AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

‘ಸಲಾರ್’ ಸಿನಿಮಾಗೆ ವಿಲನ್​ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್​ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್
TV9 Web
| Edited By: |

Updated on: Mar 09, 2022 | 3:38 PM

Share

‘ಬಾಹುಬಲಿ 2’ (Bahubali 2) ತೆರೆಗೆ ಬಂದ ನಂತರದಲ್ಲಿ ಪ್ರಭಾಸ್ (Prabhas) ನಟನೆಯ ಒಂದು ಸಿನಿಮಾ ಮಾತ್ರ ರಿಲೀಸ್​ ಆಗಿದೆ. ಅದು ‘ಸಾಹೋ’ ಚಿತ್ರ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮಕಾಡೆ ಮಲಗಿತು. ಮುಂದಿನ ಸಿನಿಮಾ ‘ರಾಧೆ ಶ್ಯಾಮ್​’ನಲ್ಲಿ (Radhe Shyam) ಆ್ಯಕ್ಷನ್​ ಬದಿಗಿಟ್ಟು ಲವರ್ ಬಾಯ್​ ಆಗಿ ಕಾಣಿಸಿಕೊಳ್ಳುವ ಸಾಹಸಕ್ಕೆ ಪ್ರಭಾಸ್​ ಮುಂದಾಗಿದ್ದಾರೆ. ಈ ಸಿನಿಮಾ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಇದರ ಜತೆಜತೆಗೆ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಪ್ರಭಾಸ್​ ನಟನೆಯ ‘ಸಲಾರ್’ ಬಗ್ಗೆ ಈಗ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಚಿತ್ರಕ್ಕೆ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ವಿಲನ್​ ಆಗಲಿದ್ದಾರೆ ಎಂದು ವರದಿ ಆಗಿದೆ. ಅಚ್ಚರಿಯ ವಿಚಾರ ಎಂದರೆ, ಪ್ರಭಾಸ್​ ಅವರೇ ಈ ವಿಚಾರ ಲೀಕ್ ಮಾಡಿದ್ದಾರೆ.

‘ಸಲಾರ್’ ಸಿನಿಮಾಗೆ ವಿಲನ್​ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್​ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಪೃಥ್ವಿರಾಜ್​ ಅವರು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದು, ಈ ವಿಚಾರ ಸಿನಿ ಪ್ರಿಯರ ಕುತೂಹಲ ಹೆಚ್ಚಿಸಿದೆ.

ಪ್ರಶಾಂತ್​ ನೀಲ್​ ಈಗಾಗಲೇ ತಮ್ಮ ಕಸುಬುದಾರಿಕೆ ತೋರಿಸಿದ್ದಾರೆ. ಅವರು ಪ್ರತಿ ಪಾತ್ರ ಆಯ್ಕೆ ವೇಳೆ ಸಾಕಷ್ಟು ಎಚ್ಚರಿಕೆ ವಹಿಸುತ್ತಾರೆ. ‘ಸಲಾರ್​’ ಸಿನಿಮಾ ವಿಲನ್ ಆಯ್ಕೆ ಬಗ್ಗೆ ಹೆಚ್ಚು ಗಮನ ವಹಿಸಿದ್ದಾರೆ. ಸಾಕಷ್ಟು ಲೆಕ್ಕಾಚಾರ ಹಾಕಿ ಪೃಥ್ವಿರಾಜ್​ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಪೃಥ್ವಿರಾಜ್​ ಈಗಾಗಲೇ ದೊಡ್ಡ ಮಟ್ಟದ ಛಾಪು ಮೂಡಿಸಿದ್ದಾರೆ. ಅವರು ಯಾವುದೇ ಪಾತ್ರ ಕೊಟ್ಟರೂ ಅದನ್ನು ಕೇವಲ ನಟಿಸದೇ ಜೀವಿಸಿ ತೋರಿಸುತ್ತಾರೆ. ಈ ಮೊದಲು ಕೂಡ ಅವರು ವಿಲನ್ ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪೃಥ್ವಿರಾಜ್​ ಅವರು​ ‘ಸಲಾರ್​’ ಸಿನಿಮಾದಲ್ಲಿ ಮುಖ್ಯವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಪ್ರಭಾಸ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ಈ ಬಗ್ಗೆ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ ಇದೆ.

‘ರಾಧೆ ಶ್ಯಾಮ್​’ ಪ್ರಚಾರ ಕಾರ್ಯದಲ್ಲಿ ಪ್ರಭಾಸ್ ಬ್ಯುಸಿ ಆಗಿದ್ದಾರೆ. ಪ್ರಭಾಸ್​ಗೆ ಜತೆಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮಾರ್ಚ್​ 11ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್