AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್

‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್
ಸಲಾರ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jan 19, 2024 | 1:13 PM

Share

ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈಗ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಮೊದಲೇ ಈ ಚಿತ್ರ ನೆಟ್​ಫ್ಲಿಕ್ಸ್ ಮೂಲಕ ವೀಕ್ಷಣೆಗೆ ಲಭ್ಯ ಆಗಲಿದೆ. ಹೌದು, ಡಿಸೆಂಬರ್ 20ರಂದು ‘ಸಲಾರ್’ ಸಿನಿಮಾ ನೆಟ್​ಫ್ಲಿಕ್ಸ್ ಮೂಲಕ ಪ್ರಸಾರ ಆರಂಭಿಸಲಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಸಿನಿಮಾ ನೋಡಲು ಅವಕಾಶ ಇದೆ. ಇದು ಅಭಿಮಾನಿಗಳಿಗೆ ಸರ್​ಪ್ರೈಸ್ ಎನಿಸಿದೆ.

ಈ ಬಗ್ಗೆ ನೆಟ್​ಫ್ಲಿಕ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ. ಈ ಮೊದಲು ‘ಸಲಾರ್’ ಸಿನಿಮಾ ಜನವರಿ 26ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಎಂದು ಸುದ್ದಿ ಆಗಿತ್ತು.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮಾಸ್ ಅವತಾರ ತಾಳಿದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರು ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶ್ರುತಿ ಹಾಸನ್ ನಾಯಕಿ ಪಾತ್ರ ಮಾಡಿದ್ದಾರೆ. ‘ಗೇಮ್ ಆಫ್ ಥ್ರೋನ್ಸ್ ರೀತಿಯಲ್ಲಿ ನನಗೆ ಈ ಸಿನಿಮಾ ಕಾಣಿಸಿತು’  ಎಂದು ಪೃಥ್ವಿರಾಜ್ ಸುಕುಮಾರನ್ ಹೇಳಿದ್ದರು. ಸಿನಿಮಾ ನೋಡಿದ ಅನೇಕರಿಗೆ ಇದು ಹೌದು ಎನ್ನಿಸಿದೆ.

ಇದನ್ನೂ ಓದಿ: ‘ಸಲಾರ್’ ಯಶಸ್ಸಿಗೆ ಭರ್ಜರಿ ಪಾರ್ಟಿ, ಇಲ್ಲಿವೆ ಕೆಲವು ಚಿತ್ರಗಳು

‘ಸಲಾರ್’ ಸಿನಿಮಾದ ಕಥೆಗೂ ‘ಉಗ್ರಂ’ ಚಿತ್ರಕ್ಕೂ ಲಿಂಕ್ ಕಲ್ಪಿಸಲಾಗಿದೆ. ಇದು ಚಿತ್ರಕ್ಕೆ ಹಿನ್ನಡೆ ಉಂಟು ಮಾಡಿತು. ಮೇಕಿಂಗ್ ವಿಚಾರದಲ್ಲಿ ‘ಸಲಾರ್’ ಸಿನಿಮಾ ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದೆ. ಇದರಿಂದಲೂ ಚಿತ್ರಕ್ಕೆ ಹಿನ್ನಡೆ ಆಯಿತು. ಈಗ ಚಿತ್ರವನ್ನು ಜನರು ಒಟಿಟಿಯಲ್ಲಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ‘ಸಲಾರ್’ ಚಿತ್ರಕ್ಕೆ ಎರಡನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ