AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ ಪಾರ್ಟ್​ 2’ಗೆ ಆಗಿಲ್ಲ ಶೂಟಿಂಗ್; ಈ ಸಿನಿಮಾ ಬಗೆಗಿನ ಸಾಧ್ಯಾಸಾಧ್ಯತೆಗಳೇನು?

ದೊಡ್ಡ ಟ್ವಿಸ್ಟ್​ನೊಂದಿಗೆ ಮೊದಲ ಪಾರ್ಟ್ ಅಂತ್ಯಗೊಳಿಸಿದ್ದಾರೆ ಪ್ರಶಾಂತ್ ನೀಲ್. ಹೀಗಾಗಿ, ಎರಡನೇ ಪಾರ್ಟ್ ಬಗ್ಗೆ ಕುತೂಹಲ ಮೂಡಿದೆ. ಆದರೆ, ಸದ್ಯಕ್ಕಂತೂ ಈ ಸಿನಿಮಾದ ಕೆಲಸಗಳು ಆರಂಭ ಆಗುವ ಸಾಧ್ಯತೆ ಕಡಿಮೆ.

‘ಸಲಾರ್ ಪಾರ್ಟ್​ 2’ಗೆ ಆಗಿಲ್ಲ ಶೂಟಿಂಗ್; ಈ ಸಿನಿಮಾ ಬಗೆಗಿನ ಸಾಧ್ಯಾಸಾಧ್ಯತೆಗಳೇನು?
ಸಲಾರ್
ರಾಜೇಶ್ ದುಗ್ಗುಮನೆ
|

Updated on:Dec 23, 2023 | 11:54 AM

Share

ಪ್ರಶಾಂತ್ ನೀಲ್ (Prashanth Neel) ಅವರ ಶ್ರಮಕ್ಕೆ ಉತ್ತಮ ಪ್ರತಿಫಲ ಸಿಗುತ್ತಿದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ‘ಸಲಾರ್’ ಸಿನಿಮಾ ಕೂಡ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಾಕ್ಸ್ ಆಫೀಸ್ ಗಳಿಕೆ ಮೊದಲ ದಿನ 175 ಕೋಟಿ ರೂಪಾಯಿ ಆಗಿದೆ. ಈ ಚಿತ್ರದಿಂದ ಪ್ರಶಾಂತ್ ನೀಲ್ ಖ್ಯಾತಿ ಹೆಚ್ಚಿದೆ. ಅವರ ಕಾಲ್​ಶೀಟ್ ಪಡೆಯಲು ಬಾಲಿವುಡ್ ನಿರ್ಮಾಪಕರೂ ಪ್ರಯತ್ನಿಸುತ್ತಿದ್ದಾರೆ. ಸದ್ಯ ‘ಸಲಾರ್ ಪಾರ್ಟ್ 2’ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ಇನ್ನೂ ಶೂಟಿಂಗ್ ಆಗಿಲ್ಲ.

‘ಕೆಜಿಎಫ್’ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಿತ್ತು. ಮೊದಲ ಪಾರ್ಟ್ ರಿಲೀಸ್ ಆಗಿ ಮೂರುವರೆ ವರ್ಷಗಳ ಬಳಿಕ ಎರಡನೇ ಪಾರ್ಟ್ ರಿಲೀಸ್ ಆಯಿತು. ಈಗ ‘ಸಲಾರ್’ ರಿಲೀಸ್ ಆಗಿ ಹಿಟ್ ಆಗಿದೆ. ಒಂದು ದೊಡ್ಡ ಟ್ವಿಸ್ಟ್​ನೊಂದಿಗೆ ಮೊದಲ ಪಾರ್ಟ್ ಅಂತ್ಯಗೊಳಿಸಿದ್ದಾರೆ ಪ್ರಶಾಂತ್ ನೀಲ್. ಹೀಗಾಗಿ, ಎರಡನೇ ಪಾರ್ಟ್ ಬಗ್ಗೆ ಕುತೂಹಲ ಮೂಡಿದೆ. ಆದರೆ, ಸದ್ಯಕ್ಕಂತೂ ಈ ಸಿನಿಮಾದ ಕೆಲಸಗಳು ಆರಂಭ ಆಗುವ ಸಾಧ್ಯತೆ ಕಡಿಮೆ.

ಜೂನಿಯರ್ ಎನ್​ಟಿಆರ್ ಜೊತೆಗಿನ ಸಿನಿಮಾ ಕೆಲಸಗಳಲ್ಲಿ ಪ್ರಶಾಂತ್ ನೀಲ್ ಬ್ಯುಸಿ ಆಗಲಿದ್ದಾರೆ. ಸದ್ಯ ಜೂನಿಯರ್​ ಎನ್​ಟಿಆರ್ ಅವರು ‘ದೇವರ’ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ. ಇದಾದ ಬಳಿಕ ಅವರು ಪ್ರಶಾಂತ್ ನೀಲ್ ಸಿನಿಮಾ ಸೆಟ್ ಸೇರಲಿದ್ದಾರೆ. ಆ ಬಳಿಕ ಪ್ರಶಾಂತ್ ನೀಲ್ ಅವರು ಯಶ್ ಜೊತೆ ಮತ್ತೊಂದು ಸಿನಿಮಾ ಮಾಡಬೇಕಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಸಲಾರ್’ ಪೈರಸಿ ತಡೆಯಲು ‘ಹೊಂಬಾಳೆ ಫಿಲ್ಮ್ಸ್’ ತಂತ್ರ

ಪ್ರಭಾಸ್ ಅವರು ಸದ್ಯ ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸದ್ಯಕ್ಕಂತೂ ‘ಸಲಾರ್ 2’ ಸಿನಿಮಾ ಕೆಲಸಗಳು ಆರಂಭ ಆಗುವುದಿಲ್ಲ. ‘ಸಲಾರ್’ ಹಿಟ್ ಆಗಿರುವುದರಿಂದ ಇಂದಲ್ಲ ನಾಳೆ ‘ಸಲಾರ್ 2’ ಸೆಟ್ಟೇರಲಿದೆ ಅನ್ನೋದು ಅಭಿಮಾನಿಗಳ ನಂಬಿಕೆ. ಕೆಲವು ವರದಿಗಳ ಪ್ರಕಾರ ‘ಸಲಾರ್ 2’ ಶೂಟ್ ಪೂರ್ಣಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಎರಡನೇ ಭಾಗಕ್ಕೆ ‘ಸಲಾರ್: ಶೌರ್ಯಂಗ ಪರ್ವಂ’ ಎಂದು ಶೀರ್ಷಿಕೆ ಇಡಲಾಗಿದೆ. ಮೊದಲ ಪಾರ್ಟ್​ಗೆ ‘ಸಲಾರ್: ಸೀಸ್​ಫೈರ್​’ ಎನ್ನುವ ಶೀರ್ಷಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Sat, 23 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ