AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್ ಹೊಸ ಸಿನಿಮಾದಲ್ಲಿ ನಟಿಸ್ತಾರಾ ಯಶ್?​; ಹರಿದಾಡುತ್ತಿದೆ ಹೊಸ ಸುದ್ದಿ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದಿಂದ ಈವರೆಗೆ ರಿಲೀಸ್ ಆಗಿದ್ದು ಕೇವಲ ಪೋಸ್ಟರ್​ಗಳು ಮಾತ್ರ. ಇವುಗಳೇ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಮಾಡಿವೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಕೇಳಿ ಬಂದಿದೆ.

ಪ್ರಶಾಂತ್ ನೀಲ್ ಹೊಸ ಸಿನಿಮಾದಲ್ಲಿ ನಟಿಸ್ತಾರಾ ಯಶ್?​; ಹರಿದಾಡುತ್ತಿದೆ ಹೊಸ ಸುದ್ದಿ
ಯಶ್-ಪ್ರಶಾಂತ್ ನೀಲ್
TV9 Web
| Edited By: |

Updated on:Jul 01, 2022 | 10:14 PM

Share

‘ಕೆಜಿಎಫ್ 2’ ಸಿನಿಮಾ (KGF Chapter 2) ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಈ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಹಾಗೂ ಯಶ್ (Yash) ಖ್ಯಾತಿ ಹೆಚ್ಚಿದೆ. ‘ಕೆಜಿಎಫ್ 3’ ತೆರೆಗೆ ಬರುವ ಬಗ್ಗೆ ಈಗಾಗಲೇ ಸೂಚನೆ ಸಿಕ್ಕಿದೆ. ಆದರೆ, ಆ ಸಿನಿಮಾ ಸದ್ಯಕ್ಕಂತೂ ಸೆಟ್ಟೇರುವುದಿಲ್ಲ. ಸದ್ಯ ಪ್ರಶಾಂತ್ ನೀಲ್ ಅವರು ‘ಸಲಾರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಯಶ್ ಜತೆಗೆ ಪ್ರಶಾಂತ್ ನೀಲ್ ಮತ್ತೆ ಕೈ ಜೋಡಿಸುತ್ತಿರುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದಿಂದ ಈವರೆಗೆ ರಿಲೀಸ್ ಆಗಿದ್ದು ಕೇವಲ ಪೋಸ್ಟರ್​ಗಳು ಮಾತ್ರ. ಇವುಗಳೇ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಮಾಡಿವೆ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಕೇಳಿ ಬಂದಿದೆ. ‘ಸಲಾರ್​’ ಚಿತ್ರದಲ್ಲಿ ಯಶ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಯಶ್ ಹಾಗೂ ಪ್ರಶಾಂತ್ ನೀಲ್ ‘ಕೆಜಿಎಫ್ 3’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಆದರೆ, ನಿರ್ಮಾಣ ಸಂಸ್ಥೆಯವರೇ ಹೇಳಿದಂತೆ ಈ ಸಿನಿಮಾದ ಕೆಲಸಗಳನ್ನು ಸದ್ಯಕ್ಕಂತೂ ಆರಂಭ ಮಾಡುವ ಆಲೋಚನೆ ಇಲ್ಲ. ಯಶ್​ಗೂ ಈ ವಿಚಾರ ತಿಳಿದಿದೆ. ಹೀಗಾಗಿ, ಅವರು ‘ಸಲಾರ್’ ಚಿತ್ರದ ಕೆಲಸವನ್ನು ಮೊದಲು ಮುಗಿಸುವಂತೆ ಪ್ರಶಾಂತ್​ ನೀಲ್​ಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ‘ಸಲಾರ್’ ಚಿತ್ರದಲ್ಲಿ ಯಶ್​ಗೆ ಅತಿಥಿ ಪಾತ್ರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಅಪಘಾತ: ‘ಕೆಜಿಎಫ್ 2’ ನಟನ ಬೆಂಜ್ ಕಾರು ಸಂಪೂರ್ಣ ಜಖಂ; ಕೂದಲೆಳೆ ಅಂತರದಲ್ಲಿ ನಟ ಪಾರು
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ
Image
‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

‘ಸಲಾರ್’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳು ಇವೆ. ‘ಕೆಜಿಎಫ್ 2’ ಬಳಿಕ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಸಿನಿಮಾ ಇದಾಗಿದೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪೃಥ್ವಿರಾಜ್​ ಅವರು ಇತ್ತೀಚೆಗೆ ಅಧಿಕೃತ ಮಾಡಿದ್ದರು. ಕನ್ನಡದ ಹೊಂಬಾಳೆ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್

‘ಸಲಾರ್’ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​; ಯಾವ ಹಂತದಲ್ಲಿದೆ ಪ್ರಶಾಂತ್ ನೀಲ್-ಪ್ರಭಾಸ್ ಸಿನಿಮಾ?

Published On - 10:03 pm, Fri, 1 July 22

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ