AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

‘ಸಲಾರ್’ ಸಿನಿಮಾಗೆ ವಿಲನ್​ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್​ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್
TV9 Web
| Edited By: |

Updated on: Mar 09, 2022 | 3:38 PM

Share

‘ಬಾಹುಬಲಿ 2’ (Bahubali 2) ತೆರೆಗೆ ಬಂದ ನಂತರದಲ್ಲಿ ಪ್ರಭಾಸ್ (Prabhas) ನಟನೆಯ ಒಂದು ಸಿನಿಮಾ ಮಾತ್ರ ರಿಲೀಸ್​ ಆಗಿದೆ. ಅದು ‘ಸಾಹೋ’ ಚಿತ್ರ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮಕಾಡೆ ಮಲಗಿತು. ಮುಂದಿನ ಸಿನಿಮಾ ‘ರಾಧೆ ಶ್ಯಾಮ್​’ನಲ್ಲಿ (Radhe Shyam) ಆ್ಯಕ್ಷನ್​ ಬದಿಗಿಟ್ಟು ಲವರ್ ಬಾಯ್​ ಆಗಿ ಕಾಣಿಸಿಕೊಳ್ಳುವ ಸಾಹಸಕ್ಕೆ ಪ್ರಭಾಸ್​ ಮುಂದಾಗಿದ್ದಾರೆ. ಈ ಸಿನಿಮಾ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಇದರ ಜತೆಜತೆಗೆ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಪ್ರಭಾಸ್​ ನಟನೆಯ ‘ಸಲಾರ್’ ಬಗ್ಗೆ ಈಗ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಚಿತ್ರಕ್ಕೆ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ವಿಲನ್​ ಆಗಲಿದ್ದಾರೆ ಎಂದು ವರದಿ ಆಗಿದೆ. ಅಚ್ಚರಿಯ ವಿಚಾರ ಎಂದರೆ, ಪ್ರಭಾಸ್​ ಅವರೇ ಈ ವಿಚಾರ ಲೀಕ್ ಮಾಡಿದ್ದಾರೆ.

‘ಸಲಾರ್’ ಸಿನಿಮಾಗೆ ವಿಲನ್​ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್​ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಪೃಥ್ವಿರಾಜ್​ ಅವರು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದು, ಈ ವಿಚಾರ ಸಿನಿ ಪ್ರಿಯರ ಕುತೂಹಲ ಹೆಚ್ಚಿಸಿದೆ.

ಪ್ರಶಾಂತ್​ ನೀಲ್​ ಈಗಾಗಲೇ ತಮ್ಮ ಕಸುಬುದಾರಿಕೆ ತೋರಿಸಿದ್ದಾರೆ. ಅವರು ಪ್ರತಿ ಪಾತ್ರ ಆಯ್ಕೆ ವೇಳೆ ಸಾಕಷ್ಟು ಎಚ್ಚರಿಕೆ ವಹಿಸುತ್ತಾರೆ. ‘ಸಲಾರ್​’ ಸಿನಿಮಾ ವಿಲನ್ ಆಯ್ಕೆ ಬಗ್ಗೆ ಹೆಚ್ಚು ಗಮನ ವಹಿಸಿದ್ದಾರೆ. ಸಾಕಷ್ಟು ಲೆಕ್ಕಾಚಾರ ಹಾಕಿ ಪೃಥ್ವಿರಾಜ್​ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಪೃಥ್ವಿರಾಜ್​ ಈಗಾಗಲೇ ದೊಡ್ಡ ಮಟ್ಟದ ಛಾಪು ಮೂಡಿಸಿದ್ದಾರೆ. ಅವರು ಯಾವುದೇ ಪಾತ್ರ ಕೊಟ್ಟರೂ ಅದನ್ನು ಕೇವಲ ನಟಿಸದೇ ಜೀವಿಸಿ ತೋರಿಸುತ್ತಾರೆ. ಈ ಮೊದಲು ಕೂಡ ಅವರು ವಿಲನ್ ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪೃಥ್ವಿರಾಜ್​ ಅವರು​ ‘ಸಲಾರ್​’ ಸಿನಿಮಾದಲ್ಲಿ ಮುಖ್ಯವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಪ್ರಭಾಸ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ಈ ಬಗ್ಗೆ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ ಇದೆ.

‘ರಾಧೆ ಶ್ಯಾಮ್​’ ಪ್ರಚಾರ ಕಾರ್ಯದಲ್ಲಿ ಪ್ರಭಾಸ್ ಬ್ಯುಸಿ ಆಗಿದ್ದಾರೆ. ಪ್ರಭಾಸ್​ಗೆ ಜತೆಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮಾರ್ಚ್​ 11ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ