AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ ಪಾರ್ಟ್​ 2’ಗೆ ಆಗಿಲ್ಲ ಶೂಟಿಂಗ್; ಈ ಸಿನಿಮಾ ಬಗೆಗಿನ ಸಾಧ್ಯಾಸಾಧ್ಯತೆಗಳೇನು?

ದೊಡ್ಡ ಟ್ವಿಸ್ಟ್​ನೊಂದಿಗೆ ಮೊದಲ ಪಾರ್ಟ್ ಅಂತ್ಯಗೊಳಿಸಿದ್ದಾರೆ ಪ್ರಶಾಂತ್ ನೀಲ್. ಹೀಗಾಗಿ, ಎರಡನೇ ಪಾರ್ಟ್ ಬಗ್ಗೆ ಕುತೂಹಲ ಮೂಡಿದೆ. ಆದರೆ, ಸದ್ಯಕ್ಕಂತೂ ಈ ಸಿನಿಮಾದ ಕೆಲಸಗಳು ಆರಂಭ ಆಗುವ ಸಾಧ್ಯತೆ ಕಡಿಮೆ.

‘ಸಲಾರ್ ಪಾರ್ಟ್​ 2’ಗೆ ಆಗಿಲ್ಲ ಶೂಟಿಂಗ್; ಈ ಸಿನಿಮಾ ಬಗೆಗಿನ ಸಾಧ್ಯಾಸಾಧ್ಯತೆಗಳೇನು?
ಸಲಾರ್
ರಾಜೇಶ್ ದುಗ್ಗುಮನೆ
|

Updated on:Dec 23, 2023 | 11:54 AM

Share

ಪ್ರಶಾಂತ್ ನೀಲ್ (Prashanth Neel) ಅವರ ಶ್ರಮಕ್ಕೆ ಉತ್ತಮ ಪ್ರತಿಫಲ ಸಿಗುತ್ತಿದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ‘ಸಲಾರ್’ ಸಿನಿಮಾ ಕೂಡ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಾಕ್ಸ್ ಆಫೀಸ್ ಗಳಿಕೆ ಮೊದಲ ದಿನ 175 ಕೋಟಿ ರೂಪಾಯಿ ಆಗಿದೆ. ಈ ಚಿತ್ರದಿಂದ ಪ್ರಶಾಂತ್ ನೀಲ್ ಖ್ಯಾತಿ ಹೆಚ್ಚಿದೆ. ಅವರ ಕಾಲ್​ಶೀಟ್ ಪಡೆಯಲು ಬಾಲಿವುಡ್ ನಿರ್ಮಾಪಕರೂ ಪ್ರಯತ್ನಿಸುತ್ತಿದ್ದಾರೆ. ಸದ್ಯ ‘ಸಲಾರ್ ಪಾರ್ಟ್ 2’ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ಇನ್ನೂ ಶೂಟಿಂಗ್ ಆಗಿಲ್ಲ.

‘ಕೆಜಿಎಫ್’ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಿತ್ತು. ಮೊದಲ ಪಾರ್ಟ್ ರಿಲೀಸ್ ಆಗಿ ಮೂರುವರೆ ವರ್ಷಗಳ ಬಳಿಕ ಎರಡನೇ ಪಾರ್ಟ್ ರಿಲೀಸ್ ಆಯಿತು. ಈಗ ‘ಸಲಾರ್’ ರಿಲೀಸ್ ಆಗಿ ಹಿಟ್ ಆಗಿದೆ. ಒಂದು ದೊಡ್ಡ ಟ್ವಿಸ್ಟ್​ನೊಂದಿಗೆ ಮೊದಲ ಪಾರ್ಟ್ ಅಂತ್ಯಗೊಳಿಸಿದ್ದಾರೆ ಪ್ರಶಾಂತ್ ನೀಲ್. ಹೀಗಾಗಿ, ಎರಡನೇ ಪಾರ್ಟ್ ಬಗ್ಗೆ ಕುತೂಹಲ ಮೂಡಿದೆ. ಆದರೆ, ಸದ್ಯಕ್ಕಂತೂ ಈ ಸಿನಿಮಾದ ಕೆಲಸಗಳು ಆರಂಭ ಆಗುವ ಸಾಧ್ಯತೆ ಕಡಿಮೆ.

ಜೂನಿಯರ್ ಎನ್​ಟಿಆರ್ ಜೊತೆಗಿನ ಸಿನಿಮಾ ಕೆಲಸಗಳಲ್ಲಿ ಪ್ರಶಾಂತ್ ನೀಲ್ ಬ್ಯುಸಿ ಆಗಲಿದ್ದಾರೆ. ಸದ್ಯ ಜೂನಿಯರ್​ ಎನ್​ಟಿಆರ್ ಅವರು ‘ದೇವರ’ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ. ಇದಾದ ಬಳಿಕ ಅವರು ಪ್ರಶಾಂತ್ ನೀಲ್ ಸಿನಿಮಾ ಸೆಟ್ ಸೇರಲಿದ್ದಾರೆ. ಆ ಬಳಿಕ ಪ್ರಶಾಂತ್ ನೀಲ್ ಅವರು ಯಶ್ ಜೊತೆ ಮತ್ತೊಂದು ಸಿನಿಮಾ ಮಾಡಬೇಕಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಸಲಾರ್’ ಪೈರಸಿ ತಡೆಯಲು ‘ಹೊಂಬಾಳೆ ಫಿಲ್ಮ್ಸ್’ ತಂತ್ರ

ಪ್ರಭಾಸ್ ಅವರು ಸದ್ಯ ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸದ್ಯಕ್ಕಂತೂ ‘ಸಲಾರ್ 2’ ಸಿನಿಮಾ ಕೆಲಸಗಳು ಆರಂಭ ಆಗುವುದಿಲ್ಲ. ‘ಸಲಾರ್’ ಹಿಟ್ ಆಗಿರುವುದರಿಂದ ಇಂದಲ್ಲ ನಾಳೆ ‘ಸಲಾರ್ 2’ ಸೆಟ್ಟೇರಲಿದೆ ಅನ್ನೋದು ಅಭಿಮಾನಿಗಳ ನಂಬಿಕೆ. ಕೆಲವು ವರದಿಗಳ ಪ್ರಕಾರ ‘ಸಲಾರ್ 2’ ಶೂಟ್ ಪೂರ್ಣಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಎರಡನೇ ಭಾಗಕ್ಕೆ ‘ಸಲಾರ್: ಶೌರ್ಯಂಗ ಪರ್ವಂ’ ಎಂದು ಶೀರ್ಷಿಕೆ ಇಡಲಾಗಿದೆ. ಮೊದಲ ಪಾರ್ಟ್​ಗೆ ‘ಸಲಾರ್: ಸೀಸ್​ಫೈರ್​’ ಎನ್ನುವ ಶೀರ್ಷಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Sat, 23 December 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ