ್ತೀಚೆಗೆ ರಿಲೀಸ್ ಆದ ‘ಆದಿಪುರುಷ್’ ಸಿನಿಮಾ (Adipurush Movie) ಕೂಡ ಸೋತಿತ್ತು. ಬಿಗ್ ಬಜೆಟ್​ನಲ್ಲಿ ರೆಡಿ ಆದ ಸಿನಿಮಾ ಕಮಾಲ್ ಮಾಡುವಲ್ಲಿ ವಿಫಲ ಆಯಿತು. ಈಗ ಪ್ರಭಾಸ್ ಅವರಿಗೆ ಹ್ಯಾಕರ್ಸ್ ಶಾಕ್ ನೀಡಿದ್ದಾರೆ. ಅವರ ಫೇಸ್​ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಬೇಕಾಬಿಟ್ಟಿ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈಗ ಅವರ ಖಾತೆಯನ್ನು ಹ್ಯಾಕರ್ಸ್​​ಗಳ ಕೈನಿಂದ ಮರಳಿ ಪಡೆಯಲಾಗಿದೆ. ಈ ಬಗ್ಗೆಯೂ ಪ್ರಭಾಸ್ ಅಪ್​ಡೇಟ್ ನೀಡಿದ್ದಾರೆ.

ಕಳೆದ ತಿಂಗಳು ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ರಿಲೀಸ್ ಆಯಿತು. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಟೀಕೆ ವ್ಯಕ್ತವಾಯಿತು. ಈಗ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ರಿಲೀಸ್​ಗೂ ಮೊದಲು ಪ್ರಭಾಸ್​ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಬಳಿಕ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಅವರ ಖಾತೆಯಿಂದ ಪೋಸ್ಟ ಆದ ಎರಡೂ ವೈರಲ್ ವಿಡಿಯೋಗಳು.

ಪ್ರಭಾಸ್ ಏಕೆ ವೈರಲ್ ವಿಡಿಯೋಗಳನ್ನು ಪೋಸ್ಟ್ ಮಾಡಿದರು ಎಂದು ಎಲ್ಲರೂ ಆಲೋಚಿಸಿದ್ದರು. ಕೆಲವರು ಈ ಬಗ್ಗೆ ಟೀಕೆ ಮಾಡಿದ್ದರು. ಇದಾದ ಕೆಲವೇ ಹೊತ್ತಲ್ಲಿ ಪ್ರಭಾಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಾಕಿದ್ದರು. ‘ಎಲ್ಲರಿಗೂ ಹೆಲೋ. ನನ್ನ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ನಮ್ಮ ತಂಡದವರು ಇದನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಈಗ ಫೇಸ್​ಬುಕ್ ಖಾತೆ ಸರಿಯಾಗಿದ್ದು, ಮರಳಿ ಪಡೆಯಲಾಗಿದೆ.

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಪ್ರಭಾಸ್ ನಟನೆಯ ಮುಂದಿನ ಸಿನಿಮಾ ‘ಸಲಾರ್’ ಹಾಗೂ ‘ಕಲ್ಕಿ 2898 ಎಡಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಎರಡೂ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ