AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್

‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್
ಸಲಾರ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jan 19, 2024 | 1:13 PM

Share

ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈಗ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಮೊದಲೇ ಈ ಚಿತ್ರ ನೆಟ್​ಫ್ಲಿಕ್ಸ್ ಮೂಲಕ ವೀಕ್ಷಣೆಗೆ ಲಭ್ಯ ಆಗಲಿದೆ. ಹೌದು, ಡಿಸೆಂಬರ್ 20ರಂದು ‘ಸಲಾರ್’ ಸಿನಿಮಾ ನೆಟ್​ಫ್ಲಿಕ್ಸ್ ಮೂಲಕ ಪ್ರಸಾರ ಆರಂಭಿಸಲಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಸಿನಿಮಾ ನೋಡಲು ಅವಕಾಶ ಇದೆ. ಇದು ಅಭಿಮಾನಿಗಳಿಗೆ ಸರ್​ಪ್ರೈಸ್ ಎನಿಸಿದೆ.

ಈ ಬಗ್ಗೆ ನೆಟ್​ಫ್ಲಿಕ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ. ಈ ಮೊದಲು ‘ಸಲಾರ್’ ಸಿನಿಮಾ ಜನವರಿ 26ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಎಂದು ಸುದ್ದಿ ಆಗಿತ್ತು.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮಾಸ್ ಅವತಾರ ತಾಳಿದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರು ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶ್ರುತಿ ಹಾಸನ್ ನಾಯಕಿ ಪಾತ್ರ ಮಾಡಿದ್ದಾರೆ. ‘ಗೇಮ್ ಆಫ್ ಥ್ರೋನ್ಸ್ ರೀತಿಯಲ್ಲಿ ನನಗೆ ಈ ಸಿನಿಮಾ ಕಾಣಿಸಿತು’  ಎಂದು ಪೃಥ್ವಿರಾಜ್ ಸುಕುಮಾರನ್ ಹೇಳಿದ್ದರು. ಸಿನಿಮಾ ನೋಡಿದ ಅನೇಕರಿಗೆ ಇದು ಹೌದು ಎನ್ನಿಸಿದೆ.

ಇದನ್ನೂ ಓದಿ: ‘ಸಲಾರ್’ ಯಶಸ್ಸಿಗೆ ಭರ್ಜರಿ ಪಾರ್ಟಿ, ಇಲ್ಲಿವೆ ಕೆಲವು ಚಿತ್ರಗಳು

‘ಸಲಾರ್’ ಸಿನಿಮಾದ ಕಥೆಗೂ ‘ಉಗ್ರಂ’ ಚಿತ್ರಕ್ಕೂ ಲಿಂಕ್ ಕಲ್ಪಿಸಲಾಗಿದೆ. ಇದು ಚಿತ್ರಕ್ಕೆ ಹಿನ್ನಡೆ ಉಂಟು ಮಾಡಿತು. ಮೇಕಿಂಗ್ ವಿಚಾರದಲ್ಲಿ ‘ಸಲಾರ್’ ಸಿನಿಮಾ ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದೆ. ಇದರಿಂದಲೂ ಚಿತ್ರಕ್ಕೆ ಹಿನ್ನಡೆ ಆಯಿತು. ಈಗ ಚಿತ್ರವನ್ನು ಜನರು ಒಟಿಟಿಯಲ್ಲಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ‘ಸಲಾರ್’ ಚಿತ್ರಕ್ಕೆ ಎರಡನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು