AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

‘ಸಲಾರ್’ ಸಿನಿಮಾಗೆ ವಿಲನ್​ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್​ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್
TV9 Web
| Edited By: |

Updated on: Mar 09, 2022 | 3:38 PM

Share

‘ಬಾಹುಬಲಿ 2’ (Bahubali 2) ತೆರೆಗೆ ಬಂದ ನಂತರದಲ್ಲಿ ಪ್ರಭಾಸ್ (Prabhas) ನಟನೆಯ ಒಂದು ಸಿನಿಮಾ ಮಾತ್ರ ರಿಲೀಸ್​ ಆಗಿದೆ. ಅದು ‘ಸಾಹೋ’ ಚಿತ್ರ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮಕಾಡೆ ಮಲಗಿತು. ಮುಂದಿನ ಸಿನಿಮಾ ‘ರಾಧೆ ಶ್ಯಾಮ್​’ನಲ್ಲಿ (Radhe Shyam) ಆ್ಯಕ್ಷನ್​ ಬದಿಗಿಟ್ಟು ಲವರ್ ಬಾಯ್​ ಆಗಿ ಕಾಣಿಸಿಕೊಳ್ಳುವ ಸಾಹಸಕ್ಕೆ ಪ್ರಭಾಸ್​ ಮುಂದಾಗಿದ್ದಾರೆ. ಈ ಸಿನಿಮಾ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಇದರ ಜತೆಜತೆಗೆ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಪ್ರಭಾಸ್​ ನಟನೆಯ ‘ಸಲಾರ್’ ಬಗ್ಗೆ ಈಗ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಚಿತ್ರಕ್ಕೆ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ವಿಲನ್​ ಆಗಲಿದ್ದಾರೆ ಎಂದು ವರದಿ ಆಗಿದೆ. ಅಚ್ಚರಿಯ ವಿಚಾರ ಎಂದರೆ, ಪ್ರಭಾಸ್​ ಅವರೇ ಈ ವಿಚಾರ ಲೀಕ್ ಮಾಡಿದ್ದಾರೆ.

‘ಸಲಾರ್’ ಸಿನಿಮಾಗೆ ವಿಲನ್​ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್​ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಪೃಥ್ವಿರಾಜ್​ ಅವರು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದು, ಈ ವಿಚಾರ ಸಿನಿ ಪ್ರಿಯರ ಕುತೂಹಲ ಹೆಚ್ಚಿಸಿದೆ.

ಪ್ರಶಾಂತ್​ ನೀಲ್​ ಈಗಾಗಲೇ ತಮ್ಮ ಕಸುಬುದಾರಿಕೆ ತೋರಿಸಿದ್ದಾರೆ. ಅವರು ಪ್ರತಿ ಪಾತ್ರ ಆಯ್ಕೆ ವೇಳೆ ಸಾಕಷ್ಟು ಎಚ್ಚರಿಕೆ ವಹಿಸುತ್ತಾರೆ. ‘ಸಲಾರ್​’ ಸಿನಿಮಾ ವಿಲನ್ ಆಯ್ಕೆ ಬಗ್ಗೆ ಹೆಚ್ಚು ಗಮನ ವಹಿಸಿದ್ದಾರೆ. ಸಾಕಷ್ಟು ಲೆಕ್ಕಾಚಾರ ಹಾಕಿ ಪೃಥ್ವಿರಾಜ್​ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಪೃಥ್ವಿರಾಜ್​ ಈಗಾಗಲೇ ದೊಡ್ಡ ಮಟ್ಟದ ಛಾಪು ಮೂಡಿಸಿದ್ದಾರೆ. ಅವರು ಯಾವುದೇ ಪಾತ್ರ ಕೊಟ್ಟರೂ ಅದನ್ನು ಕೇವಲ ನಟಿಸದೇ ಜೀವಿಸಿ ತೋರಿಸುತ್ತಾರೆ. ಈ ಮೊದಲು ಕೂಡ ಅವರು ವಿಲನ್ ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪೃಥ್ವಿರಾಜ್​ ಅವರು​ ‘ಸಲಾರ್​’ ಸಿನಿಮಾದಲ್ಲಿ ಮುಖ್ಯವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಪ್ರಭಾಸ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ಈ ಬಗ್ಗೆ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ ಇದೆ.

‘ರಾಧೆ ಶ್ಯಾಮ್​’ ಪ್ರಚಾರ ಕಾರ್ಯದಲ್ಲಿ ಪ್ರಭಾಸ್ ಬ್ಯುಸಿ ಆಗಿದ್ದಾರೆ. ಪ್ರಭಾಸ್​ಗೆ ಜತೆಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮಾರ್ಚ್​ 11ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!