AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್

‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್
ಸಲಾರ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jan 19, 2024 | 1:13 PM

Share

ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈಗ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಮೊದಲೇ ಈ ಚಿತ್ರ ನೆಟ್​ಫ್ಲಿಕ್ಸ್ ಮೂಲಕ ವೀಕ್ಷಣೆಗೆ ಲಭ್ಯ ಆಗಲಿದೆ. ಹೌದು, ಡಿಸೆಂಬರ್ 20ರಂದು ‘ಸಲಾರ್’ ಸಿನಿಮಾ ನೆಟ್​ಫ್ಲಿಕ್ಸ್ ಮೂಲಕ ಪ್ರಸಾರ ಆರಂಭಿಸಲಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಸಿನಿಮಾ ನೋಡಲು ಅವಕಾಶ ಇದೆ. ಇದು ಅಭಿಮಾನಿಗಳಿಗೆ ಸರ್​ಪ್ರೈಸ್ ಎನಿಸಿದೆ.

ಈ ಬಗ್ಗೆ ನೆಟ್​ಫ್ಲಿಕ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ. ಈ ಮೊದಲು ‘ಸಲಾರ್’ ಸಿನಿಮಾ ಜನವರಿ 26ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಎಂದು ಸುದ್ದಿ ಆಗಿತ್ತು.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮಾಸ್ ಅವತಾರ ತಾಳಿದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರು ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶ್ರುತಿ ಹಾಸನ್ ನಾಯಕಿ ಪಾತ್ರ ಮಾಡಿದ್ದಾರೆ. ‘ಗೇಮ್ ಆಫ್ ಥ್ರೋನ್ಸ್ ರೀತಿಯಲ್ಲಿ ನನಗೆ ಈ ಸಿನಿಮಾ ಕಾಣಿಸಿತು’  ಎಂದು ಪೃಥ್ವಿರಾಜ್ ಸುಕುಮಾರನ್ ಹೇಳಿದ್ದರು. ಸಿನಿಮಾ ನೋಡಿದ ಅನೇಕರಿಗೆ ಇದು ಹೌದು ಎನ್ನಿಸಿದೆ.

ಇದನ್ನೂ ಓದಿ: ‘ಸಲಾರ್’ ಯಶಸ್ಸಿಗೆ ಭರ್ಜರಿ ಪಾರ್ಟಿ, ಇಲ್ಲಿವೆ ಕೆಲವು ಚಿತ್ರಗಳು

‘ಸಲಾರ್’ ಸಿನಿಮಾದ ಕಥೆಗೂ ‘ಉಗ್ರಂ’ ಚಿತ್ರಕ್ಕೂ ಲಿಂಕ್ ಕಲ್ಪಿಸಲಾಗಿದೆ. ಇದು ಚಿತ್ರಕ್ಕೆ ಹಿನ್ನಡೆ ಉಂಟು ಮಾಡಿತು. ಮೇಕಿಂಗ್ ವಿಚಾರದಲ್ಲಿ ‘ಸಲಾರ್’ ಸಿನಿಮಾ ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದೆ. ಇದರಿಂದಲೂ ಚಿತ್ರಕ್ಕೆ ಹಿನ್ನಡೆ ಆಯಿತು. ಈಗ ಚಿತ್ರವನ್ನು ಜನರು ಒಟಿಟಿಯಲ್ಲಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ‘ಸಲಾರ್’ ಚಿತ್ರಕ್ಕೆ ಎರಡನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ