AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಕತೆಯ ಬಗ್ಗೆ ರಾಜಮೌಳಿಗೆ ಹಲವು ಅನುಮಾನ, ಪ್ರಶಾಂತ್ ನೀಲ್ ಕ್ಷಮೆ ಕೇಳಿದ್ದೇಕೆ?

Salaar Movie: ‘ಸಲಾರ್’ ಸಿನಿಮಾ ಬಿಡುಗಡೆಗೆ ಕಲವೇ ದಿನಗಳು ಬಾಕಿ ಇದೆ. ಈ ನಡುವೆ ರಾಜಮೌಳಿ, ಪ್ರಶಾಂತ್ ನೀಲ್ ಬಳಿ ‘ಸಲಾರ್’ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

‘ಸಲಾರ್’ ಕತೆಯ ಬಗ್ಗೆ ರಾಜಮೌಳಿಗೆ ಹಲವು ಅನುಮಾನ, ಪ್ರಶಾಂತ್ ನೀಲ್ ಕ್ಷಮೆ ಕೇಳಿದ್ದೇಕೆ?
ರಾಜಮೌಳಿ-ನೀಲ್
ಮಂಜುನಾಥ ಸಿ.
|

Updated on: Dec 17, 2023 | 8:06 PM

Share

ಪ್ರಭಾಸ್ (Prabhas) ನಟನೆಯ ‘ಸಲಾರ್’ (Salaar) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ದೇಶದಾದ್ಯಂತ ಬಲು ಜೋರಾಗಿ ನಡೆಯುತ್ತಿದೆ. ‘ಸಲಾರ್’ ಸಿನಿಮಾದ ಮೊದಲ ಟಿಕೆಟ್ ಅನ್ನು ಭಾರತದ ಅತ್ಯುತ್ತಮ ಸಿನಿಮಾ ನಿರ್ದೇಶಕ ಎನ್ನಿಸಿಕೊಂಡಿರುವ ಎಸ್​ಎಸ್ ರಾಜಮೌಳಿಗೆ ನೀಡಲಾಗಿದೆ. ‘ಸಲಾರ್’ ಸಿನಿಮಾದ ಪ್ರಚಾರಕ್ಕೆ ರಾಜಮೌಳಿಯನ್ನು ಚಿತ್ರತಂಡ ಬಳಸಿಕೊಳ್ಳುತ್ತಿದೆ.

ರಾಜಮೌಳಿ, ಪ್ರಭಾಸ್​ರ ಆತ್ಮೀಯ ಗೆಳೆಯನೂ ಆಗಿರುವ ಕಾರಣ, ‘ಸಲಾರ್’ ಪ್ರಚಾರವನ್ನು ರಾಜಮೌಳಿ ಮಾಡಿದ್ದಾರೆ. ‘ಸಲಾರ್’ ಚಿತ್ರತಂಡದ ವಿಶೇಷ ಸಂದರ್ಶನವನ್ನು ಎಸ್​ಎಸ್ ರಾಜಮೌಳಿ ಮಾಡಿದ್ದಾರೆ. ಆ ಸಂದರ್ಶನದಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರುಗಳು ಭಾಗಿಯಾಗಿದ್ದಾರೆ. ಸಂದರ್ಶನದ ಟೀಸರ್ ಇದೀಗ ಹೊರಬಿದ್ದಿದ್ದು ಪೂರ್ಣ ಸಂದರ್ಶನ ಡಿಸೆಂಬರ್ 19ಕ್ಕೆ ಬಿಡುಗಡೆ ಆಗಲಿದೆ.

ಇದನ್ನೂ ಓದಿ:‘ಸಲಾರ್’ ಬುಕಿಂಗ್​ಗೆ ಭರ್ಜರಿ ರೆಸ್ಪಾನ್ಸ್​; ಮುಂಜಾನೆ 5 ಗಂಟೆ ಶೋಗಳು ಸೋಲ್ಡ್​ಔಟ್

ಸಂದರ್ಶನದಲ್ಲಿ, ರಾಜಮೌಳಿ, ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಮುಖ್ಯವಾದುದೆಂದರೆ, ‘ಸಲಾರ್’ ಸಿನಿಮಾಕ್ಕೂ ‘ಕೆಜಿಎಫ್​’ಗೂ ಸಂಬಂಧ ಇದೆಯೇ ಎಂಬ ಪ್ರಶ್ನೆ ಕೇಳಿದ್ದಾರೆ. ಖಾನ್​ಸಾರ್ ಸಿಟಿ, ಡೈನೋಸರ್, ‘ಸಲಾರ್’ ಯಾರು? ಇನ್ನೂ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ ರಾಜಮೌಳಿ. ಸಂದರ್ಶನದ ಮಧ್ಯದಲ್ಲಿ, ‘ನೀವು ನನಗೆ ನಿರಾಸೆ ಉಂಟು ಮಾಡಿದಿರಿ’ ಎಂದು ರಾಜಮೌಳಿ, ನೀಲ್​ಗೆ ಹೇಳಿದ್ದಾರೆ. ಅದಕ್ಕೆ ನೀಲ್ ಕ್ಷಮೆ ಸಹ ಕೇಳಿದ್ದಾರೆ.

ಪ್ರಶಾಂತ್ ನೀಲ್ ಸಿನಿಮಾ ನಿರ್ದೇಶನ ಮಾಡುವ ಶೈಲಿಯ ಬಗ್ಗೆ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಕೆಲವು ದೂರುಗಳನ್ನು ಸಹ ರಾಜಮೌಳಿಯ ಬಳಿ ಹೇಳಿಕೊಂಡಿದ್ದಾರೆ. ಸಂದರ್ಶನದಲ್ಲಿ ನಾಲ್ಕೂ ಜನ ನಕ್ಕು, ನಲಿದು ಎಂಜಾಯ್ ಮಾಡಿದ್ದಾರೆ. ಸಂದರ್ಶನದ ಟೀಸರ್ ಪ್ರಸ್ತುತ ಹೊಂಬಾಳೆಯ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಪೂರ್ಣ ಸಂದರ್ಶನ ಡಿಸೆಂಬರ್ 19ರಂದು ಹೊಂಬಾಳೆ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!